“ಮಹಾನುಭಾವ ನೀನಯ್ಯಾ..” ಅಪ್ಪುವಿಗೆ ಗೀತೆ ಅರ್ಪಣೆ


Team Udayavani, Mar 12, 2022, 10:59 AM IST

sridhar sambram

ಒಂದೆಡೆ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಅಭಿಮಾನಿಗಳು ಥಿಯೇಟರ್‌ ನಲ್ಲಿ “ಜೇಮ್ಸ್‌’ ಅನ್ನು ಸ್ವಾಗತಿಸಲು, ಮತ್ತೂಂದೆಡೆ ಪವರ್‌ಸ್ಟಾರ್‌ ಜನ್ಮದಿನವನ್ನು ಸಂಭ್ರಮಿಸಲು ಒಟ್ಟಾಗಿತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇವೆಲ್ಲದರ ನಡುವೆಯೇ ಭಾರತೀಯ ಚಿತ್ರರಂಗದ ನಾಲ್ವರು ಪ್ರಖ್ಯಾತ ಗಾಯಕರು, ಪುನೀತ್‌ ರಾಜಕುಮಾರ್‌ ಜನ್ಮದಿನದ ಪ್ರಯುಕ್ತ ತಮ್ಮ ಗಾಯನದ ಮೂಲಕ ಅಪ್ಪು ಅವರಿಗೆ ಗೀತ ನಮನ ಸಲ್ಲಿಸಲಿದ್ದಾರೆ.

ಹೌದು, ಪುನೀತ್‌ ರಾಜಕುಮಾರ್‌ ಜನ್ಮದಿನದ ಅಂಗವಾಗಿ ಇದೇ ಮಾ. 15ಕ್ಕೆ “ಮಹಾನುಭಾವ ನೀನಯ್ಯಾ…’ ಎಂಬ ಹೆಸರಿನಲ್ಲಿ ಮ್ಯೂಸಿಕ್‌ ವಿಡಿಯೋ ಸಾಂಗ್‌ ಬಿಡುಗಡೆಯಾಗುತ್ತಿದ್ದು, ಭಾರತೀಯ ಚಿತ್ರರಂಗದ ನಾಲ್ವರು ಪ್ರಖ್ಯಾತ ಗಾಯಕರಾದ ಸೋನು ನೀಗಂ, ಕೈಲಾಶ್‌ ಖೇರ್‌, ಶಂಕರ್‌ ಮಹಾದೇವನ್‌, ವಿಜಯ ಪ್ರಕಾಶ್‌ ಈ ಹಾಡಿಗೆ ಧ್ವನಿಯಾಗುವ ಮೂಲಕ ಪುನೀತ್‌ ಗುಣಗಾನ ಮಾಡಿದ್ದಾರೆ.

“ಮನೆಗೆ ಒಬ್ಬ ನಿನ್ನಂಥವನು ಇರಬೇಕು…’ ಎಂಬ ಸಾಲು ಗಳಿಂದ ಶುರುವಾಗುವ ಈ ಗೀತೆಗೆ ನಿರ್ದೇಶಕ ಕಾಂತ ಕನ್ನಲ್ಲಿ ಗೀತ ಸಾಹಿತ್ಯ ರಚಿಸಿದ್ದಾರೆ. ಶ್ರೀಧರ್‌ ವಿ. ಸಂಭ್ರಮ್‌ ಈ ವಿಡಿಯೋ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ.

ಪುನೀತ್‌ ರಾಜಕುಮಾರ್‌ ಅವರ ಅಪ್ಪಟ ಅಭಿಮಾನಿಯಾಗಿರುವ ಸುನೀಲ್‌ ಬಿ. ಎನ್‌ ಈ ಮ್ಯೂಸಿಕ್‌ ವಿಡಿಯೋ ಸಾಂಗ್‌ ನಿರ್ಮಿಸಿದ್ದಾರೆ. ಈ ವಿಡಿಯೋ ಹಾಡಿನಲ್ಲಿ ನಾಲ್ಕು ಗಾಯಕರ ಗಾಯನದ ಜೊತೆಗೆ ಅಪ್ಪು ಅವರ ಬದುಕಿನ ಅಪರೂಪದ ಕ್ಷಣಗಳನ್ನು ತೋರಿಸಲಾಗಿದೆ. ಕಾಂತ ಕನ್ನಲ್ಲಿ ಅವರ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ ಈ ಗೀತೆ ತೆರೆಮೇಲೆ ಮೂಡಿಬಂದಿದೆ. ಪುನೀತ್‌ ರಾಜಕುಮಾರ್‌ ಅವರ ಮೇಲಿನ ಪ್ರೀತಿ ಮತ್ತು ಅಭಿಮಾನದಿಂದಾಗಿ ನಿರ್ಮಿಸುತ್ತಿರುವ ಸುಮಾರು 4 ನಿಮಿಷ ಅವಧಿಯ “ಮಹಾನುಭಾವ ನೀನಯ್ಯಾ…’ ಮ್ಯೂಸಿಕ್‌ ವಿಡಿಯೋ ಹಾಡಿಗೆ ಸೋನು ನೀಗಂ, ಕೈಲಾಶ್‌ ಖೇರ್‌, ಶಂಕರ್‌ ಮಹಾದೇವನ್‌, ವಿಜಯ ಪ್ರಕಾಶ್‌ ನಾಲ್ವರು ಗಾಯಕರೂ ಕೂಡ ಯಾವುದೇ ಸಂಭಾವನೆ ಪಡೆಯದೆ ಹಾಡಿಗೆ ಧ್ವನಿಯಾಗಿರುವುದು ಮತ್ತೂಂದು ವಿಶೇಷ.

ಇದನ್ನೂ ಓದಿ:‘ಜೇಮ್ಸ್‌’ ರಿಲೀಸ್‌ ಗೆ ಕೌಂಟ್‌ಡೌನ್‌

ಈ ಬಗ್ಗೆ ಮಾತನಾಡುವ ಸಂಗೀತ ನಿರ್ದೇಶಕ ಶ್ರೀಧರ್‌ ವಿ. ಸಂಭ್ರಮ್‌, “ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ನಾಲ್ವರು ಪ್ರಖ್ಯಾತ ಗಾಯಕರು ಒಬ್ಬ ಸೂಪರ್‌ ಸ್ಟಾರ್‌ ನಟನನ್ನು ಸ್ಮರಿಸಿ ಹಾಡಿರುವ ಹಾಡು ಇದಾಗಿದೆ. ಪುನೀತ್‌ ರಾಜಕುಮಾರ್‌ ಮೇಲಿನ ಪ್ರೀತಿಯಿಂದ ಯಾರೊಬ್ಬರೂ ಸಂಭಾವನೆ ಪಡೆಯದೇ ಈ ಗೀತೆಗೆ ಧ್ವನಿಯಾಗಿದ್ದಾರೆ. ಇತರ ತಂತ್ರಜ್ಞರು ಕೂಡ ಪುನೀತ್‌ ರಾಜಕುಮಾರ್‌ ಅವರಿಗೆ ಗೌರವಾರ್ಥವಾಗಿ ಈ ಹಾಡಿಗೆ ಕೆಲಸ ಮಾಡಿದ್ದಾರೆ. ಸುಮಾರು ಒಂದು ತಿಂಗಳ ಪರಿಶ್ರಮದ ಬಳಿಕ ಈ ಹಾಡು ಸಿದ್ಧವಾಗಿದೆ. ಈ ಕಾರ್ಯಕ್ಕೆ ಅನೇಕ ಅಭಿಮಾನಿಗಳು ಕೈ ಜೋಡಿಸುತ್ತಿದ್ದಾರೆ. ಈ ಹಾಡಿನಿಂದ ಬರುವ ಹಣವನ್ನು ಅಪ್ಪು ಅವರ ಸಾಮಾಜಿಕ ಕೆಲಸಗಳಿಗೆ ವಿನಿಯೋಗಿಸಲು ನಿರ್ಧರಿಸಲಾಗಿದೆ’ ಎಂದಿದ್ದಾರೆ.

ಅಂದಹಾಗೆ, “ಮಹಾನುಭಾವ ನೀನಯ್ಯಾ…’ ಮ್ಯೂಸಿಕ್‌ ವಿಡಿಯೋ ಹಾಡು ಮಾರ್ಚ್‌. 15ರಂದು “ಸಂಭ್ರಮ್‌ ಸ್ಟುಡಿಯೋಸ್‌’ ಯು-ಟ್ಯೂಬ್‌ ಮ್ಯೂಸಿಕ್‌ ಚಾನೆಲ್‌ನಲ್ಲಿ ಬಿಡುಗಡೆಯಾಗುತ್ತಿದೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.