ಸೋನು ಈಗ ತನಿಖಾಧಿಕಾರಿ


Team Udayavani, Oct 15, 2018, 11:36 AM IST

sonu-61.jpg

ಕಾಲೇಜ್‌ ಹುಡುಗಿಯಾಗಿ, ಗಯ್ಯಾಳಿಯಾಗಿ, ಟೆಕ್ಕಿಯಾಗಿ ಹಲವು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಸೋನು ಗೌಡ ಇದೇ ಮೊದಲ ಬಾರಿಗೆ ತನಿಖಾಧಿಕಾರಿಯಾಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಇವತ್ತಿನ ತಂತ್ರಜ್ಞಾನದ ದುರುಪಯೋಗ.., ಅದರಿಂದಾಗುವ ಪರಿಣಾಮಗಳು.., ಅದನ್ನು ಪತ್ತೆಹಚ್ಚಿ, ನಿಯಂತ್ರಿಸುವುದು.., ಹೀಗೆ ಹಲವು ಸಂಗತಿಗಳ ಸುತ್ತ “ರೆಡ್‌’ ಚಿತ್ರ ನಡೆಯಲಿದೆ. ಚಿತ್ರದ ಬಗ್ಗೆ ಮಾತನಾಡಿರುವ ಸೋನುಗೌಡ, “ಮೊದಲ ಬಾರಿಗೆ ಈ ಥರದ ಪಾತ್ರವೊಂದು ಸಿಗುತ್ತಿರುವುದಕ್ಕೆ ಖುಷಿಯಿದೆ.

ನಾವು ಅನುಭವಿಸುತ್ತಿದ್ದರೂ, ಕಣ್ಣಿಗೆ ಕಂಡರೂ ಕೆಲವೊಮ್ಮೆ ನಮ್ಮ ಸುತ್ತಲಿನ ಸಮಸ್ಯೆಗಳನ್ನು ಹೇಳಿಕೊಳ್ಳಲಾಗುವುದಿಲ್ಲ. ಅಂತಹ ಸಮಸ್ಯೆಗಳನ್ನು ನಾವೇ ಹೇಗೆ ಬಗೆಹರಿಸಿಕೊಳ್ಳಬೇಕು ಎಂಬುದನ್ನು ಈ ಸಿನಿಮಾ ಹೇಳಲಿದೆ. ಕ್ರೈಂ-ಥ್ರಿಲ್ಲರ್‌ ಜಾನರ್‌ ಶೈಲಿಯಲ್ಲಿ ನಡೆಯುವ ಈ ಸಿನಿಮಾದಲ್ಲಿ ನಾನು ಅಂಡರ್‌ ಕವರ್‌ ಇನ್ವೆಸ್ಟಿಗೇಟಿಂಗ್‌ ಆಫೀಸರ್‌ ಆಗಿ, ಸಾಮಾನ್ಯ ಹುಡುಗಿಯಾಗಿ ಎರಡು ಶೇಡ್‌ನ‌ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ.

“ರೆಡ್‌’ ಅನ್ನೋದು ಸಿನಿಮಾದಲ್ಲಿ ಆಪರೇಷನ್‌ ಕೋಡ್‌. ಆಪರೇಷನ್‌ “ರೆಡ್‌’ನಲ್ಲಿ ಹೇಗೆ ಸಮಸ್ಯೆಗಳನ್ನು ಪರಿಹಾರ ಸಿಗುತ್ತದೆ ಎನ್ನುವುದೇ ಚಿತ್ರದ ಕಥೆ. ಟೆಕ್ನಾಲಜಿ ಯುಗದಲ್ಲಿ ಮನುಷ್ಯ ಹೇಗೆ ತನ್ನನ್ನು ಕಳೆದುಕೊಂಡಿದ್ದೇನೆ. ಹಣದ ಹಿಂದೆ ಹೋದರೆ, ಕ್ರಿಯೇಟಿವಿಟಿ ಹೇಗೆ ಹಾಳಾಗುತ್ತದೆ ಎನ್ನುವುದನ್ನು ಸಿನಿಮಾ ಚರ್ಚಿಸುತ್ತದೆ. ಕ್ರೈಂ-ಥ್ರಿಲ್ಲರ್‌ ಸಿನಿಮಾವಾದ್ರೂ, ಇದರಲ್ಲಿ ಆ್ಯಕ್ಷನ್‌ ಇದೆ, ರೊಮ್ಯಾನ್ಸ್‌ ಇದೆ.

ಸಿನಿಮಾದ ಬಗ್ಗೆ ನಾನು ಕೂಡ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇನೆ’ ಎನ್ನುತ್ತಾರೆ ಸೋನು. ಅಂದಹಾಗೆ, ಇದೇ 19ರಂದು “ರೆಡ್‌’ ಚಿತ್ರ ಸೆಟ್ಟೇರುತ್ತಿದೆ. ಜಗ್ಗೇಶ್‌ ಅಭಿನಯದ “8ಎಂಎಂ’ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳಿದ್ದ ಹರಿಕೃಷ್ಣ  ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.  “ಪುಟ್ಟಗೌರಿ ಮದುವೆ’ ಧಾರಾವಾಹಿಯ ರಕ್ಷಿತ್‌ ಚಿತ್ರದಲ್ಲಿ ಸೋನುಗೌಡಗೆ ನಾಯಕನಾಗಿ ಜೋಡಿಯಾಗುತ್ತಿದ್ದಾರೆ.

ಅತುಲ್‌ ಕುಲಕರ್ಣಿ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಜ್ಯೂಡಾ ಸ್ಯಾಂಡಿ ಸಂಗೀತ, ಸಂದೀಪ್‌ ಛಾಯಾಗ್ರಹಣವಿದೆ. ಉಳಿದಂತೆ ಚಿತ್ರದ ಇತರ ಕಲಾವಿದರು, ತಂತ್ರಜ್ಞರ ಆಯ್ಕೆ ಕೊನೆ ಹಂತದಲ್ಲಿದ್ದು, ಮುಹೂರ್ತದ ವೇಳೆಗೆ ಎಲ್ಲವೂ ಅಂತಿಮವಾಗುವ ಸಾಧ್ಯತೆ ಇದೆ. ಸಕಲೇಶಪುರ , ಕೊಡಗು, ಬೆಂಗಳೂರು ಸುತ್ತಮುತ್ತ ಚಿತ್ರದ ಶೂಟಿಂಗ್‌ ನಡೆಯಲಿದ್ದು, ಮುಂದಿನ ಫೆಬ್ರವರಿ ವೇಳೆಗೆ “ರೆಡ್‌’ ತೆರೆಗೆ ಬರುವ ಯೋಜನೆಯಲ್ಲಿದೆ.  

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.