ತೆರೆಗೆ ಬಂತು ಸೋನು ಸೂದ್ ನಟನೆಯ ‘ಶ್ರೀಮಂತ’


Team Udayavani, May 19, 2023, 11:45 AM IST

sonu sood’s Kannada movie srimantha released

ಬಾಲಿವುಡ್‌ ನಟ ಸೋನು ಸೂದ್‌ ಕನ್ನಡದ “ಶ್ರೀಮಂತ’ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿರುವುದು ನಿಮಗೆ ಗೊತ್ತಿರಬಹುದು. ಎಲ್ಲ ಅಂದುಕೊಂಡಂತೆ ನಡೆದಿದ್ದರೆ, ಇದೇ ಏಪ್ರಿಲ್‌ 14 ರಂದು “ಶ್ರೀಮಂತ’ ಸಿನಿಮಾ ಬಿಡುಗಡೆಯಾಗಿ ತೆರೆಗೆ ಬರಬೇಕಿತ್ತು. ಆದರೆ ಆ ವೇಳೆ ಜಾರಿಯಲ್ಲಿರುವ ಚುನಾವಣಾ ಅಬ್ಬರ ಜೋರಾಗಿದ್ದರಿಂದ, ಚಿತ್ರತಂಡ ತಮ್ಮ ಸಿನಿಮಾದ ಬಿಡುಗಡೆಯನ್ನು ಕೆಲ ಕಾಲ ಮುಂದೂಡಿಕೊಂಡಿತ್ತು. ಇದೀಗ ಚುನಾವಣೆಯ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಚಿತ್ರತಂಡ ಇಂದು (ಮೇ. 19) “ಶ್ರೀಮಂತ’ ಸಿನಿಮಾವನ್ನು ತೆರೆಗೆ ತರುತ್ತಿದೆ.

“ಗೋಲ್ಡನ್‌ ರೈನ್‌ ಮೂವೀಸ್‌’ ಮತ್ತು “ಅಣ್ಣ ಟಾಕೀಸ್‌’ ಬ್ಯಾನರಿನಲ್ಲಿ ನಿರ್ಮಾಣವಾಗಿರುವ “ಶ್ರೀಮಂತ’ ಸಿನಿಮಾದಲ್ಲಿ ಸೋನು ಸೂದ್‌ ಅವರೊಂದಿಗೆ ಯುವನಟ ಕ್ರಾಂತಿ, ವೈಷ್ಣವಿ ಪಟುವರ್ಧನ್‌, ವೈಷ್ಣವಿ ಚಂದ್ರನ್‌ ಮೆನನ್‌, ಗಿರೀಶ್‌ ಶಿವಣ್ಣ, ಕುರಿರಂಗ, ಮಂಜುನಾಥ್‌ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಬರೋಬ್ಬರಿ ಎಂಟು ಹಾಡುಗಳಿದ್ದು, ಹಂಸಲೇಖ ಸಂಗೀತ ಸಂಯೋಜನೆಯಿದೆ. “ಶ್ರೀಮಂತ’ ಸಿನಿಮಾಕ್ಕೆ ಹಾಸನ್‌ ರಮೇಶ್‌ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಇನ್ನು ಸಿನಿಮಾದ ಬಿಡುಗಡೆಯ ಬಗ್ಗೆ ಮಾತನಾಡಿರುವ ನಿರ್ದೇಶಕ ಹಾಸನ್‌ ರಮೇಶ್‌, “ಇದೊಂದು ಅಪ್ಪಟ ರೈತರ ಕುರಿತಾಗಿ ಮಾಡಿರುವ ಸಿನಿಮಾ. ಹಳ್ಳಿಯ ಸೊಗಡು, ರೈತರ ಜೀವನದ ಏಳು-ಬೀಳುಗಳನ್ನು ಸಿನಿಮಾದಲ್ಲಿ ತೆರೆಮೇಲೆ ತರಲಾಗಿದೆ. ನಮ್ಮ ದೇಶದಲ್ಲಿ ಶೇ. 80ರಷ್ಟು ಜನ ರೈತರೇ ಆಗಿದ್ದಾರೆ. ಈ ಥಾಟ್‌ ಇಟ್ಟುಕೊಂಡು ಮಾಡಿರುವ ಸಂಗೀತಮಯ ಚಿತ್ರವಿದು. ಕಥೆಯಲ್ಲಿ ತುಂಬಾ ಮಜಲುಗಳಿವೆ. ಈಗಾಗಲೇ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪ್ರಚಾರ ಮಾಡಲಾಗಿದೆ. ನಮ್ಮ ಸಿನಿಮಾದಲ್ಲಿ ಕೇವಲ ರಾಜಕಾರಣಿಗಳು ಮಾತ್ರವಲ್ಲದೆ ಅನೇಕ ಸಾಧಕರು, ಸ್ವಾಮಿಜಿಗಳು, ಸಮಾಜ ಸೇವಕರು, ರೈತ ಸಂಘಟನೆಗಳು ಕೈಜೋಡಿಸಿದ್ದಾರೆ. ಪ್ರತಿಯೊಬ್ಬರಿಗೂ ತಲುಪುವಂತ ವಿಷಯ ಈ ಸಿನಿಮಾದಲ್ಲಿದೆ’ ಎಂದು ವಿವರಣೆ ನೀಡಿದರು.

“ಶ್ರೀಮಂತ’ ಸಿನಿಮಾದಲ್ಲಿ ಮಾಜಿ ಪ್ರಧಾನಿ ಹೆಚ್‌. ಡಿ ದೇವೇಗೌಡ, ಮಾಜಿ ಸಿಎಂ ಬಿ. ಎಸ್‌ ಯಡಿಯೂರಪ್ಪ, ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ ಹೀಗೆ ಬೇರೆ ಬೇರೆ ಪಕ್ಷಗಳ ಅನೇಕ ರಾಜಕಾರಣಿಗಳು ಕಾಣಿಸಿಕೊಂಡಿದ್ದಾರೆ. ನಮ್ಮ ಯೋಜನೆಯಂತೆ ಏಪ್ರಿಲ್‌ 14ರಂದು ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಚುನಾವಣೆ ಸಂದರ್ಭವಾಗಿರುವುದರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿತ್ತು. ಈ ವೇಳೆ ಬೇರೆ ಬೇರೆ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಪ್ರಮುಖ ರಾಜಕಾರಣಿಗಳು ಸಿನಿಮಾದಲ್ಲಿ ಕಾಣಿಸಿಕೊಂಡಿರುವುದರಿಂದ, ಸಿನಿಮಾ ಬಿಡುಗಡೆ ಮಾಡಿದರೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಗುರಿಯಾಗಬಹುದು ಎಂಬ ಆತಂಕದಲ್ಲಿ ನಮ್ಮ ಸಿನಿಮಾವನ್ನು ಚುನಾವಣೆ ಫ‌ಲಿತಾಂಶ ಬಂದ ನಂತರ ಬಿಡುಗಡೆ ಮಾಡಲು ನಿರ್ಧರಿಸಿದೆವು’ ಎನ್ನುವುದು ನಿರ್ದೇಶಕರ ಮಾತು

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.