ಎಸ್ಪಿಬಿಯ ಆಸ್ಪತ್ರೆ ಖರ್ಚು ಪಾವತಿಯ ಗಾಳಿಸುದ್ದಿ: ಪುತ್ರ ಚರಣ್‌ ಅಸಮಾಧಾನ


Team Udayavani, Sep 28, 2020, 9:36 PM IST

ಎಸ್ಪಿಬಿಯ ಆಸ್ಪತ್ರೆ ಖರ್ಚು ಪಾವತಿಯ ಗಾಳಿಸುದ್ದಿ: ಪುತ್ರ ಚರಣ್‌ ಅಸಮಾಧಾನ

ಚೆನ್ನೈ: ಎಸ್ಪಿಬಿ ಅವರ ಆಸ್ಪತ್ರೆ ಬಿಲ್‌ ಪಾವತಿಯ ಕುರಿತಾಗಿ ಹರಿದಾಡುತ್ತಿದ್ದ ಗಾಳಿ ಸುದ್ದಿಯ ಕುರಿತು ಪುತ್ರ ಚರಣ್‌ ಸೋಶಿಯಲ್‌ ಮೀಡಿಯಾದಲ್ಲಿ ಲೈವ್‌ ಬರುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಎಸ್ಪಿಬಿ ಅವರ ಚಿಕಿತ್ಸೆಗೆ ತಗುಲಿದ ಖರ್ಚನ್ನು ಭರಿಸಲು ತಮಿಳುನಾಡು ಸರಕಾರ ನಿರಾಕರಿಸಿದ್ದು, ಅದನ್ನು ಬಜೆಪಿ ಮುಖಂಡ, ಉಪರಾಷ್ಟ್ರಪತಿ ವ್ಯಂಕಯ್ಯ ನಾಯ್ಡು ಭರಿಸಿದ್ದಾರೆಂಬ ಗಾಳಿಸುದ್ದಿಯೊಂದು ಸಾಮಾಜಿಕ ಜಾಲತಣಗಳಲ್ಲಿ ಹರಿದಾಡಿದೆ. ಈ ಕುರಿತು ವೀಡಿಯೋದಲ್ಲಿ ಪ್ರತಿಕ್ರಿಯಿಸಿರುವ ಪುತ್ರ ಚರಣ್‌ ಗಾಳಿಸುದ್ದಿ ಹಬ್ಬಿಸದಂತೆ ವಿನಂತಿಸಿದ್ದಾರೆ.

ಎಸ್ಪಿಬಿ ಅವರ ಭಿಮಾನಿಗಳು ಈ ರೀತಿಯ ಕೆಲಸಕ್ಕೆ ಕೈ ಹಾಕುವುದಿಲ್ಲ. ಈ ಬಗ್ಗೆ ಎಂಜಿಎಂ ಹೆಲ್ತ್‌ಕೇರ್‌ ಹಾಸ್ಪಿಟಲ್‌ನ ವೈದ್ಯರೊಂದಿಗೆ ಪತ್ರಿಕಾಗೋಷ್ಠಿ ನಡೆಸುವುದಾಗಿ ಅವರು ಹೇಳಿಕೊಂಡಿದ್ದಾರೆ.

“ವೈದ್ಯಕೀಯ ಬಿಲ್‌ ಪಾವತಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಗಾಳಿಸುದ್ದಿ ಹರಡಲಾಗುತ್ತಿದೆ. ಬಿಲ್‌ನ ಸ್ವಲ್ಪ ಮೊತ್ತವನ್ನು ನಾನು (ಚರಣ್‌) ಪಾವತಿಸಿದ್ದು, ಉಳಿದ ಮೊತ್ತವನ್ನು ಭರಿಸಲು ರಾಜ್ಯ ಸರಕಾರವನ್ನು ಕೇಳಿದಾಗ ಅವರು ನಿರಾಕರಿಸಿದರು. ಅಲ್ಲಿಂದ ನಾನು ವ್ಯಂಕಯ್ಯ ನಾಯ್ಡು ಅವರನ್ನು ವಿನಂತಿಸಿಕೊಂಡಾಗ, ಅವರು ಕೂಡಲೆ ಖರ್ಚನ್ನು ಪಾವತಿಸಿದರು. ಬಿಲ್‌ ಪಾವತಿಯಾಗದೇ ನಮ್ಮ ತಂದೆಯವರ ಶವಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲು ಆಸ್ಪತ್ರೆಯವರು ನಿರಾಕರಿಸಿದ್ದಾರೆ’ ಎಂಬ ಗಾಳಿಸುದ್ದಿ ಹರಿಡಾಡುತ್ತಿದೆ. ಇದೆಲ್ಲ ಶುದ್ಧ ಸುಳ್ಳು ಎಂದು ಚರಣ್‌ ಅವರು ಲೈವ್‌ನಲ್ಲಿ ತಿಳಿಸಿದ್ದಾರೆ.

“ಇಂತಹ ಸುದ್ದಿಯಿಂದ ಸಂಬಂಧಪಟ್ಟವರಿಗೆ ಎಷ್ಟು ಮನನೋಯಿಸುತ್ತದೆ ಮತ್ತು ಇದು ಎಷ್ಟು ಅಪರಾಧಾತ್ಮಕ ಸುದ್ದಿ ಎಂಬುದು ನಿಮಗೆ ತಿಳಿದಿದೆಯೇ. ಇಂತಹ ವ್ಯಕ್ತಿಗಳು ಇಂದಿಗೂ ಸಮಾಜದಲ್ಲಿರುವುದು ನಿರಾಶಾದಾಯಕ ಸಂಗತಿ. ಇವರು ಎಸ್ಪಿಬಿಯ ಅಭಿಮಾನಿಗಳಾಗಿರಲು ಸಾಧ್ಯವೇ ಇಲ್ಲ. ಏಕೆಂದರೆ ಎಸ್ಪಿಬಿಗೆ ಇಂತಹದ್ದು ಇಷ್ಟವಿರಲಿಲ್ಲ. ಅವರು ಜನರನ್ನು ನೋಯಿಸುವವರಲ್ಲ. ಇಂತಹ ವ್ಯಕ್ತಿಗಳನ್ನೂ ಕ್ಷಮಿಸುತ್ತಿದ್ದ ವ್ಯಕ್ತಿ ಅವರು. ನಾನೂ ಇಂತಹ ಮಹಾನುಭಾವನನ್ನು ಕ್ಷಮಿಸುತ್ತಿದ್ದೇನೆ. ಅವರಿನ್ನೂ ಬೆಳೆಯಬೇಕು, ಸರಿಯಾದ ತಿಳುವಳಿಕೆ ಹೊಂದಿ ವಿವೇಚನಾತ್ಮಕ ಕೆಲಸ ಮಾಡಲಿ’ ಎಂದಿದ್ದಾರೆ.

ಎಂಜಿಎಂ ಹೆಲ್ತ್‌ಕೇರ್‌ಗೆ ಧನ್ಯವಾದ ಸಲ್ಲಿಕೆ
ವೀಡಿಯೋದಲ್ಲಿ ಚರಣ್‌ ಅವರು ಎಂಜಿಎಂ ಹೆಲ್ತ್‌ಕೇರ್‌ ಹಾಸ್ಪಿಟಲ್‌ಗೆ ಧನ್ಯವಾದ ಸಲ್ಲಿಸಿದ್ದಾರೆ. ಎಂಜಿಎಂ ಹೆಲ್ತ್‌ಕೇರ್‌ನವರು ನಮಗಾಗಿ ಮತ್ತು ತಂದೆಯವರ ಅನಾರೋಗ್ಯದ ಸಂದರ್ಭ ಅವರನ್ನು ನೋಡಿಕೊಂಡ ರೀತಿಗೆ, ಕಾಳಜಿಗೆ ನಮ್ಮ ಕುಟುಂಬ ಕೃತಜ್ಞವಾಗಿದೆ. ತಂದೆಯವರ ಚಿಕಿತ್ಸೆಗೆ ಎಂಜಿಎಂನವರು ಅಪೋಲೋದ ಸಹಾಯ ಕೋರಿದಾಗ ಕೂಡಲೆ ಸ್ಪಂದಿಸಿದ ಅವರೆಲ್ಲರು ಶ್ರೇಷ್ಠ ವ್ಯಕ್ತಿಗಳು. ಈ ರೀತಿ ಸುಳ್ಳು ಸುದ್ದಿ ಹರಡುತ್ತಿರುವ ನೀವು ಕೂಡ ಶ್ರೇಷ್ಠ ವ್ಯಕ್ತಿಗಳಾಗಬಹುದು. ಶ್ರೇಷ್ಠತೆಯನ್ನು ಅನುಕರಿಸಲು ಪ್ರಯತ್ನಿಸಿ ಎಂದು ಸುಳ್ಳು ಸುದ್ದಿ ಹರಡಿದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗಾನ ಗಾರುಡಿ ಎಸ್ಪಿಬಿ ಅವರು ಸೆಪ್ಟಂಬರ್‌ 25ರಂದು ಚೆನ್ನೈನ ಎಂಜಿಎಂ ಹೆಲ್ತ್‌ಕೇರ್‌ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.