‘bachelor party ಯಲ್ಲಿ ವಿಶೇಷ ಅತಿಥಿಗಳು!; ಜ.26ರಂದು ಚಿತ್ರ ರಿಲೀಸ್


Team Udayavani, Jan 10, 2024, 11:41 AM IST

bachelor party

ರಕ್ಷಿತ್‌ ಶೆಟ್ಟಿ ನಟಿಸಿ, ನಿರ್ಮಿಸಿದ್ದ “ಕಿರಿಕ್‌ ಪಾರ್ಟಿ’ ಸಿನಿಮಾ ತೆರೆಕಂಡು ಏಳು ವರ್ಷಗಳಾಗಿವೆ. ಇದೀಗ ಅದೇ ಹುಮ್ಮಸ್ಸಿನಲ್ಲಿ ರಕ್ಷಿತ್‌ ಶೆಟ್ಟಿ ಬ್ಯಾನರ್‌ ಅಡಿಯಲ್ಲಿ “ಬ್ಯಾಚುಲರ್‌ ಪಾರ್ಟಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.

ಅಂದಹಾಗೆ, “ಬ್ಯಾಚುಲರ್‌ ಪಾರ್ಟಿ’ ಸಿನಿಮಾದಲ್ಲಿ ದಿಗಂತ್‌, ಯೋಗಿ ಹಾಗೂ ಅಚ್ಯುತ್‌ ಕುಮಾರ್‌ ಪ್ರಮುಖ ಭೂಮಿಕೆಯಲ್ಲಿ ಅಭಿನಯಿಸಿದ್ದು, ರಕ್ಷಿತ್‌ ಶೆಟ್ಟಿ ಅವರ “ಕಿರಿಕ್‌ ಪಾರ್ಟಿ’ ಸೇರಿದಂತೆ ಹಲವಾರು ಸಿನಿಮಾಗಳಿಗೆ ಕೆಲಸ ಮಾಡಿದ ಅನುಭವವಿರುವ ಅಭಿಜಿತ್‌ ಮಹೇಶ್‌ ಈ ಸಿನಿಮಾಕ್ಕೆ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ.

ಇತ್ತೀಚೆಗಷ್ಟೇ ಹರಿಬಿಟ್ಟರುವ “ಬ್ಯಾಚುಲರ್‌ ಪಾರ್ಟಿ’ ಸಿನಿಮಾದ ಪೋಸ್ಟರ್‌, ಹಾಡು ಹಾಗೂ ಟೀಸರ್‌ಗಳು ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿದ್ದು, ಇದೇ ಖುಷಿಯಲ್ಲಿರುವ ಚಿತ್ರತಂಡ ಶೀಘ್ರದಲ್ಲೇ “ಬ್ಯಾಚುಲರ್‌ ಪಾರ್ಟಿ’ ಸಿನಿಮಾದ ಟ್ರೇಲರ್‌ ರಿಲೀಸ್‌ ಮಾಡುವ ಆಲೋಚನೆಯಲ್ಲಿದೆ.

ಇನ್ನೊಂದು ವಿಶೇಷವೆಂದರೆ, “ಬ್ಯಾಚುಲರ್‌ ಪಾರ್ಟಿ’ ಸಿನಿಮಾದಲ್ಲಿ ಅನೇಕ ಖ್ಯಾತನಾಮ ಕಲಾವಿದರು ಅತಿಥಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ನಿರ್ದೇಶಕ ಅಭಿಜಿತ್‌ ಮಹೇಶ್‌, “ಬ್ಯಾಚುಲರ್‌ ಪಾರ್ಟಿ’ ಸಿನಿಮಾದಲ್ಲಿ ಅತಿಥಿ ಪಾತ್ರಕ್ಕೆ ಬಣ್ಣ ಹಚ್ಚಿರುವ ಕಲಾವಿದರ ಮಾಹಿತಿ ಹಂಚಿಕೊಂಡಿದ್ದಾರೆ. ಲೂಸಿಯಾ ಪವನ್‌ ಕುಮಾರ್‌, ಮಠ ಗುರುಪ್ರಸಾದ್‌, ನಾ. ಸೋಮೇಶ್ವರ (ಥಟ್‌ ಅಂತ ಹೇಳಿ), ಶೈನ್‌ ಶೆಟ್ಟಿ ಹಾಗೂ ವಿಕ್ಕಿಪೀಡಿಯಾ ಖ್ಯಾತಿಯ ವಿಕಾಸ್‌ ಸೇರಿದಂತೆ ಇನ್ನೂ ಹಲವರು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಪಟ್ಟಿ ನೀಡಿರುವ ಚಿತ್ರತಂಡ ಇವರೆಲ್ಲ “ಬ್ಯಾಚುಲರ್‌’ಗಳ ಜತೆ ಏನೇನು ಚಮತ್ಕಾರ ಮಾಡಲಿದ್ದಾರೆ ಎಂಬ ಗುಟ್ಟನ್ನು ಮಾತ್ರ ಬಿಟ್ಟುಕೊಟ್ಟಿಲ್ಲ.

“ಯೂಥ್‌ಫ‌ುಲ್‌ ಕಂಟೆಂಟ್‌ ಹೊಂದಿರುವ “ಬ್ಯಾಚುಲರ್‌ ಪಾರ್ಟಿ’ ಸಿನಿಮಾದಲ್ಲಿ ಸಾಕಷ್ಟು ಪಾತ್ರಗಳಿವೆ. ಪ್ರಮುಖ ಪಾತ್ರಗಳ ಜತೆಗೆ ಅತಿಥಿ ಪಾತ್ರಗಳಿಗೂ ಪ್ರಾಮುಖ್ಯತೆ ನೀಡಲಾಗಿದ್ದು, ಅದೇನು ಎಂಬುದರ ಬಗ್ಗೆ ಸದ್ಯದಲ್ಲೇ ಹರಿಬಿಡುವ ಟ್ರೇಲರ್‌ ಮೂಲಕ ಬಹಿರಂಗಪಡಿಸುವ ಆಲೋಚನೆಯಲ್ಲಿದ್ದೇವೆ’ ಎಂಬುದು ಚಿತ್ರತಂಡದ ಮಾತು.

ಬ್ಯಾಂಕಾಕ್‌ ಸೇರಿದಂತೆ ಕಣ್ಮನ ಸೆಳೆಯುವ ಸ್ಥಳಗಳಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆಸಿರುವ ಚಿತ್ರತಂಡ, ಥಿಯೇಟರ್‌ನಲ್ಲಿ ಕೂತವರನ್ನು ನಗೆಗಡಲಲ್ಲಿ ತೇಲಿಸುವ ಸಿನಿಮಾ ಇದಾಗಿದೆ ಎಂಬ ವಿಶ್ವಾಸದ ಮಾತುಗಳನ್ನಾಡುತ್ತದೆ.

“ಪರಂವಃ ಸ್ಟೂಡಿಯೋಸ್‌’ ಬ್ಯಾನರ್‌ನಲ್ಲಿ ರಕ್ಷಿತ್‌ ಶೆಟ್ಟಿ ಹಾಗೂ ಅಮಿತ್‌ ಗುಪ್ತ ಜಂಟಿಯಾಗಿ ನಿರ್ಮಿಸಿರುವ “ಬ್ಯಾಚುಲರ್‌ ಪಾರ್ಟಿ’ ಸಿನಿಮಾಕ್ಕೆ ಅರವಿಂದ್‌ ಛಾಯಾಗ್ರಹಣ, ಅರ್ಜುನ್‌ ರಾಮು ಸಂಗೀತ ನಿರ್ದೇಶನವಿದೆ. ಸದ್ಯ ಭರದಿಂದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ “ಬ್ಯಾಚುಲರ್‌ ಪಾರ್ಟಿ’ ಸಿನಿಮಾ ಇದೇ ಜನವರಿ 26ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

ಟಾಪ್ ನ್ಯೂಸ್

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.