ಶ್ರೀಲೀಲಾ ದುಬಾರಿ ಹೀರೋಯಿನ್‌

ಉದಯ್‌ ಮೆಹ್ತಾ ನಿರ್ಮಾಣದ ಬಿಗ್‌ ಬಜೆಟ್‌ ಸಿನಿಮಾ

Team Udayavani, Dec 6, 2020, 4:30 PM IST

ಶ್ರೀಲೀಲಾ ದುಬಾರಿ ಹೀರೋಯಿನ್‌

ನಟ ಧ್ರುವ ಸರ್ಜಾ ಅಭಿನಯದ ಹೊಸ ಚಿತ್ರ “ದುಬಾರಿ’ ಇತ್ತೀಚೆಗಷ್ಟೇ ಅದ್ಧೂರಿಯಾಗಿ ಸೆಟ್ಟೇರಿತ್ತು. ಸದ್ಯ “ದುಬಾರಿ’ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದ್ದು, ಇದೇ ತಿಂಗಳ ಕೊನೆಗೆ ಚಿತ್ರದ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರ ನಡುವೆಯೇ ಧ್ರುವ ಸರ್ಜಾ ಜೊತೆ “ದುಬಾರಿ’ ಚಿತ್ರದಲ್ಲಿ ನಾಯಕಿಯಾಗಿ ಯಾರು ತೆರೆಮೇಲೆ ಹೆಜ್ಜೆ ಹಾಕುತ್ತಾರೆ ಎಂಬ ಪ್ರಶ್ನೆ, ಚಿತ್ರ ಸೆಟ್ಟೇರಿದಾಗಿ ನಿಂದಲೂ ಧ್ರುವ ಅಭಿಮಾನಿಗಳನ್ನು ಕಾಡುತ್ತಿತ್ತು. ಇದೀಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. “ದುಬಾರಿ’ ಚಿತ್ರದಲ್ಲಿ ಧ್ರುವ ಸರ್ಜಾ ಅವರಿಗೆ ನಾಯಕಿಯಾಗಿ ಶ್ರೀಲೀಲಾ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

ಕಳೆದ ಕೆಲ ತಿಂಗಳಿನಿಂದ “ದುಬಾರಿ’ ನಾಯಕಿಯ ಹುಡುಕಾಟದಲ್ಲಿದ್ದ ಚಿತ್ರತಂಡ, ಕೊನೆಗೂ ಚಿತ್ರದ ನಾಯಕಿಯನ್ನು ಆಯ್ಕೆ ಮಾಡಿದೆ. ಆರಂಭದಲ್ಲಿ “ದುಬಾರಿ’ ಚಿತ್ರದ ಹೀರೋಯಿನ್‌ ಪಟ್ಟಕ್ಕೆ ದಕ್ಷಿಣ ಭಾರತದ ಬೇರೆ ಬೇರೆ ಸ್ಟಾರ್‌ ನಾಯಕಿಯರ ಹೆಸರು ಕೇಳಿ ಬಂದಿತ್ತಾದರೂ, ಅಂತಿಮವಾಗಿ ಶ್ರೀಲೀಲಾ ಮುಡಿಗೆ “ದುಬಾರಿ’ ಹೀರೋಯಿನ್‌ ಕಿರೀಟ ಒಲಿದು ಬಂದಿದೆ.

ಇದನ್ನೂ ಓದಿ : ಹಣ್ಣಾಗಿಲ್ಲ ತೋತಾಪುರಿ! : 45 ದಿನಗಳ ಚಿತ್ರೀಕರಣ ಬಾಕಿ

“ಕಿಸ್‌’ ಚಿತ್ರದ ಮೂಲಕ ನಾಯಕ ನಟಿಯಾಗಿ ಸ್ಯಾಂಡಲ್‌ ವುಡ್‌ಗೆ ಪರಿಚಯವಾಗಿದ್ದ ಶ್ರೀಲೀಲಾ ಆನಂತರ ಶ್ರೀಮುರಳಿ ಅಭಿನಯದ “ಭರಾಟೆ’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಅದಾದ ಬಳಿಕ ಎರಡು-ಮೂರು ಬಿಗ್‌ ಬಜೆಟ್‌, ಬಿಗ್‌ ಸ್ಟಾರ್ ಚಿತ್ರಗಳಲ್ಲಿ ನಾಯಕಿಯ ಪಟ್ಟಕ್ಕೆ ಶ್ರೀಲೀಲಾ ಹೆಸರು ಕೇಳಿ ಬಂದಿತ್ತಾದರೂ, ಯಾವುದೇ ಚಿತ್ರಗಳು ಅಧಿಕೃತವಾಗಿ ಶ್ರೀಲೀಲಾ ಹೆಸರನ್ನು ಅನೌನ್ಸ್‌ ಮಾಡಿರಲಿಲ್ಲ. ಇದೀಗ “ದುಬಾರಿ’ ಶ್ರೀಲೀಲಾ ನಾಯಕಿಯಾಗಿ ಅಭಿನಯಿಸುತ್ತಿರುವ ಮೂರನೇ ಚಿತ್ರವಾಗಿದ್ದು, ಚಿತ್ರತಂಡ ಅಧಿಕೃತವಾಗಿ ನಾಯಕಿಯ ಹೆಸರನ್ನು ಅನೌನ್ಸ್‌ ಮಾಡಿದೆ. ಉದಯ್‌ ಮೆಹ್ತಾ ಬ್ಯಾನರ್‌ನಡಿಯಲ್ಲಿ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ “ದುಬಾರಿ’ ಚಿತ್ರಕ್ಕೆ ನಂದ ಕಿಶೋರ್‌ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ. ಸದ್ಯ ಹೀರೋಯಿನ್‌ ಹೆಸರು ಅನೌನ್ಸ್‌ ಮಾಡಿರುವ ಚಿತ್ರತಂಡ, ಇದೇ ತಿಂಗಳಕೊನೆಗೆ ಚಿತ್ರದ ಇತರಕಲಾವಿದರು ಮತ್ತು ತಂತ್ರಜ್ಞರ ಹೆಸರನ್ನು ಬಹಿರಂಗಪಡಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.