ಭಜರಂಗಿ-2, ಸಲಗ.. ಸ್ಟಾರ್‌ ಸಿನಿಮಾಗಳ ರಿಲೀಸ್‌ಗೆ ಕೊನೆಗೂ ಡೇಟ್‌ ಫಿಕ್ಸ್


Team Udayavani, Jan 21, 2021, 9:12 AM IST

ಭಜರಂಗಿ-2, ಸಲಗ.. ಸ್ಟಾರ್‌ ಸಿನಿಮಾಗಳ ರಿಲೀಸ್‌ಗೆ ಕೊನೆಗೂ ಡೇಟ್‌ ಫಿಕ್ಸ್

ಕನ್ನಡದಲ್ಲಿ ಸಾಲಾಗಿ ರಿಲೀಸ್‌ಗೆ ರೆಡಿಯಾಗಿ ನಿಂತಿರುವ ಸ್ಟಾರ್‌ ನಟರ ಸಿನಿಮಾಗಳು ತೆರೆಗೆ ಬರೋದು ಯಾವಾಗ? ಅನೇಕ ಸ್ಟಾರ್‌ ಸಿನಿಮಾಗಳ ಬಿಡುಗಡೆ ಬಗ್ಗೆ ದಿನಕ್ಕೊಂದು ಅಂತೆ-ಕಂತೆ ಸುದ್ದಿಗಳು ಗಾಂಧಿನಗರದಲ್ಲಿ ಹರಿದಾಡುತ್ತಿರುವುದರಿಂದ, ನಿಖರವಾಗಿ ಯಾವ ಸಿನಿಮಾ ಯಾವಾಗ ಬಿಡುಗಡೆಯಾಗುತ್ತದೆ ಅನ್ನೋದು ಪ್ರೇಕ್ಷಕರಿಗೂ, ಚಿತ್ರರಂಗದ ಮಂದಿಗೂ ದೊಡ್ಡ ಪ್ರಶ್ನೆಯಾಗಿತ್ತು. ಆದರೆ ಇದೀಗ ಅದೆಲ್ಲ ಪ್ರಶ್ನೆಗಳಿಗೂ ಒಂದೇ ವೇದಿಕೆಯಲ್ಲಿ ಏಕಕಾಲಕ್ಕೆ ಉತ್ತರ ಸಿಕ್ಕಿದೆ.

ಹೌದು, ಈ ಸಂಬಂಧ ಬುಧವಾರ ಮಾಧ್ಯಮಗಳ ಮುಂದೆ ಬಂದಿದ್ದ ಬಿಡುಗಡೆಗೆ ಸಿದ್ಧವಿರುವ ಸ್ಟಾರ್‌ ಸಿನಿಮಾಗಳು ಮತ್ತು ಬಿಗ್‌ ಬಜೆಟ್‌ ಸಿನಿಮಾಗಳ ನಿರ್ಮಾಪಕರು ಅಧಿಕೃತವಾಗಿ ತಮ್ಮ ಸಿನಿಮಾದ ಬಿಡುಗಡೆಯ ದಿನಾಂಕವನ್ನು ಒಕ್ಕೊರಲಿನಿಂದ ಘೋಷಿಸಿದ್ದಾರೆ.  ಈ ಮೂಲಕ ಕಳೆದ ಮೂರ್‍ನಾಲ್ಕು ತಿಂಗಳಿನಿಂದ ಕನ್ನಡ ಚಿತ್ರರಂಗದಲ್ಲಿ ಬಿಗ್‌ ಸ್ಟಾರ್ ಸಿನಿಮಾಗಳ ಬಿಡುಗಡೆಯ ಬಗ್ಗೆ ಹರಿದಾಡುತ್ತಿದ್ದ ಎಲ್ಲ ಅಂತೆ-ಕಂತೆಗಳಿಗೆ ತೆರೆ ಬಿದ್ದಿದೆ.

ಒಟ್ಟಾರೆ ಫೆಬ್ರವರಿ ಮೊದಲ ವಾರದಿಂದ ಮೇ ಎರಡನೇ ವಾರದವರೆಗೆ ಬಿಡುಗಡೆಯಾಗಲಿರುವ ಕನ್ನಡದ ಸ್ಟಾರ್‌ ನಟರ ಮತ್ತು ಬಿಗ್‌ ಬಜೆಟ್‌ ಸಿನಿಮಾಗಳ ಬಿಡುಗಡೆಯ ದಿನಾಂಕ ಅಧಿಕೃತವಾಗಿ ಅನೌನ್ಸ್‌ ಆಗಿದ್ದು, ಚಿತ್ರರಂಗದಲ್ಲಿ ಚಟುವಟಿಕೆಗಳು ಮತ್ತಷ್ಟು ಗರಿಗೆದರಿದೆ.

ಇದನ್ನೂ ಓದಿ:ಪಂತ್‌ ಇರುವುದೇ ಹೀಗೆ, ಅಂಜದ ಗಂಡಿನ ಹಾಗೆ

ಇನ್ನು ಒಂದರ ಹಿಂದೊಂದರಂತೆ ಸ್ಟಾರ್‌ ಸಿನಿಮಾಗಳು ಬಿಡುಗಡೆಯಾಗುತ್ತಿದ್ದರೂ, ಥಿಯೇಟರ್‌ಗಳಲ್ಲಿ ಸ್ಟಾರ್‌ ವಾರ್‌ಗೆ ಕಾರಣವಾಗದಂತೆ, ಎರಡು ವಾರಗಳ ಅಂತದಲ್ಲಿ ಸ್ಟಾರ್‌ ನಟರ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಈ ಮೂಲಕ ಬಿಗ್‌ ಬಜೆಟ್‌ ಸಿನಿಮಾಗಳ ನಿರ್ಮಾಪಕರು ಸಮನ್ವಯತೆಯ ಸೂತ್ರದಂತೆ, ಬಿಡುಗಡೆಯ ತಂತ್ರ ಅನುಸರಿಸಿ ತಮ್ಮ ಸಿನಿಮಾಗಳನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದಾರೆ. ಇನ್ನು ಬಿಗ್‌ ಸ್ಟಾರ್‌ಗಳ ಸಿನಿಮಾಗಳ ಡೇಟ್‌ ನಿಗಧಿಯಾಗುತ್ತಿದ್ದಂತೆ, ತೆರೆಗೆ ಬರಲು ಸಿದ್ಧವಾಗಿರುವ ಅನೇಕ ಹೊಸಬರ ಸಿನಿಮಾಗಳು ಕೂಡ ತಮ್ಮ ಬಿಡುಗಡೆಯ ದಿನಾಂಕ ನಿಶ್ವಯಿಸಿಕೊಳ್ಳಲು ಮುಂದಾಗುತ್ತಿದ್ದು, ಸ್ಟಾರ್‌ ಸಿನಿಮಾಗಳ ನಡುವೆಯೇ ತಮ್ಮ ಅದೃಷ್ಠ ಪರೀಕ್ಷೆಗೆ ಹೊಸಬರು ಮುಂದಾಗುತ್ತಿದ್ದಾರೆ.

ಬಿಡುಗಡೆಯಾಗಲಿರುವ ಸಿನಿಮಾಗಳು ಮತ್ತು ಅವುಗಳ ದಿನಾಂಕ ಹೀಗಿದೆ

* ಫೆ. 5, ಪ್ರಜ್ವಲ್‌ ದೇವರಾಜ್‌ ಅಭಿನಯದ “ಇನ್ಸ್‌ಪೆಕ್ಟರ್‌ ವಿಕ್ರಂ’

* ಫೆ. 19, ಧ್ರುವ ಸರ್ಜಾ ಅಭಿನಯದ “ಪೊಗರು’

* ಮಾ. 11, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ “ರಾಬರ್ಟ್‌’

* ಏ. 01, ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಅಭಿನಯದ “ಯುವರತ್ನ’

* ಏ. 15, ದುನಿಯಾ ವಿಜಯ್‌ ಅಭಿನಯ, ನಿರ್ದೇಶನದ “ಸಲಗ’

* ಏ. 29, ಕಿಚ್ಚ ಸುದೀಪ್‌ ಅಭಿನಯದ “ಕೋಟಿಗೊಬ್ಬ-3′

* ಮೇ. 14 ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಅಭಿನಯದ “ಭಜರಂಗಿ-2′

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.