ನೂರರ ನಿರೀಕ್ಷೆಯಲ್ಲಿ ಸಿನಿ ಮಂದಿ: ಬಿಡುಗಡೆಗೆ ಸ್ಟಾರ್ ಸಿನಿಮಾ ರೆಡಿ
Team Udayavani, Sep 13, 2021, 9:24 AM IST
ಸಿನಿಮಾ ಮಂದಿ ಮತ್ತೂಮ್ಮೆ ಭರವಸೆಯಿಂದ ಎದುರು ನೋಡುತ್ತಿದ್ದಾರೆ. ಕಣ್ಣಲ್ಲಿ ಕನಸುಗಳು ತುಂಬಿಕೊಂಡಿವೆ. ಈ ಭರವಸೆ, ಕನಸಿಗೆ ಕಾರಣ ಶೇ 100 ಪ್ರವೇಶಾತಿ.
ಕೊರೊನಾದಿಂದಾಗಿ ಚಿತ್ರಮಂದಿರಗಳಲ್ಲಿ ಶೇ50 ಪ್ರವೇಶಾತಿಯನ್ನಷ್ಟೇ ಸರ್ಕಾರ ನೀಡಿದ್ದು, ಇನ್ನೂ ಹೌಸ್ಫುಲ್ ಪ್ರದರ್ಶನಕ್ಕೆ ಅನುಮತಿ ಕೊಟ್ಟಿಲ್ಲ. ಬಹುತೇಕ ಎಲ್ಲಾ ಕ್ಷೇತ್ರಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ, ಈ ವಾರಾಂತ್ಯದಲ್ಲಿ ಸರ್ಕಾರ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡು, ಚಿತ್ರಮಂದಿರಗಳಿಗೆ ಪೂರ್ಣ ಪ್ರಮಾಣದ ಪ್ರವೇಶಾತಿಗೆ ಅನುಮತಿ ನೀಡುವ ನಿರೀಕ್ಷೆ ಇದೆ.
ನಟ ಶಿವರಾಜ್ಕುಮಾರ್ ಕೂಡಾ ಇತ್ತೀಚೆಗಷ್ಟೇ ಮುಖ್ಯಮಂತ್ರಿಗಳಲ್ಲಿ ಶೇ100 ಪ್ರವೇಶಾತಿಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. “ಶೇಕಡಾ ನೂರು ಪ್ರವೇಶಾತಿ ನೀಡಿದರೆ, ಚಿತ್ರರಂಗದ ಚಟುವಟಿಕೆಗಳು ಗರಿಗೆದರಿ ಎಲ್ಲರಿಗೂ ಕೆಲಸ ಸಿಗುತ್ತದೆ. ಈ ಮೂಲಕ ಕಾರ್ಮಿಕರ ಕಷ್ಟ ಕೂಡಾ ದೂರವಾಗುವ ಜೊತೆಗೆ ಚಿತ್ರರಂಗ ಚೇತರಿಕೆ ಕಾಣುತ್ತದೆ’ ಎಂದು ಮನವಿ ಮಾಡಿಕೊಂಡಿದ್ದಾರೆ.
ಜೊತೆಗೆ ಗಣೇಶನ ಹಬ್ಬ ಕಳೆದ ನಂತರ ಸರ್ಕಾರ ಅನುಮತಿ ನೀಡಲಿದೆ ಎಂಬ ಲೆಕ್ಕಾಚಾರಕೂಡಾ ಅನೇಕರದ್ದಾಗಿತ್ತು. ಹಾಗಾಗಿ, ಸಿನಿಮಾ ಮಂದಿ ಮತ್ತೆ ಭರವಸೆಯೊಂದಿಗೆ ಎದುರು ನೋಡುತ್ತಿದ್ದಾರೆ.
ಇದನ್ನೂ ಓದಿ:ಮತ್ತೆ ವರ್ಕೌಟ್ ಮೂಡ್ ಗೆ ಸುದೀಪ್
ಆರಂಭದಲ್ಲಿ ಆಗಸ್ಟ್ ಮೊದಲ ವಾರದಿಂದ ರಾಜ್ಯದಲ್ಲಿ ಥಿಯೇಟರ್ ಗಳಲ್ಲಿ 100%ರಷ್ಟು ಪ್ರೇಕ್ಷಕರ ಪ್ರವೇಶಾತಿಗೆ ಅವಕಾಶ ಸಿಗಲಿದೆ ಎನ್ನಲಾಗಿತ್ತು. ಹೀಗಾಗಿ ಬಿಡುಗಡೆಗೆ ಸಿದ್ಧವಿರುವ ಬಹುತೇಕ ಸಿನಿಮಾಗಳ ನಿರ್ಮಾಪಕರು ಆಗಸ್ಟ್ ಮೊದಲ ವಾರದ ಬಳಿಕ ತಮ್ಮ ಸಿನಿಮಾಗಳ ರಿಲೀಸ್ ಡೇಟ್ ಅನೌನ್ಸ್ ಮಾಡುವ ಯೋಚನೆಯಲ್ಲಿದ್ದರು. ಇದರ ಬೆನ್ನಲ್ಲೇ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ “ಸಲಗ’, “ಭಜರಂಗಿ-2′ ಹೀಗೆ ಒಂದಷ್ಟು ಬಿಗ್ ಬಜೆಟ್ ಮತ್ತು ಬಿಗ್ ಸ್ಟಾರ್ ಸಿನಿಮಾಗಳು ತಮ್ಮ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದರಿಂದ, ಚಿತ್ರರಂಗದಲ್ಲಿ ಮತ್ತೆ ಒಂದಷ್ಟು ನಿರೀಕ್ಷೆ, ಬಿಡುಗಡೆ ಚಟುವಟಿಕೆ ಸಣ್ಣಗೆ ಗರಿಗೆದರಿತ್ತು.
ಇನ್ನು ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆದರೆ ಮತ್ತೆ ತಮ್ಮ ಸಿನಿಮಾಗಳ ರಿಲೀಸ್ ಗೆ ಥಿಯೇಟರ್ ಕೊರತೆ ಎದುರಾಗಬಹುದು ಎಂಬ ಲೆಕ್ಕಚಾರದಿಂದ ಒಂದಷ್ಟು ಹೊಸಬರ ಸಿನಿಮಾಗಳು ಈ ಗ್ಯಾಪ್ನಲ್ಲಿಯೇ ತೆರೆಗೆ ಬರೋಣ ಎಂದು ಅಂದಾಜಿಸಿದ್ದವು. ಆದರೆ, ಆಗ ಅನುಮತಿ ಸಿಗದ ಕಾರಣ, ಸ್ಟಾರ್ ಸಿನಿಮಾಗಳು ತಮ್ಮ ಬಿಡುಗಡೆಯನ್ನು ಮುಂದಕ್ಕೆ ಹಾಕಿದ್ದು ಪೂರ್ಣ ಪ್ರವೇಶಕ್ಕೆ ನಿರೀಕ್ಷೆಯಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…