Sandalwoodನಲ್ಲಿ ಮತ್ತೆ ‘ಸ್ಟಾರ್ ವಾರ್’? ದಚ್ಚು ಟ್ವೀಟ್ ; ಕಿಚ್ಚನ ಲೆಟರ್ ಏನಿದು ಮ್ಯಾಟರ್?


Team Udayavani, Sep 17, 2019, 9:35 PM IST

Darshan-Sudeep-726

ಬೆಂಗಳೂರು: ಒಂದಷ್ಟು ಸಮಯ ಸ್ಟಾರ್ ವಾರ್ ವಿಷಯದಲ್ಲಿ ಸೈಲೆಂಟಾಗಿದ್ದ ಸ್ಯಾಂಡಲ್ ವುಡ್ ನಲ್ಲಿ ಎರಡು ಮದಗಜಗಳ ನಡುವೆ ಚಿಕ್ಕದೊಂದು ಮುನಿಸಿನ ಕಿಡಿ ಅವರ ಅಭಿಮಾನಿ ವರ್ಗದ ನಡುವೆ ಕಾಡ್ಗಿಚ್ಚಾಗಿ ಉರಿದೇಳಲು ಕಾರಣವಾಗುತ್ತಿದೆಯೇ ಎಂಬ ಸಂಶಯ ಕಳೆದ ಕೆಲವು ದಿನಗಳಿಂದ ಚಂದನವನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡುತ್ತಿರುವವರಿಗೆ ಅನ್ನಿಸತೊಡಗಿರುವ ಸಂಗತಿಯಾಗಿದೆ.

ಇಷ್ಟಕ್ಕೂ ಯಾರು ಈ ಇಬ್ಬರು ಸ್ಟಾರ್ ಗಳು? ಯಾಕೆ ಇವರ ಅಭಿಮಾನಿಗಳ ನಡುವೆ ಮೇಲಾಟ? ಎಂದೆಲ್ಲಾ ನೋಡುವುದಾದರೆ ವಿಷಯ ತುಂಬಾ ಸಿಲ್ಲಿ ಅನ್ನಿಸಿದರೂ ಕುತೂಹಲಕರವಾಗಿದೆ ಕೇಳಿ.

‘ಡಿ’ಬಾಸ್ ದರ್ಶನ್ ತೂಗುದೀಪ ಅಭಿಮಾನಿವರ್ಗ ಮತ್ತು ಕಿಚ್ಚ ಸುದೀಪ್ ಅವರ ಅಭಿಮಾನಿಗಳ ನಡುವೆ ತಿಕ್ಕಾಟ ಪ್ರಾರಂಭವಾಗಿದೆ. ಇದಕ್ಕೆಲ್ಲಾ ಕಾರಣವಾಗಿರುವುದು ಇತ್ತೀಚೆಗೆ ಐದು ಭಾಷೆಗಳಲ್ಲಿ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನವನ್ನು ಕಾಣುತ್ತಿರುವ ಸುದೀಪ್ ಅಭಿನಯದ ‘ಪೈಲ್ವಾನ್’ ಚಿತ್ರದ ನಕಲಿ ವಿಡಿಯೋ ರಿಲೀಸ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎದ್ದಿರುವ ವಿವಾದ.

ಪೈಲ್ವಾನ್ ಚಿತ್ರ ತೆರಕಂಡ ಮರುದಿನವೇ ತಮಿಳುಕಾರರ್ಸ್ ಸೇರಿದಂತೆ ಕೆಲವೊಂದು ವೆಬ್ ಸೈಟ್ ಗಳಲ್ಲಿ ಈ ಚಿತ್ರ ಸೋರಿಕೆಯಾಗಿತ್ತು ಮತ್ತು ಇದರ ಬೆನ್ನಲ್ಲೇ ಈ ಚಿತ್ರದ ಪೈರಸಿಗೆ ಅವಕಾಶ ನೀಡಬಾರದು ಎಂದು ಅಭಿಮಾನಿಗಳಲ್ಲಿ ಚಿತ್ರತಂಡ ಮನವಿ ಮಾಡಿಕೊಂಡಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದೀಪ್ ಮತ್ತು ದರ್ಶನ್ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ, ಫ್ಯಾನ್ ಪುಟಗಳಲ್ಲಿ ಆರೋಪ ಪ್ರತ್ಯಾರೋಪ ಮುಂದುವರೆದಿತ್ತು.

ಈ ನಡುವೆ ಸೋಮವಾರದಂದು ‘ಪೈಲ್ವಾನ್’ ಚಿತ್ರದ ನಿರ್ಮಾಪಕಿ ಸ್ವಪ್ನಾ ಕೃಷ್ಣ ಅವರು ಸೈಬರ್ ಪೊಲೀಸ್ ಠಾಣೆಗೆ ದೂರನ್ನೂ ಸಹ ನೀಡಿದ್ದರು. ಮತ್ತು ಈ ಸಂದರ್ಭದಲ್ಲಿ ‘ಪೈರಸಿ ವಿಚಾರದಲ್ಲಿ ದರ್ಶನ್ ಅಭಿಮಾನಿಗಳು ಯಾವುದೇ ರೀತಿಯ ತಪ್ಪನ್ನು ಮಾಡಿಲ್ಲ’ ಎಂದೂ ಅವರು ಹೆಳಿದ್ದರು.

ಇದಾದ ಬಳಿಕ ಮಧ್ಯಾಹ್ನದ ಹೊತ್ತಿಗೆ ಟ್ವೀಟ್ ಒಂದನ್ನು ಮಾಡಿದ ನಟ ದರ್ಶನ್ ‘ನನ್ನ ಅನ್ನದಾತರು, ಸೆಲೆಬ್ರೆಟಿಗಳನ್ನು ಕೆಣಕಲು/ಪ್ರಚೋದಿಸಲು ಬರದಿರಿ’ ಎಂದು ಟ್ವೀಟ್ ಮಾಡುವ ಮೂಲಕ ತನ್ನ ಅಭಿಮಾನಿಗಳ ಬೆಂಬಲಕ್ಕೆ ದಚ್ಚು ನಿಂತುಬಿಟ್ಟಿದ್ದರು. ಇದು ಪರೋಕ್ಷವಾಗಿ ಪೈಲ್ವಾನ್ ಚಿತ್ರದ ಪೈರಸಿ ವಿಚಾರದಲ್ಲಿ ತನ್ನ ಅಭಿಮಾನಿಗಳನ್ನು ಎಳೆದು ತರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗರಂ ಆಗಿ ದಚ್ಚು ನೀಡಿದ ರಿಯಾಕ್ಷನ್ ಎಂದೇ ಎಲ್ಲರೂ ಅಂದುಕೊಳ್ಳುತ್ತಿದ್ದಾರೆ. ದರ್ಶನ್ ತನ್ನ ಅಭಿಮಾನಿಗಳನ್ನು ‘ಸೆಲೆಬ್ರೆಟಿಗಳು’ ಎಂದೂ ಸಹ ಕರೆಯುತ್ತಾರೆ.

ಇನ್ನು ಇಷ್ಟೆಲ್ಲಾ ನಡೆಯುತ್ತಿರುವಾಗಲೇ ಕಿಚ್ಚ ಸುದೀಪ್ ಅವರೂ ಒಂದು ಟ್ವೀಟ್ ಮಾಡಿದ್ದಾರೆ ಮಾತ್ರವಲ್ಲದೇ ಬಹಳ ಅರ್ಥಗರ್ಭಿತವಾಗಿರುವ ಸುದೀರ್ಘ ಪತ್ರವೊಂದನ್ನೂ ಸಹ ಬರೆದು ಅದರ ಲಿಂಕ್ ಅನ್ನು ಈ ಟ್ವೀಟ್ ನಲ್ಲಿ ಅಟ್ಯಾಚ್ ಮಾಡಿದ್ದಾರೆ.

‘ಎಚ್ಚರಿಕೆಯನ್ನು ನಾನು ಪಡೆದುಕೊಳ್ಳುವುದೂ ಇಲ್ಲ ನೀಡುವುದೂ ಇಲ್ಲ. ಇನ್ನು ಮಾತಿನಿಂದಲೇ ಯುದ್ಧ ಗೆಲ್ಲುವುದು ಸಾಧ್ಯ ಎನ್ನುವುದಾದರೆ ಇವತ್ತು ಈ ಜಗತ್ತಿನಲ್ಲಿ ಹಲವರು ರಾಜರಾಗಿರುತ್ತಿದ್ದರು. ನಾನು ಆರಿಸಿಕೊಳ್ಳುವ ಮಾರ್ಗ ಮನುಷ್ಯ ಮಾರ್ಗ’ ಎಂದು ಮಾರ್ಮಿಕ ಟ್ವೀಟ್ ಒಂದನ್ನು ಮಾಡಿದ್ದಾರೆ.


ಇನ್ನು ತನ್ನ ಟಂಬ್ಲರ್ ಖಾತೆಯಲ್ಲಿ ಸುದೀರ್ಘ ಪತ್ರವೊಂದನ್ನು ಬರೆದುಕೊಂಡಿರುವ ಕಿಚ್ಚ ಸುದೀಪ್ ಅವರು ಇದರಲ್ಲಿ ಹಲವಾರು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ…

‘ಕ್ಷುಲ್ಲಕ ವಿಚಾರಗಳಿಗೆ ತಲೆಕೆಡಿಸಿಕೊಳ್ಳುವುದನ್ನು ಬಿಟ್ಟು ನಮ್ಮ ಜೀವನದ ಕಡೆಗೆ ಮತ್ತು ಉತ್ತಮ ವಿಷಯಗಳ ಕಡೆಗೆ ಗಮನ ಕೊಡುವಂತೆ’ ಸುದೀಪ್ ತನ್ನ ಅಭಿಮಾನಿಗಳಲ್ಲಿ ಪ್ರಾರಂಭದಲ್ಲೇ ಮನವಿ ಮಾಡಿಕೊಂಡಿದ್ದಾರೆ. ‘ಸತ್ಯ ಯಾವತ್ತಿದ್ದರೂ ಸತ್ಯವೆ ಆಗಿರುತ್ತದೆ ಮತ್ತು ಇದನ್ನು ಒಪ್ಪಿಕೊಳ್ಳುವ ಮೂಲಕ ನಾವ್ಯಾರೂ ಯಾರ ಮುಂದೆಯೂ ಸಣ್ಣವರಾಗುವುದಿಲ್ಲ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಹಲವಾರು ವಿಚಾರಗಳು ಘಟಿಸುತ್ತಿವೆ ಮತ್ತು ಇದು ಒಳ್ಳೆಯ ಸಂದೇಶಗಳನ್ನು ಕೊಡುತ್ತಿಲ್ಲ. ಪೈರಸಿಗೆ ಸಂಬಂಧಿಸಿದಂತೆ ಯಾವುದೇ ನಟರನ್ನು ಗುರಿಯಾಗಿಸಿ ಯಾರೂ ಸಹ ಆರೋಪವನ್ನು ಮಾಡಿಲ್ಲ. ಇನ್ನು ನಿರ್ಮಾಪಕರಾಗಲೀ ಅಥವಾ ನಾನಾಗಲೀ ಯಾವುದೇ ನಟರ ಹೆಸರನ್ನು ಪ್ರಸ್ತಾಪಿಸಿಲ್ಲ. ಆದರೆ ಈ ಪೈರಸಿ ವಿಚಾರದಲ್ಲಿ ಹಲವರು ಭಾಗಿಯಾಗಿರುವುದಂತೂ ಸತ್ಯ! ಮತ್ತು ಅಂತವರ ಹೆಸರನ್ನು ಸೈಬರ್ ಪೊಲೀಸರಿಗೆ ಈಗಾಗಲೇ ನೀಡಲಾಗಿದೆ. ಮುಂದಿನ ಕಾನೂನು ಕ್ರಮವನ್ನು ಪೊಲೀಸರೇ ತೆಗೆದುಕೊಳ್ಳಲಿದ್ದಾರೆ. ಹಾಗಾಗಿ ಈ ವಿಚಾರದಲ್ಲಿ ಈಗ ಎದ್ದಿರುವ ವಿವಾದಗಳಿಗೆ ನಾವೊಂದು ಪೂರ್ಣ ವಿರಾಮವನ್ನು ಹಾಕಲೇಬೇಕಾಗಿದೆ. ಈ ವಿಚಾರಕ್ಕೆ ಸಂಬಂಧಿಸಿಂತೆ ಕೆಲವರು ಅನಾಮಿಕ ಪತ್ರದ ಮೂಲಕ ನನ್ನ ಹೆಸರನ್ನು ಸುಮ್ಮನೆ ಎಳೆದು ತರುತ್ತಿದ್ದಾರೆ. ಆದರೆ ಇದಕ್ಕೆಲ್ಲಾ ನಾನು ತಲೆಕೆಡಿಸಿಕೊಳ್ಳುವುದಿಲ್ಲ, ಆದರೆ ಈ ಎಲ್ಲಾ ವಿಚಾರಗಳು ನಿಮಗೆ ಬೇಸರ ತರುತ್ತದೆ ಎಂದು ನನಗೆ ಗೊತ್ತು. ಆದರೆ ಒಂದು ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಿ ಈ ಎಲ್ಲಾ ಕುತಂತ್ರಗಳಿಗೆ ನಾನು ಕುಗ್ಗಿ ಹೋಗುವುದಿಲ್ಲ!

ಇನ್ನು ನನ್ನ ಚಿತ್ರವನ್ನು ಮತ್ತು ನನ್ನ ನಿರ್ಮಾಪಕರನ್ನು ರಕ್ಷಿಸಿಕೊಳ್ಳಬೇಕಾಗಿರುವುದು ನನ್ನ ಜವಾಬ್ದಾರಿ ಇದಕ್ಕೆ ಏನೆಲ್ಲ ಮಾಡಬೇಕೋ ಅದೆಲ್ಲವನ್ನೂ ನಾನು ಈಗಾಗಲೇ ಮಾಡುತ್ತಿದ್ದೇನೆ. ಚಿತ್ರರಂಗದ ಗೆಳೆಯರಿಂದ ಮತ್ತು ಹಿತೈಷಿಗಳಿಂದ ನನಗೆ ಸಿಕ್ಕಿರುವ ಬೆಂಬಲ ಅವರಲ್ಲಿರುವ ಒಳ್ಳೆಯ ಗುಣಕ್ಕೆ ಮಾದರಿಯಾಗಿದೆ ಮತ್ತು ನನ್ನ ಬಗ್ಗೆ ಅವರಿಗಿರುವ ಪ್ರೀತಿ ಹಾಗೂ ನಾನು ಅವರೊಂದಿಗೆ ಇರಿಸಿಕೊಂಡಿರುವ ಸಂಬಂಧಗಳಿಗೆ ಒಂದು ನಿದರ್ಶನವೂ ಆಗಿದೆ. ಎಲ್ಲಾ ಕಡೆಯಿಂದಲೂ ನನಗೆ ಬೆಂಬಲ, ಹಾರೈಕೆಗಳು ಬರುತ್ತಿರಬೇಕಾದರೆ ಇನ್ನು ನಾನು ಯಾರಿಗಾದರೂ ಏನನ್ನಾದರೂ ಸಾಬೀತುಪಡಿಸುವ ಅಗತ್ಯವಿದೆಯೇ?’

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.