ಮಾರ್ಚ್‌ 22 ರಿಂದ ಮಿಸ್ಸಿಂಗ್‌ ಬಾಯ್‌ ಹುಡುಕಾಟ ಶುರು


Team Udayavani, Feb 25, 2019, 5:38 AM IST

missing-boy125.jpg

ಕಾಣೆಯಾದ ಹುಡುಗನೊಬ್ಬನ ಸತ್ಯಕಥೆ ಇಟ್ಟುಕೊಂಡು ನಿರ್ದೇಶಕ ರಘುರಾಮ್‌ ಅವರು ‘ಮಿಸ್ಸಿಂಗ್‌ ಬಾಯ್‌’ ಚಿತ್ರ ಮಾಡಿರುವುದು ಎಲ್ಲರಿಗೂ ಗೊತ್ತಿದೆ. ಆ ಚಿತ್ರ ಈಗಾಗಲೇ ಒಂದಷ್ಟು ಕುತೂಹಲವನ್ನೂ ಕೆರಳಿಸಿದೆ. ಆರಂಭದಿಂದಲೂ ಹೊಸ ವಿಷಯಗಳಿಗೆ ಸುದ್ದಿಯಾಗುತ್ತಿರುವ “ಮಿಸ್ಸಿಂಗ್‌ ಬಾಯ್‌’ ಈಗ ಮತ್ತೂಂದು ಹೊಸ ಸುದ್ದಿಗೆ ಕಾರಣವಾಗಿದೆ. ಅದು ಮಾರ್ಚ್ 22 ರಂದು ಚಿತ್ರ ಬಿಡುಗಡೆಯಾಗುತ್ತಿರುವುದು.

ಚಿತ್ರ ತೆರೆಗೆ ಬರುವುದು ಹೊಸ ಸುದ್ದಿಯಲ್ಲದಿದ್ದರೂ, ಮಾರ್ಚ್ 22 ರಂದು ತೆರೆಗೆ ಬರುತ್ತಿದೆ ಅಂತ ಡೇಟ್‌ ಅನೌನ್ಸ್‌ ಮಾಡಿರುವವರು ವಿಶೇಷ. ಹೌದು, ಇದೇ ಮೊದಲ ಬಾರಿಗೆ ನಿರ್ದೇಶಕ ರಘು ಅವರು, ಕಾಮನ್‌ ಆಡಿಯನ್ಸ್‌ ಮೂಲಕ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿಸಿದ್ದಾರೆ. ಸಾಮಾನ್ಯವಾಗಿ ಚಿತ್ರದ  ಟೈಟಲ್‌ ಬಿಡುಗಡೆ, ಆಡಿಯೋ ಬಿಡುಗಡೆ, ಚಿತ್ರ ಬಿಡುಗಡೆಯ ದಿನಾಂಕವನ್ನು ಯಾರಾದರೂ ಸ್ಟಾರ್ ಅಥವಾ ಗಣ್ಯ ವ್ಯಕ್ತಿಗಳಿಂದ ಬಿಡುಗಡೆ ಮಾಡಿಸುವುದು, ಘೊಷಣೆ ಮಾಡಿಸುವುದು ಸಹಜ.

ಆದರೆ, ರಘುರಾಮ್‌, ಕೊಂಚ ಬದಲಾವಣೆ ಇರಲಿ ಎಂಬ ಕಾರಣಕ್ಕೆ ಕಾಮನ್‌ ಆಡಿಯನ್ಸ್‌ ಮೂಲಕ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿಸಿದ್ದಾರೆ. ಈ ಬಗ್ಗೆ ಹೇಳಿಕೊಳ್ಳುವ ರಘುರಾಮ್‌, “ಚಿತ್ರವನ್ನು ನೋಡಿ, ಚೆನ್ನಾಗಿದೆ, ಚೆನ್ನಾಗಿಲ್ಲ ಅಂತ ಫ‌ಲಿತಾಂಶ ಕೊಡುವುದೇ ಜನರು. ಅವರ ಮೂಲಕ ಚಿತ್ರ ಬಿಡುಗಡೆ ದಿನಾಂಕ ಘೋಷಣೆ ಮಾಡಿಸುವುದರಿಂದ ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ತಿಳಿಸಿದಂತಾಗುತ್ತದೆ ಎಂಬ ಕಾರಣಕ್ಕೆ ಈ ಯೋಚನೆ ಮಾಡಲಾಗಿದೆ.

ಈಗಾಗಲೇ, ಎಲ್ಲೆಡೆಯಿಂದ ಜನರು ಪ್ರೀತಿಯಿಂದ ವಾಟ್ಸಾಪ್‌ ಮೂಲಕ “ಮಿಸ್ಸಿಂಗ್‌ ಬಾಯ್‌’ ಚಿತ್ರದ ಬಗ್ಗೆ ಒನ್‌ಲೈನ್‌ ಹೇಳುವುದಷ್ಟೇ ಅಲ್ಲ, ಚಿತ್ರ ಮಾರ್ಚ್.22 ರಂದು ಬಿಡುಗಡೆಯಾಗುತ್ತಿದೆ ಎಂದು ಅನೌನ್ಸ್‌ ಮಾಡುತ್ತಿದ್ದಾರೆ. ಆ ಮೂಲಕ ಸ್ವತಃ ಪ್ರಚಾರಕ್ಕೂ ಕಾರಣರಾಗಿದ್ದಾರೆ’ ಎಂಬುದು ರಘುರಾಮ್‌ ಮಾತು. ಇನ್ನು, ಈ ಚಿತ್ರವನ್ನು ಕಾರ್ತಿಕ್‌ ಗೌಡ ವಿತರಣೆ ಮಾಡುತ್ತಿದ್ದಾರೆ. ಪ್ರಮುಖ ಚಿತ್ರಮಂದಿರದ ಕಾನ್ಸೆಪ್ಟ್ನಿಂದ ಹೊರಬಂದಿರುವ ಚಿತ್ರತಂಡ, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಸುಮಾರು 80 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಇನ್ನು, ಸತತ ನಾಲ್ಕು ವರ್ಷಗಳ ಕಾಲ ಯಾವುದೇ ಚಿತ್ರ ಮಾಡದೆ, “ಮಿಸ್ಸಿಂಗ್‌ ಬಾಯ್‌’ಗಾಗಿ ಕಾದು ಕುಳಿತಿದ್ದ ನಿರ್ದೇಶಕ ರಘುರಾಮ್‌ ಅವರಿಗೆ ಚಿತ್ರದ ಮೇಲೆ ಸಾಕಷ್ಟು ನಂಬಿಕೆ ಇದೆಯಂತೆ. ಇದೊಂದು ಎಮೋಷನಲ್‌ ಆಗಿಸುವಂತಹ ಚಿತ್ರವಾಗಿದ್ದು, ಎಲ್ಲಾ ವರ್ಗಕ್ಕೂ ಭಾವುಕತೆ ಹೆಚ್ಚಿಸುತ್ತೆ ಎಂಬ ಗ್ಯಾರಂಟಿ ಕೊಡ್ತೀನಿ’ ಎನ್ನುತ್ತಾರೆ. ಅದೇನೆ ಇರಲಿ, ಇದು ವಿದೇಶದಿಂದ ಸ್ವದೇಶಕ್ಕೆ ಅಪ್ಪ-ಅಮ್ಮನ ಹುಡುಕಿ ಬಂದವನ ಕಥೆ ಮತ್ತು ವ್ಯಥೆ. 27 ವರ್ಷದ ಹಿಂದೆ ನಡೆದ ಘಟನೆಯನ್ನು ಪೊಲೀಸ್‌ ಅಧಿಕಾರಿಯೊಬ್ಬ ಹೇಗೆ ಪತ್ತೆ ಹಚ್ಚುತ್ತಾನೆ ಎಂಬ ಥ್ರಿಲ್ಲರ್‌ ಅಂಶದೊಂದಿಗೆ ಕಥೆ ಸಾಗಲಿದೆ.

ಇದು ಉತ್ತರಕರ್ನಾಟಕದಲ್ಲಿ ನಡೆದ ನೈಜ ಘಟನೆ. ಕಥೆಯಲ್ಲಿ ಸುಮಾರು ಏಳು ವರ್ಷದ ಹುಡುಗನೊಬ್ಬ, ಆಟವಾಡುತ್ತಲೇ ರೈಲಿನಲ್ಲಿ ಪಯಣ ಬೆಳೆಸಿ ಕಾಣೆಯಾಗುತ್ತಾನೆ. ಹಾಗೆ ಕಾಣೆಯಾದವನು ದೂರದ ಸ್ವೀಡನ್‌ ದೇಶ ಸೇರಿಕೊಳ್ಳುತ್ತಾನೆ. ಇಪ್ಪತ್ತೇಳು ವರ್ಷದ ಬಳಿಕ ಸ್ವೀಡನ್‌ನಿಂದ ಬರುವ ಸುಮಾರು 35 ವರ್ಷದ ಯುವಕ, ತನ್ನ ಅಪ್ಪ-ಅಮ್ಮನನ್ನು ಹುಡುಕಿಕೊಡಿ ಎಂದು ಪೊಲೀಸ್‌ ಠಾಣೆಯ ಮೊರೆ ಹೋಗುತ್ತಾನೆ. ಕಳೆದು ಹೋಗಿದ್ದ ಹುಡುಗ ಪುನಃ ವಿದೇಶದಿಂದ ಸ್ವದೇಶಕ್ಕೆ ಬಂದು ಅಪ್ಪ-ಅಮ್ಮ ಬೇಕು ಅಂದಾಗ, ಪೊಲೀಸರು ಹೇಗೆಲ್ಲಾ ಅವನ ಹೆತ್ತವರನ್ನು ಹುಡುಕುತ್ತಾರೆ.

ಎಷ್ಟೆಲ್ಲಾ ಸಮಸ್ಯೆ ಎದುರಿಸುತ್ತಾರೆ ಎಂಬುದು ಚಿತ್ರದ ಕಥೆ’ ಗುರುನಂದನ್‌ ನಾಯಕರಾದರೆ, ಕೇರಳ ಮೂಲದ ಅರ್ಚನಾ ಜಯಕೃಷ್ಣ ನಾಯಕಿ, ರಂಗಾಯಣ ರಘು ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಮಾಸ್ಟರ್‌ ಅಭಿಜಯ್‌ ಬಾಲನಟರಾಗಿ ನಟಿಸಿದ್ದಾನೆ. ಚಿತ್ರಕ್ಕೆ ಹರಿಕೃಷ್ಣ ಸಂಗೀತವಿದೆ. ಜೋನಿ ಹರ್ಷ ಸಂಕಲನ, ಜಗದೀಶ್‌ ವಾಲಿ ಛಾಯಗ್ರಹಣವಿದೆ. ಕೊಲ್ಲ ಪ್ರವೀಣ್‌ ನಿರ್ಮಾಪಕರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.