ರವಿಚಂದ್ರನ್‌ ಪರ ಸುದೀಪ್‌ ವಕಾಲತ್ತು

ರವಿ ಬೋಪಣ್ಣ ಚಿತ್ರದಲ್ಲಿ ಸುದೀಪ್‌ ಲಾಯರ್‌

Team Udayavani, Aug 19, 2019, 3:04 AM IST

Ravi-Bopanna

ಕ್ರೇಜಿಸ್ಟಾರ್‌ ರವಿಚಂದ್ರನ್‌ ನಿರ್ದೇಶಿಸಿ, ನಟಿಸುತ್ತಿರುವ “ರವಿ ಬೋಪಣ್ಣ’ ಚಿತ್ರದಲ್ಲಿ ಸುದೀಪ್‌ ಅವರು ಗೆಸ್ಟ್‌ ಅಪಿಯರೆನ್ಸ್‌ ಮಾಡಲಿದ್ದಾರೆಂಬ ಸುದ್ದಿಯನ್ನು ನೀವು ಇದೇ ಬಾಲ್ಕನಿಯಲ್ಲಿ ಓದಿದ್ದೀರಿ. ಆದರೆ, ಆ ಚಿತ್ರದಲ್ಲಿ ಸುದೀಪ್‌ ಯಾವ ಪಾತ್ರ ಮಾಡುತ್ತಾರೆಂಬುದು ಪಕ್ಕಾ ಆಗಿರಲಿಲ್ಲ. ಈಗ ಎಲ್ಲವೂ ಪಕ್ಕಾ ಆಗಿದ್ದು, ಸುದೀಪ್‌ ಅವರು ತಮ್ಮ ಭಾಗದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಶನಿವಾರ ಹಾಗೂ ಭಾನುವಾರ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಹಾಗಾದರೆ ಸುದೀಪ್‌ “ರವಿ ಬೋಪಣ್ಣ’ದಲ್ಲಿ ಯಾವ ಪಾತ್ರ ಮಾಡುತ್ತಾರೆಂದು ನೀವು ಕೇಳಬಹುದು. ಅದಕ್ಕೆ ಉತ್ತರ ಲಾಯರ್‌. ಹೌದು, “ರವಿ ಬೋಪಣ್ಣ’ದಲ್ಲಿ ಸುದೀಪ್‌ ಲಾಯರ್‌ ಆಗಿ ನಟಿಸಿದ್ದಾರೆ. ನಿರ್ದೇಶಕ ರವಿಚಂದ್ರನ್‌ ಹೇಳುವಂತೆ, ಒಳ್ಳೆಯ ದಿನದಲ್ಲೇ ಸುದೀಪ್‌ ಅವರ ಭಾಗದ ಚಿತ್ರೀಕರಣ ಮಾಡಲಾಗಿದೆ. ಅವರ ದೃಶ್ಯ ಕ್ಲೈಮ್ಯಾಕ್ಸ್‌ನಲ್ಲಿ ಬಂದರೂ ಚಿತ್ರೀಕರಣವನ್ನು ಮೊದಲು ಮಾಡಲಾಗಿದೆ.

ತಮ್ಮ ಚಿತ್ರದಲ್ಲಿ ಸುದೀಪ್‌ ಪಾತ್ರ ಮಾಡಿದ ಬಗ್ಗೆ ಹೇಳುವ ರವಿಚಂದ್ರನ್‌, “ಸುದೀಪ್‌ ಅವರನ್ನು ನಿರ್ದೇಶಿಸೊದೇ ಒಂದು ಖುಷಿ. ಬೆಳಗ್ಗೆ ಬೇಗನೇ ಬಂದು ತಮ್ಮ ಸೀನ್‌ಪೇಪರ್‌ ತೆಗೆದು, ಅದಕ್ಕೆ ಅವರದೇ ಆದ ಒಂದಷ್ಟು ಮ್ಯಾನರೀಸಂ ಸೇರಿಸಿ ಸಿದ್ಧರಾಗಿರುತ್ತಾರೆ. ಈ ಪಾತ್ರವನ್ನು ಸುದೀಪ್‌ ಮಾಡಿದರೆ ಚೆನ್ನಾಗಿರುತ್ತದೆ ಎಂದು ಕೇಳಿಕೊಂಡಾಗ ಸುದೀಪ್‌ ಪ್ರೀತಿಯಿಂದ ಬಂದು ನಟಿಸಿದ್ದಾರೆ’ ಎಂದರು.

ರವಿಚಂದ್ರನ್‌ ಅವರ ನಿರ್ದೇಶನದ ಸಿನಿಮಾದಲ್ಲಿ ಸುದೀಪ್‌ ಎರಡನೇ ಬಾರಿ ನಟಿಸುತ್ತಿರೋದು. “ಪಾತ್ರ ಸಣ್ಣದೋ, ದೊಡ್ಡದೋ ರವಿಚಂದ್ರನ್‌ ಅವರ ನಿರ್ದೇಶನದ ಸಿನಿಮಾದಲ್ಲಿ ಎರಡನೇ ಬಾರಿ ನಟಿಸುತ್ತಿದ್ದೇನೆ. ಈ ಅವಕಾಶ ಅವರ ಮಕ್ಕಳಿಗೂ ಸಿಕ್ಕಿಲ್ಲ, ಆದರೆ, ನನಗೆ ಸಿಕ್ಕಿದೆ. ಅವರ ನಿರ್ದೇಶನದ ಸಿನಿಮಾದಲ್ಲಿ ನಟಿಸೋದು ಒಂದು ಖುಷಿ.

ಚಿತ್ರರಂಗದಲ್ಲಿ ಕಾಸಿದೆ, ಆಡಿಯೋದಿಂದ ಕಾಸು ತೆಗೆಯಬಹುದು, ಒಂದು ಹಾಡನ್ನು ಹೀಗೂ ತೆಗೆಯಬಹುದೆಂದು ತೋರಿಸಿಕೊಟ್ಟವರು. ಒಂದು ಸಮಯದಲ್ಲಿ ನಾನು ಸೇರಿದಂತೆ ಅನೇಕ ಕಲಾವಿದರು ರವಿಚಂದ್ರನ್‌ ಅವರ ಸಿನಿಮಾದಲ್ಲಿ ಅವಕಾಶ ಸಿಗಲಿ, ಅವರಿಂದ ಕರೆಬರಲಿ ಎಂದು ಕಾಯುತ್ತಿದ್ದವರು. ನಾನು ಈಗಲೂ ಅವರ ಕರೆಬಂದಾಗ, ಬಂದು ನಟಿಸುತ್ತೇನೆ’ ಎಂದರು.

ಟಾಪ್ ನ್ಯೂಸ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.