ದರ್ಶನ್-ಸುದೀಪ್ ಒಂದಾಗಬೇಕು: ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಅಭಿಯಾನ
Team Udayavani, Mar 25, 2021, 8:51 AM IST
ನಟ ದರ್ಶನ್ ಹಾಗೂ ಸುದೀಪ್ ಒಂದು ಸಮಯದಲ್ಲಿ ಕುಚುಕು ಗೆಳೆಯರಾಗಿದಿದ್ದು ನಿಮಗೆ ಗೊತ್ತೇ ಇದೆ. ಆ ನಂತರ ಇಬ್ಬರ ನಡುವೆ ಮುನಿಸು ಬಂದು ಈಗ ದೂರವಾಗಿದ್ದಾರೆ. ಆದರೆ, ಈಗ ಅವರ ಅಭಿಮಾನಿಗಳು ಅವರಿಬ್ಬರು ಮತ್ತೆ ಒಂದಾಗ ಬೇಕೆಂದು ಬಯಸಿದ್ದಾರೆ. ಇದರ ಪರಿಣಾಮವಾಗಿ ಅಭಿಮಾನಿಗಳು ಟ್ವೀಟರ್ನಲ್ಲಿ ಒಂದು ಅಭಿಯಾನ ವನ್ನೇ ಆರಂಭಿಸಿದ್ದಾರೆ.
#DbossKicchaComeTogether ಅಭಿಯಾನದಡಿ ಅವರ ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. ಜೊತೆಗೆ ದರ್ಶನ್ ಸುದೀಪ್ ಜೊತೆಗಿರುವ ಸಿಡಿಪಿಯೊಂದನ್ನು ಕೂಡಾ ಬಿಡುಗಡೆ ಮಾಡಿದ್ದಾರೆ. ಈ ಇಬ್ಬರು ಒಟ್ಟಾಗುವು ದರಿಂದ ವೈಯಕ್ತಿಕವಲ್ಲದೇ ಕನ್ನಡ ಚಿತ್ರರಂಗಕ್ಕೆ ಇದರಿಂದ ಲಾಭವಿದೆ ಎಂದು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಮಾಡುತ್ತಿದ್ದಾರೆ.
ಇದನ್ನೂ ಓದಿ:ನೀವು ತಿನ್ನುವ ಆಹಾರ ಮತ್ತು ಬೆಳೆಯುವ ರೈತರನ್ನು ಗೌರವಿಸಿ: ರೈತರ ಪರ ನಿಂತ ವಿಶಾಲ್ ದದ್ಲಾನಿ
ಮುಂದಿನ ದಿನಗಳಲ್ಲಿ ಈ ಅಭಿಯಾನ ದೊಡ್ಡ ಮಟ್ಟ ತಲುಪುವ ಸಾಧ್ಯತೆ ಇದೆ. ದರ್ಶನ್ ಹಾಗೂ ಸುದೀಪ್ ಬೇರೆ ಬೇರೆಯಾಗಿ ನಾಲ್ಕು ವರ್ಷಗಳಾಗಿವೆ. ಅವತ್ತಿನಿಂದಲೂ ಅವರ ಅಭಿಮಾನಿಗಳು ಈ ಇಬ್ಬರು ಮತ್ತೆ ಒಂದಾಗಬೇಕು ಎಂದು ಆಸೆ ಪಡುತ್ತಲೇ ಬಂದಿದ್ದಾರೆ.
#DbossKicchaComeTogether
All DBoss and kichha fans as well as all sandalwood movie lovers wish is to see these two heroes come to together again ❤️❤️❤️❤️ pic.twitter.com/ptPP6b2Xrz— Vinod kumar (@Vinodku65246514) March 24, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್