ಸಹೋದರನಂತಿದ್ದ ಅಭಿಮಾನಿ ಸಾವು: ಕಂಬನಿ ಮಿಡಿದ ಕಿಚ್ಚ ಸುದೀಪ್
Team Udayavani, Dec 20, 2019, 12:21 PM IST
ಬೆಂಗಳೂರು: ಸ್ಯಾಂಡಲ್ ವುಡ್ ಬಾದ್ ಶಾ ಕಿಚ್ಚ ಸುದೀಪ್ ಅವರ ಅಪ್ಪಟ ಅಭಿಮಾನಿಯಾಗಿದ್ದ ನಂದೀಶ್ ಗುರುವಾರ ತಡರಾತ್ರಿ ವಿಧಿವಶರಾಗಿದ್ದಾರೆ. ಎರಡು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಂದೀಶ್ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದರು. ಈ ಹಿನ್ನಲೆಯಲ್ಲಿ ಸುದೀಪ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಂದೀಶ್ ಅನೇಕ ವರ್ಷಗಳಿಂದ ಕಿಚ್ಚ ಸುದೀಪ್ ಸೇನಾ ಸಮಿತಿಯ ರಾಜ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನಂದೀಶ್ ನನ್ನ ಸಹೋದರನಂತೆ ಇದ್ದರು. ಆದರೇ ಇನ್ನಿಲ್ಲ ಎನ್ನುವ ಸತ್ಯ ಅರಗಿಸಿಕೊಳ್ಳಲು ಸಾಧ್ಯವಿಲ್ಲ . ಅವರ ಕುಟುಂಬಕ್ಕೆ ದುಃಖವನ್ನು ಭರಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಕಂಬನಿ ಮಿಡಿದಿದ್ದಾರೆ.
Unable to stil accept tat my dear dear brother #Nandish is Nomore. Been with us for years.
U wil be missed my brother. Truly an irreplaceable loss.
My condolences to his family and all my friends to whom he meant everything.#RIPNandish. pic.twitter.com/WeEFrLTPdk— Kichcha Sudeepa (@KicchaSudeep) December 19, 2019
ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯ ಡಿಪಿಯನ್ನು ಕೂಡ ಬದಲಾಯಿಸಿ ಸಂತರಾಪ ಸೂಚಿಸಿದ್ದಾರೆ.