ಕಬ್ಜ ಚಿತ್ರದಲ್ಲಿ ಸುದೀಪ್‌ ಗೆಟಪ್‌ಗೆ ಫ್ಯಾನ್ಸ್‌ ಫಿದಾ


Team Udayavani, Jan 15, 2021, 3:38 PM IST

ಕಬ್ಜ ಚಿತ್ರದಲ್ಲಿ ಸುದೀಪ್‌ ಗೆಟಪ್‌ಗೆ ಫ್ಯಾನ್ಸ್‌ ಫಿದಾ

ಆರ್‌.ಚಂದ್ರು ನಿರ್ದೇಶನದ “ಕಬ್ಜ’ ಚಿತ್ರದ ನಿರೀಕ್ಷೆ ಮತ್ತಷ್ಟು ಹೆಚ್ಚಿದೆ. ಕನ್ನಡ ಚಿತ್ರರಂಗದಿಂದ ತಯಾರಾಗುತ್ತಿರುವ ಮತ್ತೂಂದು ಬಿಗ್‌ ಬಜೆಟ್‌ ಪ್ಯಾನ್‌ ಇಂಡಿಯಾ ಸಿನಿಮಾವಾಗಿ ದಿನದಿಂದ ದಿನಕ್ಕೆ ಸಿನಿಮಾಪ್ರೇಮಿಗಳ ಗಮನ ಸೆಳೆಯುತ್ತಿದ್ದ “ಕಬ್ಜ’ಗೆ ಮತ್ತೂಬ್ಬ ಸ್ಟಾರ್‌ ನಟನ ಎಂಟ್ರಿಯಾಗಿರೋದು ನಿಮಗೆ ಗೊತ್ತೇ ಇದೆ. ಅದು ಸುದೀಪ್‌. ಈ ಮೂಲಕ ಸಿನಿಮಾದ ಕ್ರೇಜ್‌ ಕೂಡಾ ದುಪ್ಪಟ್ಟಾಗಿದೆ.

ಸುದೀಪ್‌ “ಕಬ್ಜ’ ಚಿತ್ರಕ್ಕೆ ಎಂಟ್ರಿಕೊಡುತ್ತಿದ್ದಂತೆ ಅವರ ಅಭಿಮಾನಿಗಳಲ್ಲಿ ಎದ್ದ ಪ್ರಶ್ನೆ ಎಂದರೆ, ಸುದೀಪ್‌ ಅವರ ಗೆಟಪ್‌ ಹೇಗಿರಬಹುದು ಎಂದು. ಈಗ ನಿರ್ದೇಶಕ, ನಿರ್ಮಾಪಕ ಆರ್‌. ಚಂದ್ರು ಆ ಕುತೂಹಲ ತಣಿಸಿದ್ದಾರೆ. ಸಂಕ್ರಾಂತಿ ದಿನ “ಕಬ್ಜ’ ಚಿತ್ರದಲ್ಲಿನ ಸುದೀಪ್‌ ಅವರ ಗೆಟಪ್‌ನ ಸ್ಕೆಚ್‌ ಬಿಡುಗಡೆ ಮಾಡಿದ್ದಾರೆ. ಸುದೀಪ್‌ ಈ ಹಿಂದೆ ಕಾಣಿಸಿಕೊಳ್ಳದಂತಹ ರೀತಿಯ ಪಾತ್ರ ಇದಾಗಿದ್ದು, ಸ್ಕೆಚ್‌ ನೋಡಿದ ಅಭಿಮಾನಿಗಳ ನಿರೀಕ್ಷೆಯ ಮಟ್ಟ ಹೆಚ್ಚಿದೆ.

ಚಿತ್ರದಲ್ಲಿ ಸುದೀಪ್‌ ಅವರ ಹೇರ್‌ ಸ್ಟೈಲ್‌ನಿಂದ ಹಿಡಿದು ಸಂಪೂರ್ಣ ಲುಕ್‌ ಬದಲಾಗಲಿದೆ. ಚಿತ್ರದಲ್ಲಿ ಸುದೀಪ್‌ ಭಾರ್ಗವ್‌ ಭಕ್ಷಿ ಎಂಬ ಪಾತ್ರದಲ್ಲಿ ಸುದೀಪ್‌ ಕಾಣಿಸಿಕೊಳ್ಳಲಿದ್ದು, 1947ರಿಂದ 1986ರ ಕಾಲಘಟ್ಟದ ಪಾತ್ರವಾ ಗಿದ್ದು, ಮಾಫಿಯಾ ಕೊನೆಗೊಳಿಸಲು ಭಕ್ಷಿ ಹೊರಡುತ್ತಾನೆ ಎಂಬ ಕ್ಯಾಪ್ಶನ್‌ ಅನ್ನು “ಕಬ್ಜ’ ಚಿತ್ರದ ಪೋಸ್ಟರ್‌ನಲ್ಲಿ ನೀಡಲಾಗಿದೆ.

ಈಗಾಗಲೇ ಸುದೀಪ್‌ ಹಾಗೂ ಉಪೇಂದ್ರ “ಮುಕುಂದ ಮುರಾರಿ’ ಚಿತ್ರದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು. ಈಗ “ಕಬ್ಜ’ದಲ್ಲಿ ಮತ್ತೂಮ್ಮೆ ನಟಿಸುತ್ತಿದ್ದಾರೆ. “ಕಬ್ಜ’ ಚಿತ್ರದಲ್ಲಿ ನಟಿಸುತ್ತಿರುವ ಬಗ್ಗೆ ಸ್ವತಃ ಸುದೀಪ್‌ ಟ್ವೀಟ್‌ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಇನ್ನು, ಉಪೇಂದ್ರ ಕೂಡಾ ಸುದೀಪ್‌ ಅವರನ್ನು “ಕಬ್ಜ’ ತಂಡದ ಭಾಗವಾಗುತ್ತಿರುವುದಕ್ಕೆ ಸ್ವಾಗತಿಸಿದ್ದಾರೆ.

ಈ ಚಿತ್ರವನ್ನು ಏಳು ಭಾಷೆಗಳಲ್ಲಿ ಬಿಡುಗಡೆ ಮಾಡಬೇಕು ಎಂಬುದು ಚಂದ್ರು ಆಸೆ. ಚಿತ್ರಕ್ಕಾಗಿ ಬೆಂಗಳೂರು ಮತ್ತು ಹೈದರಾಬಾದ್‌ ನಲ್ಲಿ ವಿಶೇಷ ಸೆಟ್ ಗಳನ್ನು ನಿರ್ಮಿಸಿ ಅದರಲ್ಲಿ ಚಿತ್ರೀಕರಣ ಮಾಡಿದ್ದರು. ಅಷ್ಟರಲ್ಲಿ ಲಾಕ್ಡೌನ್‌ ಘೋಷಣೆಯಾಗಿದ್ದರಿಂದ ಚಿತ್ರೀಕರಣ ನಿಂತಿತ್ತು. ಇದೀಗ ಜನವರಿಯ ಕೊನೆಯ ವಾರದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಚಿತ್ರವನ್ನು ಆರ್‌ ಚಂದ್ರ, ಶ್ರೀಸಿದ್ಧೇಶ್ವರ ಎಂಟರ್ ಪ್ರೈಸಸ್‌ ಬ್ಯಾನರ್‌ನಡಿ ನಿರ್ಮಿಸುತ್ತಿದ್ದು, ಉಪೇಂದ್ರ ಮತ್ತು ಸುದೀಪ್‌ ಅವರ ಜೊತೆಗೆ ಜಗಪತಿ ಬಾಬು, ರಾಹುಲ್‌, ಅನೂಪ್‌ ರೇವಣ್ಣ, ಜಾನ್‌ ಕೊಕ್ಕಿನ್‌, ರಾಹುಲ್‌ ದೇವ್‌ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ರವಿ ಬಸ್ರೂರು ಸಂಗೀತ ಈ ಚಿತ್ರಕ್ಕಿದೆ.

ಬಹುನಿರೀಕ್ಷಿತ ಕಬ್ಜ ಚಿತ್ರತಂಡಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರು ಸೇರ್ಪಡೆಗೊಂಡಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರಿಗೆ ಆತ್ಮೀಯ ಸುಸ್ವಾಗತ.

ಉಪೇಂದ್ರ, ನಟ

ನಟರಾಗಿ ನಾವೆಲ್ಲರೂ ಒಂದೊಳ್ಳೆಯ ಕಥೆಯನ್ನು ವಿಭಿನ್ನವಾಗಿ ಹೇಳಬೇಕೆಂಬ ಮಹತ್ವಾಕಾಂಕ್ಷೆ ಹೊಂದಿರುತ್ತೇವೆ. ಕೆಲವೊಮ್ಮೆ ಬೇರೆಯವರ ಕನಸಿನಲ್ಲಿ ಭಾಗವಾಗುವುದು ಕೂಡಾ ಕುಟುಂಬವನ್ನು ಸೇರಿದಷ್ಟೇ ಖುಷಿ. “ಕಬ್ಜ’ ಚಿತ್ರತಂಡದ ಭಾಗವಾಗುತ್ತಿರುವುದಕ್ಕೆ ಹಾಗೂ ಮತ್ತೂಮ್ಮೆ ಉಪೇಂದ್ರ ಅವರ ಜೊತೆ ತೆರೆಹಂಚಿಕೊಳ್ಳುತ್ತಿರುವುದಕ್ಕೆ ನನಗೆ ಖುಷಿ ಇದೆ.

ಸುದೀಪ್‌, ನಟ

ಕಬ್ಜ ಚಿತ್ರತಂಡಕ್ಕೆ ಭಾರತದ ಮತ್ತೂಬ್ಬ ಸೂಪರ್‌ ಸ್ಟಾರ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರು ಸೇರ್ಪಡೆಗೊಂಡಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರಿಗೆ ಸುಸ್ವಾಗತ.

 ಆರ್‌.ಚಂದ್ರು, ನಿರ್ದೇಶಕ, ನಿರ್ಮಾಪಕ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.