ಅಮಿತಾಬ್‌ ಚಿತ್ರದಲ್ಲಿ ಸುದೀಪ್‌


Team Udayavani, Dec 4, 2017, 11:08 AM IST

sudeep-amith.jpg

ಸುದೀಪ್‌ ಈಗಾಗಲೇ ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ವಿಚಾರ ನಿಮಗೆ ಗೊತ್ತೇ ಇದೆ. “ರಣ್‌’, “ಫ‌ೂಂಕ್‌’, “ರಕ್ತಚರಿತ್ರ’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಮತ್ತೆ ಸುದೀಪ್‌ ಅವರಿಗೆ ಎರಡು ಹಿಂದಿ ಸಿನಿಮಾಗಳಿಂದ ಆಫ‌ರ್‌ ಬಂದಿದೆ. ಅವೆರಡೂ ದೊಡ್ಡ ಪ್ರಾಜೆಕ್ಟ್ಗಳೆಂಬುದು ವಿಶೇಷ. ಅಮಿತಾಬ್‌ ಬಚ್ಚನ್‌ ನಟನೆಯ ಒಂದು ಸಿನಿಮಾ ಹಾಗೂ ರೋಹಿತ್‌ ಶೆಟ್ಟಿ ನಿರ್ದೇಶನದ ಸಿನಿಮಾವೊಂದರಿಂದ ಸುದೀಪ್‌ಗೆ ಆಫ‌ರ್‌ ಬಂದಿದೆ.

ಈ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಸದ್ಯದಲ್ಲೇ ಅಂತಿಮವಾಗಲಿದೆ. ಸುದೀಪ್‌ ಈಗಾಗಲೇ ಅಮಿತಾಬ್‌ ಬಚ್ಚನ್‌ ಜೊತೆ ನಟಿಸಿದ್ದಾರೆ. ಈಗ ಮತ್ತೂಮ್ಮೆ ಆಫ‌ರ್‌ ಬಂದಿದೆ. ಈ ಬಾರಿ ಮೂರು ಭಾಷೆಯಲ್ಲಿ ತಯಾರಾಗುತ್ತಿರುವ ಸಿನಿಮಾ ಇದಾಗಿದ್ದು, ಹಿಂದಿ, ತಮಿಳು, ಮಲಯಾಳಂನಲ್ಲಿ ಈ ಚಿತ್ರ ತಯಾರಾಗಲಿದೆ. ಅಂದಹಾಗೆ, ಇದೊಂದು ಪೌರಾಣಿಕ ಸಿನಿಮಾವಾಗಿದ್ದು, ಚಿತ್ರಕ್ಕೆ “ಕರ್ಣ’ ಎಂದು ಟೈಟಲ್‌ ಇಡಲಾಗಿದೆ.

ಚಿತ್ರದಲ್ಲಿ ಅಮಿತಾಬ್‌ ಬಚ್ಚನ್‌ ಭೀಷ್ಮನ ಪಾತ್ರ ಮಾಡುತ್ತಿದ್ದು, ದುರ್ಯೋದನ ಅಥವಾ ಕರ್ಣನ ಪಾತ್ರದಲ್ಲಿ ಸುದೀಪ್‌ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಇದು ಕೂಡಾ ಮಲ್ಟಿಸ್ಟಾರರ್‌ ಸಿನಿಮಾವಾಗಿದ್ದು, ಅಮಿತಾಬ್‌, ಸುದೀಪ್‌ ಅಲ್ಲದೇ, ತಮಿಳಿನ ವಿಕ್ರಮ್‌ ಕೂಡಾ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಸುದೀಪ್‌ ಅವರನ್ನು ಸಂಪರ್ಕಿಸಿದ್ದು, ಮಾತುಕತೆಯಲ್ಲಿದೆ. 

ಇನ್ನು, ಹಿಂದಿಯಲ್ಲಿ “ಗೋಲ್‌ಮಾಲ್‌’, “ಸಿಂಗಂ’, “ಚೆನ್ನೈ ಎಕ್ಸ್‌ಪ್ರೆಸ್‌’ ಸೇರಿದಂತೆ ಹಲವು ಯಶಸ್ವಿ ಚಿತ್ರಗಳನ್ನು ಕೊಟ್ಟಿರುವ ರೋಹಿತ್‌ ಶೆಟ್ಟಿ ಹೊಸ ಸಿನಿಮಾವೊಂದನ್ನು ನಿರ್ದೇಶಿಸುತ್ತಿದ್ದು, ಆ ಚಿತ್ರದಿಂದಲೂ ಸುದೀಪ್‌ ಅವರಿಗೆ ಆಫ‌ರ್‌ ಬಂದಿದೆ. ಹಾಗಾದರೆ ಈ ಎರಡೂ ಹಿಂದಿ ಸಿನಿಮಾಗಳನ್ನು ಸುದೀಪ್‌ ಒಪ್ಪಿಕೊಳ್ಳುತ್ತಾರಾ ಎಂದರೆ ಡೇಟ್‌ ಮೇಲೆ ಅವಲಂಭಿತ ಎಂಬ ಉತ್ತರ ಬರುತ್ತದೆ.

ಸದ್ಯ ಸುದೀಪ್‌ “ದಿ ವಿಲನ್‌’ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಗಿಸಿದ್ದು, ಇನ್ನು ಹಾಡು ಹಾಗೂ ಕ್ಲೈಮ್ಯಾಕ್ಸ್‌ ಚಿತ್ರೀಕರಣ ಬಾಕಿ ಇದೆ. ಇನ್ನು, “ಪೈಲ್ವಾನ್‌’ ಹಾಗೂ “ಕೋಟಿಗೊಬ್ಬ-3′ ಚಿತ್ರಗಳು ಚಿತ್ರೀಕರಣಕ್ಕೆ ರೆಡಿಯಾಗಿವೆ. ಈ ಎರಡೂ ಸಿನಿಮಾಗಳಿಗೆ ಸುದೀಪ್‌ ಹಂಚಿದ್ದಾರೆ. ಆ ಸಿನಿಮಾಗಳ ಚಿತ್ರೀಕರಣಕ್ಕೆ ತೊಂದರೆಯಾಗದಂತಿದ್ದರೆ ಹಿಂದಿ ಸಿನಿಮಾಗಳನ್ನು ಒಪ್ಪಿಕೊಳ್ಳಲಿದ್ದಾರೆ. 

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.