ಸದಾಶಿವ ಬ್ರಹ್ಮಾವರ್ ನೆರವಿಗೆ ಬಂದ ನಟರು; ಊಹಾಪೋಹಕ್ಕೆ ತೆರೆ


Team Udayavani, Aug 17, 2017, 11:41 AM IST

Sadashiv-b.jpg

ಹಿರಿಯ ಕಲಾವಿದ ಸದಾಶಿವ ಬ್ರಹ್ಮಾವರ್‌ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆಯೇ, ಕನ್ನಡ ಚಿತ್ರರಂಗದ ನಟರು “ಅವರ ನೆರವಿಗೆ ನಾವಿದ್ದೇವೆ’ ಎಂದು ಹೇಳುವ ಮೂಲಕ ಸಹಾಯ ಮಾಡಲು ನಿರ್ಧರಿಸಿದ್ದಾರೆ.

ಬುಧವಾರ ಬೆಳಗ್ಗೆ ಸದಾಶಿವ ಬ್ರಹ್ಮಾವರ್‌ ಅವರ ಬಗ್ಗೆ ಸುದ್ದಿ ಹೊರ ಬೀಳುತ್ತಿದ್ದಂತೆಯೇ, ನಟ ಸುದೀಪ್‌, ಶಿವರಾಜಕುಮಾರ್‌ ಹಾಗೂ ಜಗ್ಗೇಶ್‌ ಅವರು ಸದಾಶಿವ ಅವರ ಸಹಾಯಕ್ಕೆ ಮುಂದಾಗಿದ್ದಾರೆ. ಬಹುತೇಕ ಚಿತ್ರಗಳಲ್ಲಿ ಬಡ ಮೇಷ್ಟ್ರು ಆಗಿ, ಅಸಹಾಯಕ ಅಜ್ಜನಾಗಿ, ದೇವಸ್ಥಾನದ
ಪೂಜಾರಿಯಾಗಿ, ದುಷ್ಟರಿಗೆ ನೀತಿ ಪಾಠ ಹೇಳುವ ಪ್ರಾಮಾಣಿಕ ರಾಜಕಾರಣಿಯಾಗಿ ನಟಿಸುವ ಮೂಲಕ ಗುರುತಿಸಿಕೊಂಡಿದ್ದ ಸದಾಶಿವ ಬ್ರಹ್ಮಾವರ್‌, ಸಂಕಷ್ಟದಲ್ಲಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆಯೇ, ಸುದೀಪ್‌ ಅವರು ತಮ್ಮ ಅಭಿಮಾನಿ ಸಂಘಕ್ಕೆ ಬ್ರಹ್ಮಾವರ್‌ ಅವರನ್ನು ಹುಡುಕಿ ಸಹಾಯ ಮಾಡುವಂತೆ ಸೂಚಿಸಿದ್ದಾರೆ.

ಅಷ್ಟೇ ಅಲ್ಲ, ಶಿವರಾಜಕುಮಾರ್‌ ಅವರು ಕೂಡ ವಿಷಯ ತಿಳಿದು, ನಿರ್ಮಾಪಕ ಕೆ.ಪಿ.ಶ್ರೀಕಾಂತ್‌ ಅವರಿಗೆ ಕರೆ ಮಾಡಿ, ಸದಾಶಿವ ಅವರ ಬಗ್ಗೆ ಇನ್ನಷ್ಟು ಮಾಹಿತಿ ಪಡೆದು, ಸಹಾಯ ಮಾಡುವಂತೆ ಸೂಚಿಸಿದ್ದು, ಆ ಹಿನ್ನೆಲೆಯಲ್ಲಿ ಶ್ರೀಕಾಂತ್‌ ಕೂಡ ಸದಾಶಿವ ಬ್ರಹ್ಮಾವರ್‌ ಅವರು ಮಾತಿಗೆ ಸಿಕ್ಕ ಬಳಿಕ ಮುಂದೇನು ಮಾಡಬೇಕು ಎಂಬುದನ್ನು ನಿರ್ಧರಿಸುವುದಾಗಿ ಹೇಳಿದ್ದಾರೆ.

ಇನ್ನು, ನಟ ಜಗ್ಗೇಶ್‌ ಅವರು ಸಹ, ಸದಾಶಿವ ಬ್ರಹ್ಮಾವರ್‌ ಅವರ ಪರಿಸ್ಥಿತಿ ಬಗ್ಗೆ ತಿಳಿದು, ಟ್ವೀಟ್‌ ಮಾಡುವ ಮೂಲಕ ಅವರ ನೆರವಿಗೆ ನಾವಿದ್ದೇವೆ ಎಂದು ಹೇಳಿದ್ದಾರೆ. “ದಯಮಾಡಿ ವಿಳಾಸ ಮಾಹಿತಿ ನೀಡಿ. ನಾವು ನಮ್ಮ ಕಲಾವಿದರ ಸಂಘ ಅವರಿಗಾಗಿ ಇದ್ದೇವೆ.
ಅವರನ್ನು ಅನಾಥರಾಗಲು ಬಿಡುವುದಿಲ್ಲ. ದುಃಖವಾಯಿತು. ಪಾಪಿ ದುನಿಯಾ, ಯಾಕೆ ಬೇಕು ಇಂತ ಬಂಧುಗಳು’ ಎಂದು ಜಗ್ಗೇಶ್‌ ಟ್ವೀಟ್‌ ಮಾಡಿದ್ದಾರೆ. ಸದಾಶಿವ ಬ್ರಹ್ಮಾವರ್‌ ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ . ಈವರೆಗೆ ಡಾ.ರಾಜಕುಮಾರ್‌, ಅಂಬರೀಷ್‌, ವಿಷ್ಣುವರ್ಧನ್‌, ರವಿಚಂದ್ರನ್‌, ಜಗ್ಗೇಶ್‌, ಶಿವರಾಜಕುಮಾರ್‌, ಉಪೇಂದ್ರ, ದರ್ಶನ್‌, ಸುದೀಪ್‌, ಪುನೀತ್‌ರಾಜಕುಮಾರ್‌ ಸೇರಿದಂತೆ ಇತರೆ ನಟರ ಚಿತ್ರಗಳಲ್ಲಿ ನಟಿಸಿದ್ದಾರೆ.

ನಾನು ಚೆನ್ನಾಗಿದ್ದೇನೆ: ಬ್ರಹ್ಮಾವರ್‌: ಇಷ್ಟೆಲ್ಲಾ ಸುದ್ದಿ ಹರಿದಾಡಿದ ನಂತರ ಸದಾಶಿವ ಬ್ರಹ್ಮಾವರ್‌, ಕೊನೆಗೂ ಕೆಲ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. “ನಾನೆಲ್ಲೂ ಹೋಗಿಲ್ಲ. ನನಗೇನೂ ಆಗಿಲ್ಲ. ನಾನು ಬೈಲಹೊಂಗಲದಲ್ಲಿನ ಮಗನ ಮನೆಯಲ್ಲಿದ್ದೇನೆ. ನಾನು ಪ್ರತಿ ವರ್ಷದಂತೆ ಈ ಸಲವೂ ಬಿಜಾಪುರದಲ್ಲಿರುವ ದಾನಮ್ಮ ದೇವಸ್ಥಾನಕ್ಕೆ ಹೋಗಿದ್ದೆ. ಆದರೆ, ಹಿಂದಿರುಗುವುದು ತಡವಾಗಿದೆ. ಅಷ್ಟಕ್ಕೇ ಇಷ್ಟೆಲ್ಲಾ ಸುದ್ದಿ ಹರಿದಾಡಿದೆ. ನನಗೇನೂ ಆಗಿಲ್ಲ. ನಾನು ಸು ಖವಾಗಿದ್ದೇನೆ’ ಎಂದು ಹೇಳುವ ಮೂಲಕ ಹರಿದಾಡಿದ್ದ ಊಹಾಪೋಹಗಳ ಸುದ್ದಿಗೆ ಸ್ವತಃ ಅವರೇ ತೆರೆ ಎಳೆದಿದ್ದಾರೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.