ಮತ್ತೆ ಒಂದಾದ ಸುದೀಪ್‌-ಪ್ರಿಯಾ ದಂಪತಿ


Team Udayavani, Aug 25, 2017, 6:15 AM IST

Sudeep-25.jpg

ಬೆಂಗಳೂರು: ಬಹುಭಾಷಾ ಖ್ಯಾತ ನಟ ಸುದೀಪ್‌ ದಂಪತಿ ನಡುವಣ ವಿಚ್ಛೇದನ ಪ್ರಕರಣ ಕೊನೆಗೂ ಸುಖಾಂತ್ಯಗೊಂಡಿದೆ. ಸುದೀಪ್‌ ಹಾಗೂ ಅವರ ಪತ್ನಿ ಪ್ರಿಯಾ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿಯನ್ನು ನಗರದ ಕೌಟುಂಬಿಕ ನ್ಯಾಯಾಲಯ 
ದಿಂದ ವಾಪಸ್‌ ಪಡೆದುಕೊಂಡಿದ್ದಾರೆ.

ಈ ಮೂಲಕ ದಾಂಪತ್ಯ ಜೀವನದಲ್ಲಿ ಉಂಟಾಗುವ ಸಣ್ಣ -ಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಮತ್ತೆ ಸಹಬಾಳ್ವೆ ನಡೆಸುವ ಮಹತ್ತರ ತೀರ್ಮಾನಕ್ಕೆ ಬಂದಿದ್ದಾರೆ.

ಸುದೀಪ್‌ ಹಾಗೂ ಅವರ ಪತ್ನಿ ಪ್ರಿಯಾ, ನಮ್ಮೊಳಗಿನ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಬಗೆಹರಿದಿದ್ದು ಒಟ್ಟಿಗೆ ಸಹಬಾಳ್ವೆ ನಡೆಸಲು ತೀರ್ಮಾನಿಸಿದ್ದೇವೆ. ಹೀಗಾಗಿ ಈ ಅರ್ಜಿ ವಿಚಾರಣೆ ಮುಂದುವರಿಸಲು ಆಸಕ್ತಿಯಿಲ್ಲ. ಹೀಗಾಗಿ ಅರ್ಜಿ ವಾಪಸ್‌ ಪಡೆದುಕೊಳ್ಳುತ್ತಿದ್ದೇವೆ ಎಂಬ ಜ್ಞಾಪನಾ ಪತ್ರ (ಮೆಮೋ)ವನ್ನು ಇಬ್ಬರ ವಕೀಲರೂ ಗುರುವಾರ ಕೌಟುಂಬಿಕ ನ್ಯಾಯಾಲಯಕ್ಕೆ ಸಲ್ಲಿಸಿದರು.

ಈ ಜ್ಞಾಪನಾ ಪತ್ರವನ್ನು ಪುರಸ್ಕರಿಸಿದ ನ್ಯಾಯಾಲಯ ದಂಪತಿಯ ವಿಚ್ಛೇದನಾ ಅರ್ಜಿಯನ್ನು ಇತ್ಯರ್ಥಗೊಳಿಸಿತು.”ಸುದೀಪ್‌ ದಂಪತಿ ಸಲ್ಲಿಸಿದ್ದ ಮೆಮೊವನ್ನು ನ್ಯಾಯಾಲಯ ಪುರಸ್ಕರಿಸಿದೆ. ದಂಪತಿ ಮತ್ತೆ ಒಂದಾಗುತ್ತಿರುವುದು ಸಂತಸ ನೀಡಿದೆ” ಎಂದು ಸುದೀಪ್‌ ಪರ ವಕೀಲರಾದ ಭಾಸ್ಕರ್‌ ಬಾಬು ಉದಯವಾಣಿ ಜೊತೆ ಅಭಿಪ್ರಾಯ ಹಂಚಿಕೊಂಡರು.

ಪ್ರಕರಣ ಏನು?: 2001ರಲ್ಲಿ ವಿವಾಹ ಬಂಧನಕ್ಕೊಳಗಾದ ನಟ ಸುದೀಪ್‌ ಹಾಗೂ ಪ್ರಿಯಾಗೆ,2004ರಲ್ಲಿ ಮಗಳು ಸಾನ್ವಿ ಜನಿಸಿದ್ದರು. ಅಲ್ಲದೆ 14 ವರ್ಷ ಜೀವನ ನಡೆಸಿದ್ದ ಸುದೀಪ್‌ ದಂಪತಿ, 2015ರಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯಗಳು, ವೈಯಕ್ತಿಕ ಹೊಂದಾಣಿಕೆ ಹಿನ್ನೆಲೆಯಲ್ಲಿ ಸುದೀಪ್‌ ಹಾಗೂ ಅವರ ಪತ್ನಿ ಪ್ರಿಯಾ ಕೆಲ ಕಾಲ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಕೊನೆಗೆ ವಿಚ್ಛೇದನ ಕೋರಿ, ಅದೇ ವರ್ಷ ಸೆಪ್ಟೆಂಬರ್‌ನಲ್ಲಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಎರಡೂ ಅರ್ಜಿಗಳನ್ನು ವಿಚಾರಣೆಗೆ ಪರಿಗಣಿಸಿದ್ದ ನ್ಯಾಯಾಲಯದ ಹಲವು ಬಾರಿ ವಿಚಾರಣೆ ನಡೆಸಿತ್ತು. ಆದರೆ, ಸುದೀಪ್‌ ಹಾಗೂ ಪ್ರಿಯಾ ವಿಚಾರಣೆಗೆ ಪದೇ ಪದೆ ಗೈರು ಹಾಜರಾಗುತ್ತಿದ್ದರು.

ಈ ಹಿನ್ನೆಲೆಯಲ್ಲಿ ನ್ಯಾಯಾಲಯ, ವಿಚಾರಣೆಗೆ ಸರಿಯಾಗಿ ಹಾಜರಾಗಿ ಇಲ್ಲದಿದ್ದರೆ ಅರ್ಜಿ ವಾಪಾಸ್‌ ಪಡೆದುಕೊಳ್ಳಿ ಎಂದು ಖಡಕ್‌ ಸೂಚನೆ ಕೂಡ ನೀಡಿತ್ತು.ಮತ್ತೂಂದು ಮೂಲಗಳ ಪ್ರಕಾರ, ಡೈವೋ ರ್ಸ್‌ಗೆ ಅರ್ಜಿ ಸಲ್ಲಿಸಿದ ಕೆಲ ತಿಂಗಳುಗಳ ಬಳಿಕ ಮಗಳು ಸಾನ್ವಿ ಸಲುವಾಗಿ ಸುದೀಪ್‌ ಹಾಗೂ ಪ್ರಿಯಾ ಮತ್ತೆ ಒಂದಾಗಲು ನಿರ್ಧರಿಸಿದ್ದರು. ಹೀಗಾಗಿ, ವಿಚಾರಣೆಗೆ ಗೈರು ಹಾಜರಾಗುತ್ತಿದ್ದರು ಎಂದು ಹೇಳಲಾಗುತ್ತಿತ್ತು. ಅದೇ ರೀತಿ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದಂಪತಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಆದರೆ, ನ್ಯಾಯಾಲಯಕ್ಕೆ ಒಮ್ಮೆ ಅರ್ಜಿ ಸಲ್ಲಿಸಿದ ಬಳಿಕ ವಿಚಾರಣೆ ಮುಂದುವರಿಯುತ್ತಲೇ ಇರುತ್ತದೆ. ಖುದ್ದು ಅರ್ಜಿದಾರರು ಪರಸ್ಪರ ಸಮ್ಮತಿ ಮೇರೆಗೆ ನ್ಯಾಯಾಲಯಕ್ಕೆ ಮೆಮೋ ಸಲ್ಲಿಸಿ ಅರ್ಜಿ ವಾಪಸ್‌ ಪಡೆದುಕೊಂಡರೆ ಅರ್ಜಿ ಇತ್ಯರ್ಥವಾಗಲಿದೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.