ವಿಜಯಲಕ್ಷ್ಮೀ ಸಂಕಷ್ಟಕ್ಕೆ ಕಿಚ್ಚನ ಸಹಾಯ ಹಸ್ತ
Team Udayavani, Feb 26, 2019, 5:35 AM IST
ಇತ್ತೀಚೆಗಷ್ಟೇ ನಟಿ ವಿಜಯಲಕ್ಷ್ಮೀ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆರ್ಥಿಕವಾಗಿ ಸಾಕಷ್ಟು ಸಂಕಷ್ಟ ಅನುಭವಿಸುತ್ತಿರುವ ವಿಜಯಲಕ್ಷ್ಮೀ ಆಸ್ಪತ್ರೆಯಲ್ಲಿ ತಮ್ಮ ಚಿಕಿತ್ಸಾ ವೆಚ್ಚವನ್ನು ಭರಿಸಲು ಪರದಾಡುತ್ತಿದ್ದು, ಚಿತ್ರರಂಗದಿಂದ ಸಹಾಯ ಮಾಡುವಂತೆ ಅವರ ಕುಟುಂಬದ ಸದಸ್ಯರು ಮಾಧ್ಯಮಗಳ ಮೂಲಕ ತಮ್ಮ ಅಳಲನ್ನು ತೋಡಿಕೊಂಡಿದ್ದರು.
ಅದಾದ ಬಳಿಕ ಚಿತ್ರರಂಗದಿಂದಲೂ ವಿಜಯಲಕ್ಷ್ಮೀ ಅವರಿಗೆ ನೆರವು ಹರಿದು ಬರಲು ಶುರುವಾಗಿದೆ. ಅನೇಕ ಚಿತ್ರತಂಡಗಳು, ಕಲಾವಿದರು ವಿಜಯಲಕ್ಷ್ಮೀ ಅವರಿಗೆ ನೆರವು ನೀಡುತ್ತಿದ್ದಾರೆ. ಇದರ ನಡುವೆಯೇ ನಟ ಸುದೀಪ್ ಕೂಡ ವಿಜಯಲಕ್ಷ್ಮೀ ಅವರ ನೆರವಿಗೆ ಮುಂದಾಗಿದ್ದಾರೆ. ವಿಜಯಲಕ್ಷ್ಮೀ ಅನಾರೋಗ್ಯದ ವಿಷಯ ತಿಳಿದು ಸುದೀಪ್ ಒಂದು ಲಕ್ಷ ರೂಪಾಯಿಗಳ ಆರ್ಥಿಕ ಸಹಾಯ ಮಾಡಿದ್ದಾರೆ.
ಈ ವಿಷಯವನ್ನು ಟ್ವೀಟ್ ಮೂಲಕ ತಿಳಿಸಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಗೌರವ ಕಾರ್ಯದರ್ಶಿ ಬಾ.ಮಾ ಹರೀಶ್, ಸುದೀಪ್ಗೆ ಧನ್ಯವಾದ ತಿಳಿಸಿದ್ದಾರೆ. ಇನ್ನು ಸುದೀಪ್ ಅವರ ಸಹಾಯ ಕಾರ್ಯಕ್ಕೆ ಚಿತ್ರೋದ್ಯಮದ ಅನೇಕರು, ಅವರ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ