ಉಪೇಂದ್ರ ಅಭಿನಯದ ಕಬ್ಜ ಚಿತ್ರದ ವಿಶೇಷ ಪಾತ್ರದಲ್ಲಿ ಸುದೀಪ್


Team Udayavani, Jan 13, 2021, 7:45 AM IST

ಉಪೇಂದ್ರ ಅಭಿನಯದ ಕಬ್ಜ ಚಿತ್ರದ ವಿಶೇಷ ಪಾತ್ರದಲ್ಲಿ ಸುದೀಪ್

ಆರ್‌. ಚಂದ್ರ ನಿರ್ದೇಶನದ ‘ಕಬ್ಜ’ ಚಿತ್ರದಿಂದ ಒಂದು ಭರ್ಜರಿ ಸುದ್ದಿ ಬಂದಿದೆ. ಈ ಚಿತ್ರದಲ್ಲಿ ಉಪೇಂದ್ರ ಜೊತೆಗೆ ಸುದೀಪ್‌ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರಕ್ಕೆ ಇನ್ನಷ್ಟು ಬಲ ಬಂದಂತಾಗಿದೆ.ಈ ಸಂಕ್ರಾಂತಿಗೆ ಒಂದು ಭರ್ಜರಿ ಸುದ್ದಿ ಕೊಡುವು ದಾಗಿ ಆರ್‌. ಚಂದ್ರು ಘೋಷಿಸಿದ್ದರು.

ಈ ಬಾರಿ ನಾಯಕಿಯ ಘೋಷಣೆ ಯಾಗಲಿದೆ, ಪರಭಾಷೆಯ ದೊಡ್ಡ ನಟರೊಬ್ಬರು ಚಿತ್ರದಲ್ಲಿ ನಟಿಸುವ ಸಾಧ್ಯತೆ ಇದೆ ಎಂಬ ಊಹಾಪೋಹಗಳು ಹರಿದಾಡುತ್ತಿರುವಾಗಲೇ, ಚಿತ್ರದಲ್ಲಿ ಸುದೀಪ್‌ ನಟಿಸುತ್ತಿರುವ ಸುದ್ದಿ ಬಂದಿದೆ.

ಸದ್ಯಕ್ಕೆ ಸುದೀಪ್‌ ಅವರ ಪಾತ್ರವೇನು ಮತ್ತು ಅವರ ಗೆಟಪ್‌ ಹೇಗಿರುತ್ತದೆ ಎಂಬುದನ್ನು ಚಂದ್ರು ಬಹಿರಂಗಪಡಿಸಿಲ್ಲ. ಮುಂಚೆ ನಿಗದಿಯಾದಂತೆ ಸಂಕ್ರಾಂತಿ ಹಬ್ಬದಂದು (ಗುರುವಾರ) ಸುದೀಪ್‌ ಅವರ ಲುಕ್‌ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಆರ್‌. ಚಂದ್ರು ಅವರ ಮಹತ್ವಾಕಾಂಕ್ಷೆಯ ಚಿತ್ರವಾದ ‘ಕಬ್ಜ’, ಕಳೆದ ವರ್ಷದ ಆರಂಭದಲ್ಲೇ ಪ್ರಾರಂಭವಾಗಿತ್ತು. ಕನ್ನಡವಷ್ಟೇ ಅಲ್ಲ ಆಂಧ್ರದಲ್ಲೂ ತೆಲುಗು ಅವತರಣಿಕೆಯ ಮುಹೂರ್ತವಾಗಿತ್ತು. ಈ ಚಿತ್ರವನ್ನು ಏಳು ಭಾಷೆಗಳಲ್ಲಿ ಬಿಡುಗಡೆ ಮಾಡಬೇಕು ಎಂಬುದು ಚಂದ್ರು ಆಸೆ. ಚಿತ್ರಕ್ಕಾಗಿ ಬೆಂಗಳೂರು ಮತ್ತು ಹೈದರಾಬಾದ್‌ನಲ್ಲಿ ವಿಶೇಷ ಸೆಟ್‌ಗಳನ್ನು ನಿರ್ಮಿಸಿ ಅದರಲ್ಲಿ ಚಿತ್ರೀಕರಣ ಮಾಡಿದ್ದರು. ಅಷ್ಟರಲ್ಲಿ ಲಾಕ್‌ಡೌನ್‌ ಘೋಷಣೆಯಾಗಿದ್ದರಿಂದ ಚಿತ್ರೀಕರಣ ನಿಂತಿತ್ತು. ಇದೀಗ ಜನವರಿಯ ಕೊನೆಯ ವಾರದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ.

‘ಕಬ್ಜ’ ಚಿತ್ರವನ್ನು ಆರ್‌ ಚಂದ್ರ, ಶ್ರೀ ಸಿದ್ಧೇಶ್ವರ ಎಂಟರ್‌ಪ್ರೈಸಸ್‌ ಬ್ಯಾನರ್‌ನಡಿ ನಿರ್ಮಿಸುತ್ತಿದ್ದು, ಉಪೇಂದ್ರ ಮತ್ತು ಸುದೀಪ್‌ ಅವರ ಜೊತೆಗೆ ಜಗಪತಿ ಬಾಬು, ರಾಹುಲ್‌ ಜಗತಪ್‌, ಅನೂಪ್‌ ರೇವಣ್ಣ, ಜಾನ್‌ ಕೊಕ್ಕಿನ್‌, ರಾಹುಲ್‌ ದೇವ್‌, ನವೀನ್‌, ಕೋಟ ಶ್ರೀನಿವಾಸ್‌ ರಾವ್‌ ಮುಂತಾದವರು ನಟಿಸುತ್ತಿದ್ದಾರೆ. ರವಿ ಬಸ್ರೂರು ಸಂಗೀತ ಈ ಚಿತ್ರಕ್ಕಿದೆ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.