ಸೀರೆಗಾಗಿ ಸುಧಾ ಹುಡುಕಾಟ!

ಮತ್ತೆ ಬಂದ ನರಸಿಂಹರಾಜು ಪುತ್ರಿ

Team Udayavani, Oct 20, 2019, 3:03 AM IST

Siddi-Seere

ನರಸಿಂಹರಾಜು ಅವರ ಮಗಳು ಸುಧಾ ನರಸಿಂಹರಾಜು ಹಲವು ವರ್ಷಗಳ ನಂತರ ಸಿನಿಮಾವೊಂದರಲ್ಲಿ ನಟಿಸಿದ್ದಾರೆ. ಈಗಾಗಲೇ ಸದ್ದಿಲ್ಲದೇ ಆ ಚಿತ್ರ ಬಿಡುಗಡೆಯೂ ಆಗಿದೆ. ಅಂದಹಾಗೆ, ಆ ಚಿತ್ರದ ಹೆಸರು “ಸಿದ್ದಿ ಸೀರೆ’. ವಿಶೇಷವೆಂದರೆ, ಈ ಚಿತ್ರ ವಿದೇಶಿ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಒಂದಲ್ಲ,ಎರಡಲ್ಲ ಬರೋಬ್ಬರಿ ಒಂಬತ್ತು ವಿಭಾಗದಲ್ಲಿ ಪ್ರಶಸ್ತಿಗೆ ಅರ್ಹವಾಗಿದೆ.

ಹೌದು, ಇತ್ತೀಚಿನ ದಿನಗಳಲ್ಲಿ ಕನ್ನಡದ ಬಹುತೇಕ ಹೊಸಬರ ಚಿತ್ರಗಳು ದೇಶ ಸೇರಿದಂತೆ ವಿದೇಶಿ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು, ನೋಡುಗರ ಮೆಚ್ಚುಗೆ ಪಡೆಯುತ್ತಿವೆ. ಆ ಸಾಲಿಗೆ ಹೊಸಬರ “ಸಿದ್ದಿ ಸೀರೆ’ಯೂ ಸೇರಿದೆ. ಈ ಚಿತ್ರವನ್ನು ಬ್ರಹ್ಮಾನಂದರೆಡ್ಡಿ ಹಾಗು ಕೆ.ಎನ್‌.ಕೃಷ್ಣ ಮೂರ್ತಿ ನಿರ್ದೇಶಿಸಿದ್ದಾರೆ. ಟೆಕ್ಕಿ ನವೀನ್‌ ಕುಮಾರ್‌ ನಿರ್ಮಾಣ ಮಾಡಿದ್ದಾರೆ. ಸಿನಿಮಾ ಕಥೆ ಬಗ್ಗೆ ಹೇಳುವುದಾದರೆ, ಇದೊಂದು ದಲಿತ ಮಹಿಳೆಯೊಬ್ಬಳ ಸೀರೆ ಕಥೆ.

ಆಕೆ ತನಗೆ ಸದ್ಗತಿ ದೊರಕಿಸುವ ಒಂದು ಸೀರೆಗಾಗಿ ಹೋರಾಟ ಮಾಡುವುದು ಚಿತ್ರದ ಹೈಲೈಟ್‌. 1990ರ ದಶಕದಲ್ಲಿ ಚಾಮರಾಜನಗರ ಬಳಿ ಇರುವ ಮಿರ್ಲೆ ಎಂಬ ಗ್ರಾಮದಲ್ಲಿ ನಡೆದಂತ ಸತ್ಯಘಟನೆ ಆಧರಿಸಿ, ಈ ಚಿತ್ರ ಮಾಡಲಾಗಿದೆ. ಆಗೆಲ್ಲಾ ಹಿರಿಯ ಮಹಿಳೆ ಸಾವನ್ನಪ್ಪಿದರೆ ಆಕೆಯ ಮೇಲೆ ಸೀರೆ ಹೊದಿಸಲಾಗುತ್ತಿತ್ತು. ಗುಣಮಟ್ಟದ ಸೀರೆ ಹೊದಿಸಿಕೊಂಡರೆ ಸ್ವರ್ಗಕ್ಕೆ ಹೋಗುತ್ತಾರೆ ಎಂಬ ನಂಬಿಕೆ ಆ ಮಹಿಳೆಯದು.

ಆದರೆ, ಆಕೆ ಬಡವಿ. ಸೀರೆ ಕೊಳ್ಳಲು ಸಾಧ್ಯವಾಗಲ್ಲ. ಅದಕ್ಕಾಗಿ ಹೇಗೆಲ್ಲಾ ಪರದಾಡುತ್ತಾಳೆ. ಆಕೆಯ ಸೀರೆ ವಿಷಯ ಎಷ್ಟೆಲ್ಲಾ ರಾಜಕೀಯ ತಿರುವು ಪಡೆದು, ಆ ಊರಲ್ಲಿ ಚರ್ಚೆಗೆ ಗ್ರಾಸವಾಗುತ್ತದೆ ಎಂಬುದು ಕಥಾಹಂದರ. ಇಲ್ಲಿ ಸುಧಾನರಸಿಂಹರಾಜು ಸಿದ್ದಿ ಪಾತ್ರದಲ್ಲಿ ನಟಿಸಿದ್ದಾರೆ. ತುಂಬ ವರ್ಷಗಳ ಬಳಿಕ ತೆರೆ ಮೇಲೆ ಕಾಣಿಸಿಕೊಂಡರೂ ಅದೊಂದು ಹೊಸಬಗೆಯ ಪಾತ್ರ ಎಂಬುದು ಅವರ ಮಾತು. ಆ ಪಾತ್ರಕ್ಕೆ ಮೇಕಪ್‌ ಇಲ್ಲದೆ, ಗಲೀಜು ಬಟ್ಟೆ ಹಾಕಿಕೊಂಡೇ ನಟಿಸಿದ್ದು ವಿಶೇಷವಂತೆ.

ಅದೊಂದು ಚಾಲೆಂಜ್‌ ಪಾತ್ರ ಎನ್ನುವ ಸುಧಾ ನರಸಿಂಹರಾಜು, ಇಡೀ ಚಿತ್ರ ನೋಡುಗರಿಗೆ ಹೊಸತನ ಕಟ್ಟಿಕೊಡುತ್ತದೆ ಎನ್ನುತ್ತಾರೆ ಅವರು. ಇನ್ನು, ಚಿತ್ರದಲ್ಲಿ ಸಿದ್ದಿ ಪುತ್ರಿಯಾಗಿ ಮಹಾಲಕ್ಷೀ ಬಜಾರಿಯಾಗಿ ಕಾಣಿಸಿಕೊಂಡರೆ, ಕವಿತಾ ಶೆಟ್ಟಿ ಪಕ್ಕದ ಮನೆ ಹೆಣ್ಣಾಗಿ ಕಾಣಿಸಿಕೊಂಡಿದ್ದಾರೆ. ಸ್ವರ್ಣ ಚಂದ್ರ ಸಹೋದರನ ಪಾತ್ರ ಮಾಡಿದ್ದಾರೆ. ಚಿತ್ರಕ್ಕೆ ರವಿಶಂಕರ್‌ ಮಿರ್ಲೆ ಅವರು ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಜೈ ಕೃಪಲಾನಿ ಛಾಯಾಗ್ರಹಣ ಮಾಡಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.