ರಂಜನಿ ಎಂಬ ಸೂಫಿ


Team Udayavani, Jan 6, 2018, 10:21 AM IST

ranjani.jpg

ಕಿರುತೆರೆ ನಟಿಯರು ಬೆಳ್ಳಿತೆರೆಗೆ ಬರುತ್ತಿರುವುದು ಹೊಸದೇನಲ್ಲ. ಹಾಗೆ ಬಂದವರು ಅನೇಕರು. ಆದರೆ, ಉಳಿದದ್ದು ಬೆರಳೆಣಿಕೆಯಷ್ಟು ನಟಿಯರು. ಆ ಸಾಲಿಗೆ ರಂಜನಿ ರಾಘವನ್‌ ಕೂಡ ಸೇರುತ್ತಾರೆ ಎನ್ನಬಹುದು. ಕಾರಣ, ರಂಜನಿ ರಾಘವನ್‌ ಈಗ ಮತ್ತೂಂದು ಚಿತ್ರ ಒಪ್ಪಿದ್ದಾರೆ. ಅಷ್ಟೇ ಅಲ್ಲ, ಇನ್ನೂ ಎರಡು ಚಿತ್ರಗಳ ಮಾತುಕತೆಯೂ ಅಂತಿಮವಾಗಿದೆ.

“ಪುಟ್ಟಗೌರಿ ಮದುವೆ’ ಖ್ಯಾತಿಯ ರಂಜನಿ ರಾಘವನ್‌, “ರಾಜಹಂಸ’ ಚಿತ್ರದ ಬಳಿಕ ಒಪ್ಪಿಕೊಂಡ ಚಿತ್ರ ಯಾವುದು ಗೊತ್ತಾ? “ಸೂಫಿ’. ಚಿತ್ರದ ಶೀರ್ಷಿಕೆಯೇ ಹೇಳುವಂತೆ ಇದೊಂದು ಸಂಗೀತಕ್ಕೆ ಸಂಬಂಧಿಸಿದ ಪದ. ಇಲ್ಲಿ ರಂಜನಿ ಅವರು ಟೈಟಲ್‌ ಪಾತ್ರ ನಿರ್ವಹಿಸುತ್ತಿದ್ದಾರೆ ಎಂಬುದು ವಿಶೇಷ. ಇಡೀ ಚಿತ್ರದ ಕಥೆ ಕೂಡ ಅವರ ಸುತ್ತವೇ ಸಾಗಲಿದೆ. ಇನ್ನು, ಈ ಚಿತ್ರಕ್ಕೆ ಶಿವು ಜಮಖಂಡಿ ನಿರ್ದೇಶಕರು.

ವಿಜಯ್‌ ರಾಘವೇಂದ್ರ ಅಭಿನಯದ “ನನ್ನ ನಿನ್ನ ಪ್ರೇಮಕಥೆ’ ಬಳಿಕ ಶಿವು ಜಮಖಂಡಿ ನಿರ್ದೇಶಿಸುತ್ತಿರುವ ಚಿತ್ರವಿದು. ಈ ಚಿತ್ರಕ್ಕೆ ವಿನೋದ್‌ ಪಾಟೀಲ್‌ ಹೀರೋ. “ಜಸ್ಟ್‌ ಆಕಸ್ಮಿಕ’ ಚಿತ್ರ ಮಾಡಿದ್ದ ವಿನೋದ್‌ ಪಾಟೀಲ್‌ಗೆ “ಸೂಫಿ’ ಎರಡನೇ ಚಿತ್ರ. ಇದೊಂದು ಮ್ಯೂಸಿಕಲ್‌ ಜರ್ನಿ ಸಿನಿಮಾ ಎನ್ನುವ ರಂಜನಿ, “ಇಡೀ ಚಿತ್ರ ಸೂಫಿ ಸಂಗೀತದ ಹಿನ್ನೆಲೆಯಲ್ಲೇ ಸಾಗಲಿದೆ. ನನ್ನ ಪಾತ್ರಕ್ಕೆ ತುಂಬಾ ಪ್ರಾಮುಖ್ಯತೆ ಕೊಡಲಾಗಿದೆ.

ಅದೊಂದು ರೀತಿ ಬಜಾರಿಯಂತಹ ಪಾತ್ರವದು. “ರಾಜ ಹಂಸ’ ಚಿತ್ರದ ಬಳಿಕ ಕೇಳಿದ ಕಥೆಗಳ ಸಂಖ್ಯೆ ಎಂಟು. ಆ ಪೈಕಿ ಮಿಸ್‌ ಆಗಿದ್ದು ಎರಡು. ಬಿಟ್ಟಿದ್ದು ಆರು. ಮಿಸ್‌ ಆಗೋಕೆ ಕಾರಣ, ಡೇಟ್ಸ್‌. ಕೈ ಬಿಡಲು ಕಾರಣ ಕಥೆ, ಪಾತ್ರ ಹೊಂದಿಕೆಯಾಗಲ್ಲ ಎಂಬುದಕ್ಕೆ. ಸುಮ್ಮನೆ ಬಂದು ಹೋಗುವ ಪಾತ್ರಗಳಲ್ಲಿ ಕಾಣಿಸಿಕೊಳ್ಳಲು ನನಗೆ ಇಷ್ಟವಿರಲಿಲ್ಲ. ಹಾಗಾಗಿ, ಒಂದಷ್ಟು ಚಿತ್ರಗಳನ್ನು ಕೈ ಬಿಟ್ಟದ್ದು ನಿಜ. “ರಾಜಹಂಸ’ ನನಗೊಂದು ಒಳ್ಳೆಯ ಇಮೇಜ್‌ ತಂದುಕೊಡು.

ಆ ಚಿತ್ರ ನೋಡಿದವರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದರು. ಅದರಿಂದ ಒಂದಷ್ಟು ಅವಕಾಶಗಳೂ ಬಂದಿದ್ದುಂಟು. ಹಾಗೆ ಬಂದ ಅವಕಾಶಗಳಲ್ಲಿ “ಸೂಫಿ’ ಚಿತ್ರವೂ ಒಂದು’ ಎಂದು ಹೇಳಿಕೊಳ್ಳುತ್ತಾರೆ ರಂಜನಿ. ಫೆಬ್ರವರಿಯಲ್ಲಿ ಚಿತ್ರೀಕರಣ ಶುರುವಾಗಲಿದ್ದು, ಸುಮಾರು 50 ದಿನಗಳ ಚಿತ್ರೀಕರಣ ನಡೆಯಲಿದೆ. “ನನ್ನ ನಿನ್ನ ಪ್ರೇಮಕಥೆ’ ಚಿತ್ರದಲ್ಲಿ ಕೆಲಸ ಮಾಡಿದ ಬಹುತೇಕ ತಂಡ ಇಲ್ಲಿ ಕೆಲಸ ಮಾಡಲಿದೆ. ಚಿತ್ರದಲ್ಲಿ ದೇವರಾಜ್‌, ರಮೇಶ್‌ ಭಟ್‌ ಸೇರಿದಂತೆ ಹಲವರು ನಟಿಸುತ್ತಿದ್ದಾರೆ ಎನ್ನುತ್ತಾರೆ ರಂಜನಿ.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.