ಡಯಾಬಿಟಿಸ್ ಸುತ್ತ ಶುಗರ್ಲೆಸ್ ಸಿನಿಮಾ
ಶಶಿಧರ್ ನಿರ್ಮಾಣ- ನಿರ್ದೇಶನ
Team Udayavani, Aug 12, 2020, 11:42 AM IST
“ಡಾಟರ್ ಆಫ್ ಪಾರ್ವತಮ್ಮ ‘ ಸಿನಿಮಾ ನಿರ್ಮಿಸಿದ್ದ ಶಶಿಧರ್ ಕೆ.ಎಂ. ಇದೀಗ ಹೊಸದೊಂದು ಕಥೆ ಬರೆದು, ನಿರ್ದೇಶನ ಮಾಡಲು ಮುಂದಾಗಿದ್ದಾರೆಂಬ ಸುದ್ದಿಯನ್ನು ನೀವು ಈ ಹಿಂದೆ ಇದೇ ಬಾಲ್ಕನಿಯಲ್ಲಿ ಓದಿದ್ದೀರಿ. ಆಗ ಆ ಚಿತ್ರಕ್ಕೆ ಟೈಟಲ್ ಫಿಕ್ಸ್ ಆಗಿರಲಿಲ್ಲ. ಈಗ ಚಿತ್ರಕ್ಕೆ ಟೈಟಲ್ ಇಟ್ಟಿದೆ ಚಿತ್ರತಂಡ. ಚಿತ್ರಕ್ಕೆ ಶುಗರ್ಲೆಸ್ ಎಂದು ಟೈಟಲ್ ಇಡಲಾಗಿದೆ.
ಎಲ್ಲಾ ಓಕೆ, ಈ ಟೈಟಲ್ ಇಡಲು ಕಾರಣವೇನು ಎಂದು ನೀವು ಕೇಳಬಹುದು. ಅದಕ್ಕೆ ಕಾರಣ ಚಿತ್ರದ ಕಥೆ. ಅದು ಡಯಾಬಿಟಿಸ್ ಕುರಿತಾಗಿದೆ. ಈ ವಿಷಯ ಇಟ್ಟುಕೊಂಡು ಒಂದು ಬ್ಲಾಕ್ ಕಾಮಿಡಿ ಜೊತೆಗೆ ಗಂಭೀರ ವಿಷಯ ಹೇಳಲು ಮುಂದಾಗಿದ್ದಾರೆ. ಅವರು ಹೇಳುವಂತೆ, ಇಂದು ಡಯಾಬಿಟಿಕ್ ಅನ್ನೋದು, ಮಕ್ಕಳಿಂದ ಹಿಡಿದು ದೊಡ್ಡವರಿಗೂ ಇದೆ. ಆದರೆ, ಅದೇ ಸುಮಾರು 30 ವರ್ಷದ ಯುವಕನಿಗೆ ಡಯಾ ಬಿಟಿಸ್ ಬಂದಾಗ, ಅವರ ಬದುಕು ಹೇಗೆ ಇರುತ್ತೆ. ನಿತ್ಯ ಅವನ ಲೈಫ್ನಲ್ಲಿ ಏನೆಲ್ಲಾ ಏರಿಳಿತಗಳು ಆಗುತ್ತವೆ. ಸಮಾಜದಲ್ಲಿ ಆ ವಿಷಯವನ್ನು ಹೇಳಿಕೊಳ್ಳಲೂ ಆಗದ ವ್ಯಕ್ತಿಗಳು ಎಷ್ಟೆಲ್ಲಾ ಯಾತನೆ ಅನು ಭವಿಸುತ್ತಾರೆ ಎಂಬುದನ್ನು ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ. ಯಾವ ಭಾಷೆಯಲ್ಲೂ ಈ ಕಂಟೆಂಟ್ ಇರದ ಕಾರಣ, ಅವರು ಇದನ್ನೇ ಇಟ್ಟು ಕೊಂಡು ಹೊದ ವ್ಯಾಖ್ಯಾನದೊಂದಿಗೆ ಸಿನಿಮಾ ಮಾಡಲು ಹೊರಟಿದ್ದಾರೆ.
ದಿಶಾ ಎಂಟರ್ಟೈನರ್ಸ್ ಬ್ಯಾನರ್ನಲ್ಲಿ ಈ ಚಿತ್ರ ನಿರ್ಮಿಸುತ್ತಿದ್ದು, ಶಶಿಧರ್ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯಕ್ಕೆ ಸ್ಕ್ರಿಪ್ಟ್ ಕೆಲಸ ಮುಗಿದಿದ್ದು ಶಶಿಧರ್ ಅವರ ಕಥೆ ಕೇಳಿ ಫಿದಾ ಆದ ನಿರ್ಮಾಪಕ ಪುಷ್ಕರ್ ಶಶಿಧರ್ ಜೊತೆ ಕೈ ಜೋಡಿಸಿದ್ದು, ಪುಷ್ಕರ್ ಫಿಲಂಸ್ ಸಹಯೋಗವಿದೆ. ಈ ಬಗ್ಗೆ ಮಾತನಾಡುವ ಪುಷ್ಕರ್, “ಕಥೆ ಕೇಳಿದೆ. ತುಂಬಾ ಅದ್ಭುತವಾಗಿತ್ತು. ಒಂದೊಳ್ಳೆಯ ಸಿನಿಮಾವಾಗುವ ಲಕ್ಷಣವಿದೆ. ಆ ಕಾರಣದಿಂದಲೇ ನನ್ನ ಬ್ಯಾನರ್ನಲ್ಲಿ ಪ್ರಸೆಂಟ್ ಮಾಡುತ್ತಿದ್ದೇನೆ’ ಎನ್ನುತ್ತಾರೆ. ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಈಗ ಶಶಿಧರ್ ಅವರು ಪ್ರಜ್ವಲ್ ದೇವರಾಜ್ ಅಭಿನಯದ “ವೀರಂ’ ನಿರ್ಮಾಣ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ