![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Sandalwood: ಶೂಟಿಂಗ್ ಮುಗಿಸಿದ ‘ಸುಮಾ’; ಮಹಿಳಾ ಪ್ರಧಾನ ಚಿತ್ರ
Team Udayavani, Jun 10, 2024, 5:36 PM IST
![Sandalwood: ಶೂಟಿಂಗ್ ಮುಗಿಸಿದ ‘ಸುಮಾ’; ಮಹಿಳಾ ಪ್ರಧಾನ ಚಿತ್ರ](https://www.udayavani.com/wp-content/uploads/2024/06/suma-620x342.jpg)
ಮಹಿಳಾ ಪ್ರಧಾನ ಕಥಾಹಂದರ ಹೊಂದಿರುವ “ಸುಮಾ’ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಸುಮಾ ಚಿತ್ರದ ಚಿತ್ರೀಕರಣ ಮಂಡ್ಯ ಜಿಲ್ಲೆಯ ಕೆ ಎಂ ದೊಡ್ಡಿ, ಆಲಭುಜನಹಳ್ಳಿ, ನಗರಕೆರೆ ಮತ್ತು ಮಾಲಗಾರನಹಳ್ಳಿಯ ಸುತ್ತಮುತ್ತ ಒಟ್ಟು 20 ದಿನಗಳ ಕಾಲ ಚಿತ್ರೀಕರಣ ಮಾಡಿದೆ.
ರಶ್ಮಿ ಎಸ್. “ಸುಮಾ’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದು, ಮೈಸೂರು ಮೂಲದ ಪ್ರದೀಪ್ ಗೌಡ ನಾಯಕನಾಗಿ, ನಾಯಕಿಯಾಗಿ ಮೊದಲ ಬಾರಿಗೆ ಮಾನ್ಯತಾ ನಾಯ್ಡು, ಉಳಿದಂತೆ ಬಾಲ ರಾಜವಾಡಿ, ಜೋ ಸೈಮನ್, ಮುರಳೀಧರ್ ಡಿ. ಆರ್, ಕಾವ್ಯ ಪ್ರಕಾಶ್ ಹಾಗೂ ಅತಿಥಿ ಪಾತ್ರದಲ್ಲಿ ಡಾ ವಿ ನಾಗೇಂದ್ರ ಪ್ರಸಾದ್ ಅಭಿನಯಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಚಿತ್ರತಂಡ, ಇದೊಂದು ಮಹಿಳಾ ಪ್ರಧಾನ ಕಥಾಹಂದರದ ಸಿನಿಮಾ. “ಸುಮಾ’ ಅಂದ್ರೆ ಸಂಪೂರ್ಣ ಮೊಗ್ಗು ಅಲ್ಲದ, ಸಂಪೂರ್ಣ ಅರಳಿಯೂ ಇರದಂತಹ ಹೂವು. ಈ ಸಿನಿಮಾದ ನಾಯಕಿಯ ಪಾತ್ರ ಕೂಡ ಹಾಗೇ ಇರುವಂಥದ್ದು. ನಮ್ಮ ನಡುವೆಯೇ ಇರುವಂಥ ಹುಡುಗಿಯೊಬ್ಬಳ ಅಂತರಂಗದ ಕಥೆ ಈ ಸಿನಿಮಾದಲ್ಲಿದೆ ಎನ್ನುತ್ತದೆ.
ಸಿನಿಮಾದ ಹಾಡುಗಳಿಗೆ ವೇದಾಂತ್ ಅತಿಶಯ್ ಜೈನ್ ಸಂಗೀತವಿದ್ದು, ಸತೀಶ್ ಜೋಶಿ ಹಾವೇರಿ ಮತ್ತು ಪ್ರದೀಪ್ ಗೌಡರವರ ಸಾಹಿತ್ಯವಿದೆ. ಮೇಘನ ಹಳಿಯಾಳ ಮತ್ತಿತರರು ಹಾಡುಗಳಿಗೆ ಧ್ವನಿಯಾಗಲಿದ್ದು, ಸಿನಿಮಾಕ್ಕೆ ರಂಗಸ್ವಾಮಿ ಟಿ (ರವಿ) ಸಹ ನಿರ್ಮಾಪಕರಾಗಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.