ಸಸ್ಪೆನ್ಸ್‌-ಥ್ರಿಲ್ಲರ್‌ “ಸ್ತಬ್ಧ”: ರಾಘವೇಂದ್ರ ರಾಜಕುಮಾರ್‌ ನಟನೆ


Team Udayavani, Jan 28, 2022, 10:40 AM IST

ಸಸ್ಪೆನ್ಸ್‌-ಥ್ರಿಲ್ಲರ್‌ “ಸ್ತಬ್ಧ”: ರಾಘವೇಂದ್ರ ರಾಜಕುಮಾರ್‌ ನಟನೆ

ಹಿರಿಯ ನಟ ರಾಘವೇಂದ್ರ ರಾಜಕುಮಾರ್‌ ಅಭಿನಯದ ಹೊಸಚಿತ್ರ “ಸ್ತಬ್ಧ’ ಚಿತ್ರಕ್ಕೆ ಇತ್ತೀಚೆಗೆ ಚಾಲನೆ ಸಿಕ್ಕಿದೆ. ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕ ರಾಮಲಿಂಗ ರೆಡ್ಡಿ ಅವರ ಪುತ್ರ ಶ್ರೀರಾಜ್‌ ರಾಮಲಿಂಗಾರೆಡ್ಡಿ ಕ್ಲಾಪ್‌ ಮಾಡಿದರೆ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್‌ ಕ್ಯಾಮೆರಾ ಸ್ವಿಚ್‌ ಆನ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ಮಾಡಿದರು. ಶಾಸಕಿ ಸೌಮ್ಯ ರೆಡ್ಡಿ, ಮಮತಾ ದೇವರಾಜ್‌ ಮುಂತಾದ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದು, ಚಿತ್ರತಂಡಕ್ಕೆ ಶುಭ ಕೋರಿದರು. “ಸಾಯಿ ಸಾಗರ್‌ ಫಿಲಂ ಫ್ಯಾಕ್ಟರಿ’ ಬ್ಯಾನರ್‌ನಲ್ಲಿ ಡಾ. ಡಿ. ವಿ ವಿದ್ಯಾಸಾಗರ್‌ ನಿರ್ಮಿಸುತ್ತಿರುವ “ಸ್ತಬ್ಧ’ ಚಿತ್ರಕ್ಕೆ ಲಾಲಿ ರಾಘವ ನಿರ್ದೇಶನ ಮಾಡುತ್ತಿದ್ದಾರೆ.

ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಲಾಲಿ ರಾಘವ, “ಈಗಾಗಲೇ ತಮಿಳಿನಲ್ಲಿ ಒಂದು ಸಿನಿಮಾ ನಿರ್ದೇಶಿಸಿರುವ ನನಗೆ ಇದು ಎರಡನೇ ಸಿನಿಮಾ. ಮನುಷ್ಯನ ಮನಸ್ಸು, ಸ್ಥಿಮಿತತೆ ಕಳೆದುಕೊಂಡು ಭ್ರಮಾಲೋಕಕ್ಕೆ ಪಯಣಿಸಿದಾಗ, ಆಗುವಂತಹ ಪರಿಣಾಮಗಳು ಮತ್ತು ಅದರಿಂದ ಹೊರಬರಲು ನಾಯಕ ನಡೆಸುವ ಹೋರಾಟದ ಸುತ್ತ ಇಡೀ ಸಿನಿಮಾದ ಕಥೆ ಸಾಗುತ್ತದೆ’ ಎಂದು ಕಥಾಹಂದರ ತೆರೆದಿಟ್ಟರು.

“ಈ ಸಿನಿಮಾದಲ್ಲಿ ಕಥೆಯೇ ಹೈಲೈಟ್‌. ಇದೊಂದು ಸಸ್ಪೆನ್ಸ್‌ ಸಿನಿಮಾವಾಗಿರುವುದರಿಂದ ಕಥೆಯ ಬಗ್ಗೆ ಹೆಚ್ಚೇನೂ ಹೇಳುವಂತಿಲ್ಲ. ನನಗೆ ಇಲ್ಲೊಂದು ಒಳ್ಳೆಯ ಪಾತ್ರವಿದೆ. ಒಂದೊಳ್ಳೆ ಸಿನಿಮಾ ಎದುರು ನೋಡುತ್ತಿದ್ದೇವೆ’ ಎನ್ನುವುದು ರಾಘವೇಂದ್ರ ರಾಜಕುಮಾರ್‌ ಮಾತು.

ಚಿತ್ರದ ಬಗ್ಗೆ ಮಾತನಾಡಿದ ನಟಿ ಹರ್ಷಿಕಾ ಪೂಣಚ್ಛ, “ನನ್ನ ಮೊದಲ ಸಿನಿಮಾದ ನಂತರ ರಾಘಣ್ಣ ಫೋನ್‌ ಮಾಡಿ, ನಮ್ಮ ಪ್ರೊಡಕ್ಷನ್ಸ್‌ನಲ್ಲಿ ನಿರ್ಮಾಣವಾಗುತ್ತಿರುವ “ಜಾಕಿ’ ಸಿನಿಮಾದಲ್ಲಿ ನೀವು ನಟಿಸಬೇಕೆಂದರು. ಆಗ ನನಗಾದ ಖುಷಿ ಅಷ್ಟಿಷ್ಟಲ್ಲ. ಈಗಾಗಲೇ ಶಿವಣ್ಣ, ಪುನೀತ್‌ ಸರ್‌ ಜೊತೆ ನಟಿಸಿದ್ದರೆ, ಈ ಸಿನಿಮಾದಲ್ಲಿ ರಾಘಣ್ಣ ಅವರ ಮಗಳಾಗಿ ಅಭಿನಯಿಸುತ್ತಿದ್ದೇನೆ. ಡಾ. ರಾಜಕುಮಾರ್‌ ಅವರ ಮೂರು ಮಕ್ಕಳ ಜೊತೆ ನಟಿಸುವ ಭಾಗ್ಯ ನನಗೆ ಸಿಕ್ಕಿರುವ ಸಂತೋಷವಿದೆ’ ಎಂದರು.

ಇನ್ನು ಪ್ರತಾಪ್‌ ಸಿಂಹ, ಹರ್ಷಿಕಾ ಪೂಣತ್ಛ, ಪ್ರಶಾಂತ್‌ ಸಿದ್ಧಿ, ಶ್ರುತಿ, ಯಶ್‌ ಶೆಟ್ಟಿ, ಜಯಶ್ರೀ ಆರಾಧ್ಯ, ಬೇಬಿ ಅಂಕಿತಾ, ಮಾ. ಚಿನ್ಮಯ್‌, ಪ್ರಿಯಾಂಕಾ, ಮಂಜುಳಾ, ಶಿವಕುಮಾರ್‌ ಆರಾಧ್ಯ, ರತ್ನ ಕುಮಾರಿ, ರಾಜು ನಾಯಕ್‌, ಕುಮಾರ್‌ ಎಸ್‌. ಮೊದಲಾದವರು “ಸ್ತಬ್ಧ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಹಂಸಲೇಖ ಸಾಹಿತ್ಯವಿದ್ದು, ಆರವ್‌ ರಿಷಿಕ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಪಿ.ವಿ. ಆರ್‌ ಸ್ವಾಮಿ ಛಾಯಾಗ್ರಹಣ, ಥ್ರಿಲ್ಲರ್‌ ಮಂಜು ಸಾಹಸ ನಿರ್ದೇಶನವಿದೆ.

– ರವಿ ರೈ

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.