ಬಾಲಿವುಡ್‌ ಆಲ್ಬಂ ಸಾಂಗ್‌ಗೆ ಟಗರು ಪುಟ್ಟಿ ಸ್ಟೆಪ್ಪು

ಡ್ಯಾನ್ಸ್‌ ಮಾಸ್ಟರ್‌ ಗಣೇಶ್‌ ಆಚಾರ್ಯ ಗುಣಗಾನ ಮಾಡಿದ ಮಾನ್ವಿತಾ

Team Udayavani, Jun 17, 2019, 3:00 AM IST

Manvitha

“ಟಗರು’ ಪುಟ್ಟಿ ಅಂತಾನೇ ಕರೆಸಿಕೊಳ್ಳುವ ಮಾನ್ವಿತಾ ಹರೀಶ್‌, ತಮ್ಮ ಹೆಸರಲ್ಲೊಂದು ಸಣ್ಣ ಬದಲಾವಣೆ ಮಾಡಿಕೊಂಡು ಮಾನ್ವಿತಾ ಕಾಮತ್‌ ಆಗಿದ್ದು ಎಲ್ಲರಿಗೂ ಗೊತ್ತೇ ಇದೆ. “ಟಗರು’ ಬಳಿಕ ಮಾನ್ವಿತಾ ನಾಗತಿಹಳ್ಳಿ ಚಂದ್ರಶೇಖರ್‌ ನಿರ್ದೇಶನದ ಚಿತ್ರದಲ್ಲಿ ನಟಿಸಿದ್ದಾಗಿದೆ. ಆ ಬಳಿಕ ಮಾನ್ವಿತಾ ಕನ್ನಡದ ಯಾವ ಚಿತ್ರದಲ್ಲೂ ನಟಿಸುವ ಕುರಿತು ಸುದ್ದಿ ಹೊರಬೀಳಲಿಲ್ಲ.

ಅತ್ತ, ಮರಾಠಿ ಚಿತ್ರವೊಂದರಲ್ಲಿ ನಟಿಸುತ್ತಿರುವುದಾಗಿ ಸ್ವತಃ ಮಾನ್ವಿತಾ ಅವರೇ ಹೇಳಿಕೊಂಡಿದ್ದರು. ಮರಾಠಿ ಚಿತ್ರದಲ್ಲಿ ನಟಿಸುತ್ತಲೇ ಅವರೀಗ ಬಾಲಿವುಡ್‌ ಅಂಗಳಕ್ಕೂ ಜಿಗಿದಿದ್ದಾರೆ. ಹಾಗಂತ, ಮಾನ್ವಿತಾ ಬಾಲಿವುಡ್‌ ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಂಡಿಲ್ಲ. ಬದಲಾಗಿ ಅವರು ಹಿಂದಿ ಆಲ್ಬಂ ಸಾಂಗ್‌ವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಹೌದು, ಮಾನ್ವಿತಾ ಅವರು ಇತ್ತೀಚೆಗೆ ಬಾಲಿವುಡ್‌ ಆಲ್ಬಂ ಸಾಂಗ್‌ಗೆ ಹೆಜ್ಜೆ ಹಾಕಿದ್ದಾರೆ. ಅವರ ಹಾಡಿಗೆ ನೃತ್ಯ ನಿರ್ದೇಶನ ಮಾಡಿರುವುದು ಬಾಲಿವುಡ್‌ನ‌ ಟಾಪ್‌ ಡ್ಯಾನ್ಸ್‌ ಮಾಸ್ಟರ್‌ ಗಣೇಶ್‌ ಆಚಾರ್ಯ. ಅವರೊಂದಿಗೆ ಕೆಲಸ ಮಾಡಿರುವ ಮಾನ್ವಿತಾ ಅವರಿಗಂತೂ ಎಲ್ಲಿಲ್ಲದ ಖುಷಿ. ಬಾಲಿವುಡ್‌ ಅಂಗಳಕ್ಕೆ ಹೋಗುವುದಿರಲಿ, ಅಲ್ಲಿನ ಹಿಂದಿ ಆಲ್ಬಂ ಸಾಂಗ್‌ನಲ್ಲಿ ಕಾಣಿಸಿಕೊಳ್ಳುತ್ತೇನೆ,

ಗಣೇಶ್‌ ಆಚಾರ್ಯ ಅವರು ಸ್ಟೆಪ್‌ ಹೇಳಿಕೊಡುತ್ತಾರೆ ಅಂತ ಸ್ವತಃ ಮಾನ್ವಿತಾ ಅವರಿಗೇ ಗೊತ್ತಿರಲಿಲ್ಲ. ಈಗ ಅದು ನಿಜವಾಗಿದೆ. ಈ ಖುಷಿ ಹಂಚಿಕೊಂಡಿರುವ ಮಾನ್ವಿತಾ, ಪುಲ್ವಾಮ ದಾಳಿಯಲ್ಲಿ ವೀರಮರಣ ಹೊಂದಿದ ನಮ್ಮ ಯೋಧರಿಗೆ ಆ ಹಾಡನ್ನು ಅರ್ಪಿಸಲಾಗಿದೆ. ಅದೊಂದು ವಿಶೇಷವಾಗಿರುವಂತಹ ಹಾಡು. ಆ ಹಾಡಿಗೆ ಗಣೇಶ್‌ ಆಚಾರ್ಯ ಅವರು ನೃತ್ಯ ನಿರ್ದೇಶಿಸಿದ್ದಾರೆ.

ಅವರೊಂದಿಗೆ ಕೆಲಸ ಮಾಡಿದ ಅನುಭವ ಅನನ್ಯ. ಇನ್ನು, ಕೃಷ್ಣ ಅಭಿಷೇಕ್‌ ಜೊತೆ ಹಾಡಲ್ಲಿ ಕಾಣಿಸಿಕೊಂಡಿರುವುದಾಗಿ ಮಾನ್ವಿತಾ ಹೇಳಿಕೊಂಡಿದ್ದಾರೆ. ಅದೇನೆ ಇರಲಿ, ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಮಾನ್ವಿತಾ, ಅತ್ತ ಟಾಲಿವುಡ್‌ ಮಂದಿಯ ಕಣ್ಣಿಗೂ ಬಿದ್ದಿದ್ದಾರೆ.

ಈ ಹಿಂದೆ ರಾಮ್‌ಗೋಪಾಲ್‌ ವರ್ಮ ಅವರೇ “ಟಗರು’ ಚಿತ್ರದಲ್ಲಿ ಮಾನ್ವಿತಾ ಅವರ ನಟನೆ ನೋಡಿ, ಸ್ವತಃ ಮುಂದಿನ ನನ್ನ ಚಿತ್ರದಲ್ಲಿ ನಟಿಸಬೇಕು ಅಂತ ಅಡ್ವಾನ್ಸ್‌ ಮಾಡಿದ್ದರು. ಅದೇ ಖುಷಿಯಲ್ಲಿದ್ದ ಮಾನ್ವಿತಾ, ಮರಾಠಿ ಚಿತ್ರರಂಗಕ್ಕೂ ಕಾಲಿಟ್ಟರು. ಈಗ ಬಾಲಿವುಡ್‌ ಆಲ್ಬಂ ಸಾಂಗ್‌ನಲ್ಲೂ ಕಾಣಿಸಿಕೊಂಡಿದ್ದಾರೆ. ಮುಂದಿನ ದಿನದಲ್ಲಿ ಹಿಂದಿ ಚಿತ್ರದಲ್ಲೂ ಕಾಣಿಸಿಕೊಂಡರೆ ಅಚ್ಚರಿ ಇಲ್ಲ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.