ಸಲಗಕ್ಕೆ ಟಗರು ಸಾಥ್‌

ಜ.5ಕ್ಕೆ ಆಡಿಯೋ ರಿಲೀಸ್‌ ಮಾಡ್ತಾರೆ ಶಿವಣ್ಣ

Team Udayavani, Dec 30, 2019, 7:03 AM IST

salaga

“ದುನಿಯಾ’ ವಿಜಯ್‌ ಅಭಿನಯದ “ಸಲಗ’ ಸಿನಿಮಾ ಆರಂಭದಿಂದಲೂ ಜೋರಾಗಿಯೇ ಸದ್ದು ಮಾಡುತ್ತ ಬಂದಿದೆ. ಇತ್ತೀಚೆಗಷ್ಟೇ ಮೇಕಿಂಗ್‌ ವಿಡಿಯೋ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಈಗ ಮತ್ತೂಂದು ಹೊಸ ಸುದ್ದಿಯೆಂದರೆ, “ಸಲಗ’ಕ್ಕೆ “ಟಗರು’ ಸಾಥ್‌ ಕೊಡುತ್ತಿದೆ. ಹೌದು, “ದುನಿಯಾ’ ವಿಜಯ್‌ ಅಭಿನಯದ ಜೊತೆಯಲ್ಲಿ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಹಾಗಾಗಿ ಚಿತ್ರದ ಮೇಲೆ ಒಂದಷ್ಟು ನಿರೀಕ್ಷೆಯೂ ಇದೆ.

ಸದ್ಯಕ್ಕೆ ಅಂತಿಮ ಹಂತದಲ್ಲಿರುವ “ಸಲಗ’ ಇದೀಗ ಆಡಿಯೋ ಬಿಡುಗಡೆ ಮಾಡಲು ಸಾಕಷ್ಟು ತಯಾರಿ ನಡೆಸುತ್ತಿದೆ. ಹೊಸ ವರ್ಷದಲ್ಲಿ “ಸಲಗ’ ಚಿತ್ರತಂಡ ತನ್ನ ಹಾಡುಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಜನವರಿ 5 ರಂದು ಅದ್ಧೂರಿಯಾಗಿಯೇ ಚಿತ್ರದ ಹಾಡುಗಳನ್ನು ಹೊರತರುವ ನಿರ್ಧಾರ ಮಾಡಿರುವ “ದುನಿಯಾ’ ವಿಜಯ್‌ ಮತ್ತು ತಂಡ, ಚಿತ್ರದ ಆಡಿಯೋ ಬಿಡುಗಡೆಗೆ ಶಿವರಾಜಕುಮಾರ್‌ ಅವರನ್ನು ಆಹ್ವಾನಿಸಿದ್ದು,

ಅವರೇ ಅಂದು ವಿಶೇಷ ಅತಿಥಿಯಾಗಿ “ಸಲಗ’ ಚಿತ್ರದ ಆಡಿಯೋ ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ. ಶಿವರಾಜಕುಮಾರ್‌ ಅವರು “ಸಲಗ’ ಚಿತ್ರದ ಆಡಿಯೋ ಬಿಡುಗಡೆ ಮಾಡುವ ಮೂಲಕ ಪುನಃ “ಟಗರು’ ತಂಡದ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, “ಸಲಗ’ ಚಿತ್ರವನ್ನು ಕೆ.ಪಿ.ಶ್ರೀಕಾಂತ್‌ ನಿರ್ಮಿಸುತ್ತಿದ್ದಾರೆ. “ಟಗರು’ ಚಿತ್ರಕ್ಕೂ ಕೆ.ಪಿ.ಶ್ರೀಕಾಂತ್‌ ನಿರ್ಮಾಪಕರಾಗಿದ್ದರು.

ಹಾಗಾಗಿ, ಶಿವರಾಜಕುಮಾರ್‌ ಅವರು ಈ “ಸಲಗ’ ಚಿತ್ರತಂಡದ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಕೋರಲಿದ್ದಾರೆ. ಅಂದಹಾಗೆ, “ಸಲಗ’ ಚಿತ್ರದ ಹಾಡುಗಳನ್ನು ಎ2 ಮ್ಯೂಸಿಕ್‌ ಹೊರತರುತ್ತಿದೆ. ಎ2 ಮ್ಯೂಸಿಕ್‌ ಯೂಟ್ಯೂಬ್‌ ಚಾನೆಲ್‌ನಲ್ಲೂ ಸಹ ಹಾಡುಗಳನ್ನು ವೀಕ್ಷಿಸಬಹುದು. ಚಿತ್ರದ ಹಾಡುಗಳಿಗೆ ಚರಣ್‌ ರಾಜ್‌ ಸಂಗೀತ ನೀಡಿದ್ದಾರೆ. ಶಿವಸೇನ ಛಾಯಾಗ್ರಹಣವಿದೆ. ಚಿತ್ರದಲ್ಲಿ “ಡಾಲಿ’ ಧನಂಜಯ್‌, “ಕಾಕ್ರೋಚ್‌’ ಸುಧಿ ಸೇರಿದಂತೆ ಹಲವು ಕಲಾವಿದರು ನಟಿಸಿದ್ದು,

ಇದೊಂದು ಪಕ್ಕಾ ಮಾಸ್‌ ಎಂಟರ್‌ಟೈನ್‌ಮೆಂಟ್‌ ಸಿನಿಮಾ ಆಗಿ ಹೊರಬರುತ್ತಿದೆ. “ದುನಿಯಾ’ ವಿಜಯ್‌ ಮೊದಲ ನಿರ್ದೇಶನದ ಸಿನಿಮಾ ಆಗಿರುವುದರಿಂದ ಸಹಜವಾಗಿಯೇ ಇದು ಕುತೂಹಲ ಕೆರಳಿಸಿದೆ. ಇನ್ನು, ವಿಜಯ್‌ ಅಭಿನಯದ ಚಿತ್ರ ಬಿಡುಗಡೆಯಾಗದೆ ಎರಡು ವರ್ಷಗಳಾಗಿವೆ. ಹಾಗಾಗಿ, “ಸಲಗ’ ಚಿತ್ರದ ಬಿಡುಗಡೆಯನ್ನು ಎಲ್ಲರೂ ಎದುರು ನೋಡುತ್ತಿದ್ದಾರೆ. ಹೊಸ ವರ್ಷಕ್ಕೆ ಹೊಸ ರೂಪದಲ್ಲಿ “ಸಲಗ’ ತನ್ನ ದರ್ಶನ ಕೊಡಲು ಸಜ್ಜಾಗುತ್ತಿದೆ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.