‘ಸಿರಿ ಲಂಬೋದರ ವಿವಾಹ’ದ ಟೀಸರ್ ಬಂತು
Team Udayavani, Nov 20, 2022, 12:14 PM IST
ಸೌರಭ್ ಕುಲಕರ್ಣಿ ನಿರ್ಮಾಣ ಮತ್ತು ನಿರ್ದೇಶನದ “ಸಿರಿ ಲಂಬೋದರ ವಿವಾಹ’ (ಎಸ್ಎಲ್ವಿ) ಸಿನಿಮಾದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ನಟ ರಮೇಶ್ ಅರವಿಂದ್ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.
ಇದೇ ವೇಳೆ ಮಾತನಾಡಿದ ಸೌರಭ್ ಕುಲಕರ್ಣಿ, “ಈಗಾಗಲೇ ಈ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾದ ಮೊದಲ ಪ್ರತಿ ಕೂಡ ಸಿದ್ದವಾಗಿದೆ. “ಸಿರಿ ಲಂಬೋದರ ವಿವಾಹ’ ಒಂದು ಕಮರ್ಷಿಯಲ್ ಎಂಟರ್ಟೈನ್ಮೆಂಟ್ ಜೊತೆಗೆ ಸಸ್ಪೆನ್ಸ್ ಥ್ರಿಲ್ಲರ್ ಇರುವಂಥ ಸಿನಿಮಾ. ಸಿನಿಮಾದಲ್ಲಿ ಸಿರಿ ಹಾಗೂ ಲಂಬೋದರ ಪಾತ್ರಗಳು ನಾಯಕ, ನಾಯಕಿ ಅಲ್ಲ. ಈ ಪಾತ್ರಗಳು ಯಾವುದು ಎಂಬುದೇ ಸಿನಿಮಾದ ಸಸ್ಪೆನ್ಸ್. ಬಹುತೇಕ ರಂಗಭೂಮಿ ಕಲಾವಿದರೇ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ ಸಿನಿಮಾದ ಟೀಸರ್ ಬಿಡುಗಡೆ ಮಾಡಿದ್ದು, ಇನ್ನೆರಡು ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಯೋಜನೆಯಿದೆ’ ಎಂದರು.
ರಂಗಭೂಮಿ ಪ್ರತಿಭೆ ಅಂಜನ್ ಎ. ಭಾರದ್ವಾಜ್ “ಸಿರಿ ಲಂಬೋದರ ವಿವಾಹ’ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. “ಒಳ್ಳೆಯ ಸಿನಿಮಾ ಮಾಡಿರುವ ಖಷಿಯಿದೆ. ನಾನು ಈ ಸಿನಿಮಾದಲ್ಲಿ ವೆಡ್ಡಿಂಗ್ ಪ್ಲಾನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ಸಿನಿಮಾ ಚೆನ್ನಾಗಿ ಮೂಡಿಬಂದಿದೆ’ ಎಂಬ ವಿಶ್ವಾಸದ ಮಾತು ಅಂಜನ್ ಅವರದ್ದು.
“ಈ ಹಿಂದೆ ಬಿ. ಸುರೇಶ್ ಅವರ “ದೇವರ ನಾಡಲ್ಲಿ’ ಸಿನಿಮಾದಲ್ಲಿ ಅಭಿನಿಯಿಸಿದ್ದೆ. ಆನಂತರ ಅಭಿನಯಿಸಿರುವ ಎರಡನೇ ಸಿನಿಮಾ ಇದು. ಕಥೆ ಮತ್ತು ಪಾತ್ರ ಚೆನ್ನಾಗಿದೆ’ ಎಂಬುದು ನಾಯಕಿ ದಿಶಾ ರಮೇಶ್ ಮಾತು. ಸಿನಿಮಾದ ಬಗ್ಗೆ ಮಾತನಾಡಿದ ನಟಿ ವೀಣಾ ಸುಂದರ್, “ಸಿರಿ ಲಂಬೋದರ ವಿವಾಹ ಸರಳ, ಸುಂದರ ಹಾಗೂ ಕುತೂಹಲ ಕಾಯ್ದುಕೊಳ್ಳುವ ಸಿನಿಮಾ. ತುಂಬ ಹೊಸತನದಿಂದ ಸಿನಿಮಾ ಮೂಡಿಬಂದಿದೆ’ ಎಂದರು.
ಉಳಿದಂತೆ ರಾಜೇಶ್ ನಟರಂಗ, ಪಿ. ಡಿ ಸತೀಶ್ ಚಂದ್ರ, ಮಜಾಭಾರತದ ಶಿವು ಹಾಗೂ ಸುಶ್ಮಿತಾ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸದಾನಂದ ಕಾಳೆ ಮುಂತಾದವರು ಈ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾಕ್ಕೆ ಕಿಟ್ಟಿ ಕೌಶಿಕ್ ಛಾಯಾಗ್ರಹಣ, ಸಂಘರ್ಷ್ ಕುಮಾರ್ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ