ರಾಮನಿಗೆ ಅಡ್ಡ ಬಂದ ಗಡ್ಡ


Team Udayavani, Dec 6, 2017, 10:00 PM IST

sathish.jpg

ಸತೀಶ್‌ ನೀನಾಸಂ, ತಮ್ಮ ಸತೀಶ್‌ ಪಿಕ್ಚರ್‌ ಹೌಸ್‌ನಿಂದ “ರಾಮನು ಕಾಡಿಗೆ ಹೋದನು’ ಎಂಬ ಚಿತ್ರವನ್ನು ನಿರ್ಮಿಸುತ್ತಿರುವ ವಿಷಯ ಗೊತ್ತಿರಬಹುದು. ಈಗಾಗಲೇ ಚಿತ್ರದ ಮೊದಲ ಪೋಸ್ಟರ್‌ ಬಿಡುಗಡೆಯಾಗಿದೆ. ಇನ್ನೇನು ಚಿತ್ರ ಸದ್ಯದಲ್ಲೇ ಶುರುವಾಗಬಹುದು ಎನ್ನುವಷ್ಟರಲ್ಲೇ ಈ ಚಿತ್ರ ನಿಂತಿದೆ ಎಂಬ ಸುದ್ದಿಯೊಂದು ಓಡಾಡುತ್ತಿದೆ. ಹೌದು, ಸತೀಶ್‌ ಅಭಿನಯದ ಮತ್ತು ನಿರ್ಮಾಣದ “ರಾಮನು ಕಾಡಿಗೆ ಹೋದನು’ ಚಿತ್ರವು ನಿಂತಿದೆ ಎಂದು ಪುಕಾರು ಆಗಿದೆ.

ಈ ವಿಷಯವನ್ನು ಸತೀಶ್‌ ಅವರಲ್ಲೇ ನೇರವಾಗಿ ಕೇಳಿದರೆ, ಚಿತ್ರ ನಿಂತಿಲ್ಲ ಮುಂದಕ್ಕೆ ಹೋಗಿದೆ ಎಂಬ ಉತ್ತರ ಅವರಿಂದ ಬರುತ್ತದೆ. “ರಾಮನು ಕಾಡಿಗೆ ಹೋದನು’ ಚಿತ್ರವು ಮುಂದಕ್ಕೆ ಹೋಗಿದೆ. ಬರೀ ಒಂದೆರೆಡು ತಿಂಗಳು ಮುಂದಕ್ಕಲ್ಲ, ಬರೋಬ್ಬರಿ ಆರು ತಿಂಗಳು ಮುಂದಕ್ಕೆ ಹೋಗಿದೆಯಂತೆ. ಅದಕ್ಕೆ ಕಾರಣವೇನೆಂದು ಕೇಳಿದರೆ, ನಗು ಬರಬಹುದು. ಏಕೆಂದರೆ, ಚಿತ್ರಕ್ಕೆ ಅಡ್ಡಗಾಲು ಹಾಕುತ್ತಿರುವುದು ಬೇರೆ ಯಾರೋ ಅಲ್ಲ, ಗಡ್ಡ ಎನ್ನುತ್ತಾರೆ ಸತೀಶ್‌.

“ಹೌದು, “ರಾಮನು ಕಾಡಿಗೆ ಹೋದನು’ ಚಿತ್ರ ಮುಂದಕ್ಕೆ ಹೋಗಿದೆ. ಅದಕ್ಕೆ ಕಾರಣ ಗಡ್ಡ. ಎಲ್ಲಾ ಸರಿ ಹೋಗಿದ್ದರೆ, ಇಷ್ಟರಲ್ಲಿ ಸಿನಿಮಾ ಶುರುವಾಗಬೇಕಿತ್ತು. ಆದರೆ, ಮುಂದೆ ಹೋಗಿದ್ದ “ಅಯೋಗ್ಯ’ ಸಡನ್‌ ಆಗಿ ಶುರುವಾಗಿದೆ. ಆ ಚಿತ್ರಕ್ಕೆ ಗಡ್ಡ ಬೇಕು. “ಅಯೋಗ್ಯ’ ಚಿತ್ರಕ್ಕೆ ಒಂದೇ ಹಂತದ ಚಿತ್ರೀಕರಣ ನಡೆಯಲಿದ್ದು, ಜನವರಿ ಅಥವಾ ಫೆಬ್ರವರಿಯಲ್ಲಿ ತಮಿಳು ಚಿತ್ರದ ಚಿತ್ರೀಕರಣ ನಡೆಯಲಿದೆ. ಆ ಚಿತ್ರಕ್ಕೆ ಏನಿಲ್ಲವೆಂದರೂ ಮೂರು ತಿಂಗಳು ಬೇಕು. ಮಧ್ಯೆ “ರಾಮನು ಕಾಡಿಗೆ ಹೋದನು’ ಚಿತ್ರ ಶುರು ಮಾಡುವ ಹಾಗಿಲ್ಲ.

ಏಕೆಂದರೆ, “ಅಯೋಗ್ಯ’ ಮತ್ತು ತಮಿಳು ಚಿತ್ರಗಳಿಗೆ ಗಡ್ಡ ಬೇಕು. ಈ ಚಿತ್ರಕ್ಕೆ ಬೇಡ. ಈ ಚಿತ್ರಕ್ಕೋಸ್ಕರ ಗಡ್ಡ ಬೋಳಿಸಿದರೆ, ಕಂಟಿನ್ಯುಟಿ ಮಿಸ್‌ ಆಗುತ್ತದೆ. ಹಾಗಾಗಿ ಆ ಎರಡೂ ಚಿತ್ರಗಳ ಚಿತ್ರೀಕರಣ ಮುಗಿದ ನಂತರ “ರಾಮನು ಕಾಡಿಗೆ ಹೋದನು’ ಶುರುವಾಗಲಿದೆ. ಚಿತ್ರ ಸ್ವಲ್ಪ ನಿಧಾನವಾಗಲಿದೆ ಎಂಬುದು ಬಿಟ್ಟರೆ, ಮಿಕ್ಕಂತೆ ಯಾವುದೇ ಸಮಸ್ಯೆ ಇಲ್ಲ. ಇನ್ನು ಆರು ತಿಂಗಳಾದರೂ ಚಿತ್ರ ಶುರುವಾಗಿಯೇ ಆಗುತ್ತದೆ’ ಎನ್ನುತ್ತಾರೆ ಸತೀಶ್‌ ನೀನಾಸಂ.

“ರಾಮನು ಕಾಡಿಗೆ ಹೋದನು’ ಚಿತ್ರವನ್ನು ವಿಕಾಸ್‌ ಪಂಪಾಪತಿ ಮತ್ತು ವಿನಯ್‌ ಪಂಪಾಪತಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಪ್ರೀತಮ್‌ ತೆಗ್ಗಿನಮನೆ ಛಾಯಾಗ್ರಹಣ ಮಾಡಿದರೆ, ಮಿಥುನ್‌ ಮುಕುಂದನ್‌ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು ಅವರ ಹುಡುಕಾಟ ನಡೆಯುತ್ತಿದೆ. ಸದ್ಯಕ್ಕೆ ಸತೀಶ್‌ ನೀನಾಸಂ ಜೊತೆಗೆ ಅಚ್ಯುತ್‌ ಕುಮಾರ್‌ ನಟಿಸುತ್ತಿದ್ದು, ಮಿಕ್ಕ ಕಲಾವಿದರ ಆಯ್ಕೆ ನಡೆಯುತ್ತಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.