ನಿರ್ಮಾಪಕರ ರಕ್ಷಣೆಗೆ ರಚನೆಯಾಗಲಿದೆ ಸಮಿತಿ


Team Udayavani, Oct 27, 2018, 10:42 AM IST

niramapakara.jpg

ನಟ ಅರ್ಜುನ್‌ ಸರ್ಜಾ ಮತ್ತು ನಟಿ ಶ್ರುತಿ ಹರಿಹರನ್‌ ನಡುವಿನ “ಮಿ ಟೂ’ ಪ್ರಕರಣ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ, ಇತ್ಯರ್ಥವಾಗದೆ ಸಂಧಾನ ಮಾತುಕತೆ ಮುರಿದುಬಿದ್ದಿದೆ. ಆದರೆ “ಮಿ ಟೂ’ ಅಭಿಯಾನ ಮತ್ತುಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘ ಮುಂದೆ ಇಂಥ ವಿವಾದಗಳನ್ನು ತಡೆಯಲು, ನಿರ್ಮಾಪಕರ ಹಿತರಕ್ಷಣೆ ಕಾಪಾಡಲು “ಪ್ರೊಡ್ನೂಸರ್ ಪ್ರೊಟೆಕ್ಷನ್‌ ಕಮಿಟಿ’ (ಪಿಪಿಸಿ) ರಚಿಸಲು ಮುಂದಾಗಿದೆ.

ವಾಣಿಜ್ಯ ಮಂಡಳಿಯ ಮೂಲಗಳ ಪ್ರಕಾರ, ಮುಂದಿನ ದಿನಗಳಲ್ಲಿ  ಚಿತ್ರರಂಗಕ್ಕೆ ಸಂಬಂಧಿಸಿದಂತೆ ಏನೇ ಸಮಸ್ಯೆಗಳಿದ್ದರೂ, ಅದನ್ನು ನಾಲ್ಕು ಗೋಡೆಗಳ ನಡುವೆ ಬಗೆಹರಿಸಿಕೊಳ್ಳಬೇಕು. ಚಿತ್ರರಂಗಕ್ಕೆ ಮುಜುಗರ ಆಗುವಂತಹ ಸನ್ನಿವೇಶಗಳನ್ನು ತಪ್ಪಿಸುವ ಸಲುವಾಗಿ ಚಿತ್ರರಂಗದ ಕಲಾವಿದರು, ನಿರ್ದೇಶಕರು ಮತ್ತು ನಿರ್ಮಾಪಕರ ಪ್ರತಿನಿಧಿಗಳನ್ನು ಒಳಗೊಂಡ ಪಿಸಿಸಿ ರಚನೆಗೆ ಚಿಂತನೆ ನಡೆದಿದೆ.

ಈಗಾಗಲೇ ಪಿಪಿಸಿ ರೂಪುರೇಷೆ ಸಿದ್ದಗೊಳ್ಳುತ್ತಿದ್ದು, ಅ. 30ರಂದು ನಡೆಯಲಿರುವ ವಾಣಿಜ್ಯ ಮಂಡಳಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಪ್ರಸ್ತಾವನೆ ಮಂಡಿಸಲಾಗುವುದು. ಎಲ್ಲಾ ಅಂದುಕೊಂಡಂತೆ ನಡೆದರೆ ಮುಂದಿನ ಎರಡು ವಾರದೊಳಗೆ “ಪ್ರೊಡ್ನೂಸರ್ ಪೊ›ಟೆಕ್ಷನ್‌ ಕಮಿಟಿ’ (ಪಿಪಿಸಿ) ರಚನೆಯಾಗಲಿದೆ ಎನ್ನಲಾಗುತ್ತಿದೆ.

ಅರ್ಜುನ್‌ ಪರ ಚಿರು ಅಭಿಯಾನ: ನಟ ಅರ್ಜುನ್‌ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್‌ ಮಾಡಿರುವ “ಮಿ ಟೂ’ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಪರ-ವಿರೋಧ ಚರ್ಚೆಗೆ ಕಾರಣವಾಗುತ್ತಿದೆ. ಈ ವಿವಾದದಲ್ಲಿ ಕೆಲವರು ಅರ್ಜುನ್‌ ಸರ್ಜಾ ಪರ ನಿಂತರೇ, ಇನ್ನು ಕೆಲವರು ಶ್ರುತಿ ಪರ ಮಾತನಾಡುತ್ತಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಕುಟುಂಬದವರು ಮತ್ತು ಅಭಿಮಾನಿಗಳು ಅರ್ಜುನ್‌ ಸರ್ಜಾ ಬೆಂಬಲಕ್ಕೆ ನಿಂತಿದ್ದಾರೆ.”ಮಿ ಟೂ’ ಆರೋಪ ವಿಚಾರವಾಗಿ ಜಾಲತಾಣಗಳಲ್ಲಿ ಅರ್ಜುನ್‌ ಸರ್ಜಾ ಅವರ ಬಗ್ಗೆ  ತಿಳಿಸುವ ಸಲುವಾಗಿ ನಟ ಚಿರಂಜೀವಿ ಸರ್ಜಾ ಟ್ವೀಟ್‌ ಕ್ಯಾಂಪೇನ್‌ ಆರಂಭಿಸಿದ್ದಾರೆ. ತಮ್ಮ ಟ್ಟಿಟ್ಟರ್‌ ನಲ್ಲಿ ಚಿರಂಜೀವಿ ಸರ್ಜಾ, “ಸ್ನೇಹಿತರೆ ನಾನು ಜೆಂಟಲ್‌ಮ್ಯಾನ್‌ ಅರ್ಜುನ್‌ ಸರ್ಜಾ ಅವರಿಗೆ ಬೆಂಬಲ ನೀಡುತ್ತೇನೆ,

ನೀವು ಏನು ಹೇಳುತ್ತೀರಾ..?’ ಎಂದು ಅರ್ಜುನ್‌ ಸರ್ಜಾ ಅವರ ಫೋಟೋ ಪೋಸ್ಟ್‌ ಮಾಡಿ, (ಐ ಸ್ಟಾಂಡ್‌ ವಿತ್‌ ಜಂಟಲ್‌ ಮ್ಯಾನ್‌) ಎಂಬ ಹ್ಯಾಶ್‌ ಟ್ಯಾಗ್‌ನಲ್ಲಿ  ಟ್ವೀಟ್‌ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅರ್ಜುನ್‌ ಸರ್ಜಾ ಪರವಾಗಿ ಅಭಿಯಾನ ಶುರು ಮಾಡಿದ್ದಾರೆ. ಇದೀಗ ಈ ಕ್ಯಾಂಪೇನ್‌ಗೆ ಸಾಮಾಜಿಕ ಜಾಲತಾಣದಲ್ಲಿ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದ್ದು, ಅರ್ಜುನ್‌ ಸರ್ಜಾ ಪರವಾಗಿ ಬೆಂಬಲಿಸುವವರು ಸರ್ಜಾ ಅವರ ಹ್ಯಾಶ್‌ ಟ್ಯಾಗ್‌ ಬಳಸಿ ಟ್ವೀಟ್‌ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.