ಕೆಜಿಎಫ್ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ದೂರುದಾರ
Team Udayavani, Dec 22, 2018, 11:25 AM IST
“ಕೆಜಿಎಫ್’ ಚಿತ್ರ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೂರುದಾರ ವೆಂಕಟೇಶ್ ಶುಕ್ರವಾರ ಹಿಂಪಡೆದಿದ್ದಾರೆ. ಕೃತಿಚೌರ್ಯ ಆರೋಪದಡಿ “ಕೆಜಿಎಫ್’ ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದ್ದ ವೆಂಕಟೇಶ್, ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, ಚಿತ್ರದ ಬಿಡುಗಡೆಗೆ ಮಧ್ಯಂತರ ತಡೆ ಆದೇಶ ತಂದಿದ್ದರು.
ಆದರೆ ಈ ಆದೇಶ ನಿಗಧಿತ ಸಮಯದಲ್ಲಿ “ಕೆಜಿಎಫ್’ ನಿರ್ಮಾಪಕರ ಕೈ ಸೇರದಿದ್ದರಿಂದ ಚಿತ್ರ ಪೂರ್ವ ನಿಗಧಿಯಂತೆ ಬಿಡುಗಡೆಯಾಯಿತು. ಚಿತ್ರ ಬಿಡುಗಡೆಯ ಬಳಿಕ ವಿಚಾರಣೆ ಅರ್ಜಿಯನ್ನು ನ್ಯಾಯಾಲಯ ಕೈಗೆತ್ತಿಕೊಂಡಾಗ ಹಾಜರಾದ ದೂರುದಾರ ವೆಂಕಟೇಶ್, ಕೆಲವು ಮಾಹಿತಿ ಕೊರತೆಯಿಂದ ದೂರು ದಾಖಲಾಗಿತ್ತು.
ಚಿತ್ರವನ್ನು ನೋಡಿದ ಬಳಿಕ ನಾವು ದೂರಿನಲ್ಲಿ ಉಲ್ಲೇಖೀಸಿದ್ದ ತಂಗಂ ಕಥೆಗೂ “ಕೆಜಿಎಫ್’ಗೂ ಯಾವುದೇ ಸಂಬಂಧ ಇಲ್ಲ ಎಂಬುದು ಮನವರಿಕೆಯಾಗಿದೆ. ಹಾಗಾಗಿ ದೂರನ್ನು ಹಿಂಪಡೆದಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು