ಕಾರ್ಪೋರೇಟ್‌ ಶೈಲಿಯ ವ್ಯವಸ್ಥೆ ಬರಬೇಕು: ರಘುನಾಥ್‌


Team Udayavani, Nov 11, 2017, 5:45 PM IST

raghunath.jpg

“ಆ್ಯಕ್ಸಿಡೆಂಟ್‌’ ಚಿತ್ರದ ಮೂಲಕ ಬಂದು ಆ ನಂತರ “ಜಿಗರ್‌ ಥಂಡಾ’ ಚಿತ್ರ ನಿರ್ಮಿಸಿ, “ಹೆಬ್ಬುಲಿ’ಯಂತಹ ಯಶಸ್ವಿ ಚಿತ್ರ ನಿರ್ಮಾಣ ಮಾಡಿದ ಎಸ್‌ಆರ್‌ವಿ ಪ್ರೊಡಕ್ಷನ್ಸ್‌ನ ರಘುನಾಥ್‌ ಈಗೇನು ಮಾಡುತ್ತಿದ್ದಾರೆ, ಮುಂದೆ ಯಾವ ಸಿನಿಮಾ ಮಾಡುತ್ತಾರೆಂಬ ಪ್ರಶ್ನೆ ಸಹಜವೇ. ಸದ್ಯ ರಘುನಾಥ್‌ ಅವರು ಹೊಸ ಸಿನಿಮಾ ಮಾಡುವ ಬಗ್ಗೆ ಆಲೋಚಿಸುತ್ತಿದ್ದಾರೆ. ಹೌದು, ರಘುನಾಥ್‌ ಅವರು ಎರಡು ಹೊಸ ಸಿನಿಮಾಗಳನ್ನು ನಿರ್ಮಿಸುವ ಉತ್ಸಾಹದಲ್ಲಿದ್ದಾರೆ. ಹೊಸ ಸಿನಿಮಾಗಳು ಮುಂದಿನ ವರ್ಷ ಆರಂಭವಾಗುವ ಸಾಧ್ಯತೆಗಳಿವೆ. 

“ನನಗೆ ಕೇವಲ ಸ್ಟಾರ್‌ಗಳ ಸಿನಿಮಾ ಮಾಡಬೇಕೆಂಬ ಆಸೆಯಿಲ್ಲ. ಹೊಸತದಿಂದ ಕೂಡಿರುವ ಹೊಸಬರ ಸಿನಿಮಾ ಮಾಡಲು ಸಿದ್ಧ. ಆದರೆ ಕತೆ ಇಷ್ಟವಾಗಬೇಕು. ಸಾಕಷ್ಟು ಮಂದಿ ಬಂದು ಕಥೆ ಹೇಳುತ್ತಾರೆ. ನನಗೆ ಒಳ್ಳೆಯ ಕಥೆಗಳನ್ನು ಸಿನಿಮಾ ಮಾಡುವ ಆಸೆ. ಆದರೆ, ಕೆಲವರಿಗೆ ತಾಳ್ಮೆ ಕಡಿಮೆ. ಇವತ್ತು ಕಥೆ ಹೇಳಿ, ನಾಳೇನೇ ಸಿನಿಮಾ ಕೆಲಸ ಆರಂಭಿಸಿ ಎಂದು ಕೂರುತ್ತಾರೆ. ಕಾಸು ಹಾಕುವ ನಿರ್ಮಾಪಕನಿಗೆ ಒಂದಷ್ಟು ಯೋಚಿಸಲು ಸಮಯ ಬೇಕಲ್ವಾ’ ಎನ್ನುವುದು ಅವರ ಮಾತು. 

ರಘುನಾಥ್‌ ಅವರು ಸಿನಿಮಾ ಹೊರತಾಗಿ ತಮ್ಮದೇ ಬಿಝಿನೆಸ್‌ನಲ್ಲಿ ಬಿಝಿಯಾಗಿದ್ದಾರೆ. ಅದು ಆಹಾರೋದ್ಯಮ. ಓಗರ ಹೆಸರಿನಲ್ಲಿ ಆಹಾರೋತ್ಪನ್ನ ಕ್ಷೇತ್ರಕ್ಕೆ ಕಾಲಿಟ್ಟಿರುವ ರಘುನಾಥ್‌ ಅವರು ಸದ್ಯ, ಅದರಲ್ಲೂ ಬಿಝಿಯಾಗಿದ್ದಾರೆ. ಇದು ಕೂಡಾ ಅವರ ಡ್ರೀಮ್‌ ಪ್ರಾಜೆಕ್ಟ್. “ನನಗೆ ಸಿನಿಮಾ ಜೊತೆಗೆ ಬಿಝಿನೆಸ್‌ನಲ್ಲೂ ಆಸಕ್ತಿ ಇದೆ. ಆಹೋರೋದ್ಯಮಕ್ಕೆ ಕಾಲಿಟ್ಟಿದ್ದೇವೆ. ಓಗರ ಎಂಬ ಹೆಸರಿನಲ್ಲಿ ಜನರಿಗೆ ಶುಚಿ-ರುಚಿಯಾದ ಕ್ಯಾಟರಿಂಗ್‌ ವ್ಯವಸ್ಥೆ ಮಾಡೋದು ನಮ್ಮ ಉದ್ದೇಶ. ಇದು ತುಂಬಾ ದೊಡ್ಡ ಪ್ರಾಜೆಕ್ಟ್.

ಈ ಪ್ರಾಜೆಕ್ಟ್‌ನಲ್ಲಿ ನಮ್ಮ ಸಾಕಷ್ಟು ಮಂದಿ ಸ್ನೇಹಿತರು ಪ್ರೋತ್ಸಾಹ ನೀಡುತ್ತಿದ್ದಾರೆ. ಅದರಲ್ಲೂ ಸತ್ಯನಾರಾಯಣ್‌ ಅವರು ನಮಗೆ ದೊಡ್ಡ ಪ್ರೇರಣೆ. ಸಂಸ್ಥೆಯ ಪ್ರತಿ ಕೆಲಸಗಳಿಗೂ ಅವರು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅವರ ಬೆಂಬಲವನ್ನು ಮರೆಯುವಂತಿಲ್ಲ’ ಎನ್ನುತ್ತಾರೆ ರಘುನಾಥ್‌. ಮುಂದಿನ ದಿನಗಳಲ್ಲಿ ಇನ್ನಷ್ಟು ಚಿತ್ರಗಳನ್ನು ನಿರ್ಮಿಸುವ ಕುರಿತು ಹೇಳುವ ಅವರು, “ನನಗೆ ಸಿನಿಮಾ ಅಂದರೆ ಪ್ರೀತಿ. ಯಾವ ಕಾರಣಕ್ಕೂ ಈ ಕ್ಷೇತ್ರ ಬಿಟ್ಟು ಹೋಗುವ ಮಾತೇ ಇಲ್ಲ. ನಾನು ಪ್ರತಿ ಸಿನಿಮಾವನ್ನು ಪ್ರೀತಿಯಿಂದ ಮಾಡುತ್ತೇನೆ.

ಒಂದು ಸಿನಿಮಾ ನಿರ್ದೇಶಕನ ಕಲ್ಪನೆ. ಅದು ಸಾಕಾರಗೊಳ್ಳಲು ಏನು ಬೇಕೋ ಅದನ್ನು ನೀಡುತ್ತಾ ಬಂದಿದ್ದೇನೆ. ಸಿನಿಮಾವನ್ನು ಜನರಿಗೆ ತಲುಪಿಸೋದು ಕೂಡಾ ನಮ್ಮ ಕರ್ತವ್ಯ. ಹಾಗಾಗಿ, ನಮ್ಮ ಪ್ರೊಡಕ್ಷನ್ಸ್‌ನ ಸಿನಿಮಾ ಪಬ್ಲಿಸಿಟಿಯಲ್ಲಿ ಯಾವತ್ತೂ ಹಿಂದೆ ಬಿದ್ದಿಲ್ಲ’ ಎನ್ನುತ್ತಾರೆ ರಘುನಾಥ್‌. ಇನ್ನು, “ಹೆಬ್ಬುಲಿ’ ಚಿತ್ರದ ಬಗ್ಗೆ ಮಾತನಾಡುವ ಅವರು, “ಆ ಚಿತ್ರದಿಂದ ನಾನು ಖುಷಿಯಾಗಿದ್ದೇನೆ. ಒಳ್ಳೆಯ ಹೆಸರು ತಂದುಕೊಟ್ಟಿತು. ಅದಕ್ಕಿಂತ ಹೆಚ್ಚಾಗಿ ಸುದೀಪ್‌ರಂತಹ ಒಬ್ಬ ಒಳ್ಳೆಯ ಸ್ನೇಹಿತ, ಹಿತೈಷಿಯನ್ನು ಕೊಟ್ಟಿತು. ಸುದೀಪ್‌ ಅವರು ಪ್ರತಿ ಹಂತದಲ್ಲೂ ನನಗೆ ಬೆಂಬಲವಾಗಿದ್ದಾರೆ.

ಅವರಂತಹ ಹಿತೈಷಿ ಸಿಕ್ಕಿದ್ದು ಈ ಚಿತ್ರರಂಗದಿಂದಲೇ. ಮುಂದೆಯೂ ಅವರ ಜೊತೆ ಸಿನಿಮಾ ಮಾಡುತ್ತೇನೆ’ ಎಂದು ಖುಷಿಯಿಂದ ಮಾತನಾಡುತ್ತಾರೆ. ಚಿತ್ರರಂಗದ ಸೋಲು-ಗೆಲುವಿನ ಬಗ್ಗೆ ಮಾತನಾಡುವ ರಘುನಾಥ್‌, “ಚಿತ್ರರಂಗದಲ್ಲಿ ಸೋಲು-ಗೆಲುವು ಸಹಜ. ಆದರೆ, ಸಿನಿಮಾ ಸೋತರೆ ಅಂತಿಮವಾಗಿ ಏಕಾಂಗಿಯಾಗಿ ನಿಲ್ಲುವವ ನಿರ್ಮಾಪಕ ಒಬ್ಬನೇ. ಆತ ಕಷ್ಟದಲ್ಲಿದ್ದಾಗ ಸಹಾಯಕ್ಕೆ ಬರುವಂತಹ ಕಾರ್ಪೋರೇಟ್‌ ಶೈಲಿಯ ವ್ಯವಸ್ಥೆ ನಮ್ಮಲ್ಲಿ ಬರಬೇಕು’ ಎನ್ನುತ್ತಾರೆ ರಘುನಾಥ್‌.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.