ಅಪ್ಪನ ಅಂಗಿಯ ಕನಸು

ಅಮ್ಮನ ಮನೆ ಜೋಡಿಯ ಮತ್ತೊಂದು ಚಿತ್ರ

Team Udayavani, Apr 11, 2019, 3:00 AM IST

raghavendra-raj

ರಾಘವೇಂದ್ರ ರಾಜಕುಮಾರ್‌ ಮತ್ತೊಂದು ಚಿತ್ರ ಒಪ್ಪಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಅವರ ಅಭಿನಯದ “ಅಮ್ಮನ ಮನೆ’ ತೆರೆಕಂಡಿತ್ತು. ಅದರ ಬೆನ್ನಲ್ಲೇ ಈಗ ಅವರು ನಟಿಸಿರುವ “ತ್ರಯಂಬಕಂ’ ಚಿತ್ರ ಕೂಡ ತೆರೆ ಕಾಣುತ್ತಿದೆ. ಅದಕ್ಕೂ ಮುಂಚೆಯೇ ಅವರೀಗ ಹೊಸ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಅಂದಹಾಗೆ, ಆ ಚಿತ್ರಕ್ಕೆ “ಅಪ್ಪನ ಅಂಗಿ’ ಎಂದು ಹೆಸರಿಡಲಾಗಿದೆ.

“ಅಮ್ಮನ ಮನೆ’ ಚಿತ್ರ ನಿರ್ದೇಶಿಸಿದ್ದ ನಿಖಿಲ್‌ ಮಂಜು ಅವರೇ “ಅಪ್ಪನ ಅಂಗಿ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸುನೀಲ್‌ ಈ ಚಿತ್ರದ ನಿರ್ಮಾಪಕರು. ಇದು ಇವರಿಗೆ ಮೊದಲ ಚಿತ್ರ. “ಅಮ್ಮನ ಮನೆ’ ಚಿತ್ರದಲ್ಲಿ ಅಮ್ಮ ಕಂಡಿದ್ದರು. ಈಗ “ಅಪ್ಪನ ಅಂಗಿ’ ಚಿತ್ರದಲ್ಲಿ ಅಪ್ಪನನ್ನು ಕಾಣಬಹುದು.

ಚಿತ್ರದ ಬಗ್ಗೆ ಮಾಹಿತಿ ಕೊಡುವ ನಿರ್ದೇಶಕ ನಿಖಿಲ್‌ ಮಂಜು, “ಈ ಚಿತ್ರಕ್ಕೆ ರಾಘವೇಂದ್ರ ರಾಜಕುಮಾರ್‌ ಅವರೇ ಕಥೆ ಕೊಟ್ಟಿದ್ದಾರೆ. ಅವರೊಂದು ಕಥೆಯ ಎಳೆ ಹೇಳಿದ್ದರು. ಅದನ್ನಿಟ್ಟುಕೊಂಡು ನಾನು ಮತ್ತು ನನ್ನ ಚಿತ್ರತಂಡ ಸಂಪೂರ್ಣ ಕಥೆ ಮಾಡಿ, ಚಿತ್ರಕಥೆ ಸಿದ್ಧಗೊಳಿಸಿ, ಈಗ ಚಿತ್ರೀಕರಣಕ್ಕೆ ಅಣಿಯಾಗಿದ್ದೇವೆ’ ಎಂದು ವಿವರ ಕೊಡುತ್ತಾರೆ.

ಹಾಗಾದರೆ, ಈ “ಅಪ್ಪನ ಅಂಗಿ’ ಚಿತ್ರದ ಹೈಲೈಟ್‌ ಏನು? ಈ ಪ್ರಶ್ನೆಗೆ ಉತ್ತರಿಸುವ ನಿಖಿಲ್‌ ಮಂಜು, ಡಾ.ರಾಜಕುಮಾರ್‌ ಅವರು ಅಷ್ಟೊಂದು ಎತ್ತರಕ್ಕೆ ಬೆಳೆಯಲು ಅವರ ತಂದೆಯ ಗುಣಗಳನ್ನು ಅಳವಡಿಸಿಕೊಂಡಿದ್ದು, ಜೊತೆಗೆ ಕೆಲಸದಲ್ಲಿ ಶ್ರದ್ಧೆ, ಭಕ್ತಿ ಇಟ್ಟುಕೊಂಡಿದ್ದರು. ಯಾವತ್ತಿದ್ದರೂ ಒಬ್ಬ ತಂದೆ ತನ್ನ ಮಗನಿಗೆ ಒಳ್ಳೆಯದನ್ನೇ ಹೇಳಿಕೊಡುತ್ತಾನೆ.

ಇಲ್ಲೂ ಅಂಥದ್ದೇ ಮೌಲ್ಯವಿರುವ ಅಂಶಗಳಿವೆ. ಪ್ರತಿಯೊಬ್ಬರ ನಿಜ ಜೀವನಕ್ಕೆ ಹತ್ತಿರವಾದಂತಹ ಚಿತ್ರ ಇದಾಗಲಿದೆ’ ಎಂಬುದು ನಿರ್ದೇಶಕ ನಿಖಿಲ್‌ ಮಂಜು ಮಾತು. ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್‌ ಅವರು ತಂದೆಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಹಿಂದೆ “ಅಮ್ಮನ ಮನೆ’ ಚಿತ್ರದಲ್ಲಿ ಕೆಲಸ ಮಾಡಿದ್ದ ತಂತ್ರಜ್ಞರೇ ಇಲ್ಲೂ ಕೆಲಸ ಮಾಡುತ್ತಿದ್ದಾರೆ.

ನಿರ್ದೇಶನ ತಂಡಕ್ಕೆ ಬಡಿಗೇರ ದೇವೇಂದ್ರ ಸೇರಿಕೊಂಡಿದ್ದಾರೆ. ಉಳಿದಂತೆ ಸಮೀರ್‌ ಕುಲಕರ್ಣಿ ಸಂಗೀತವಿದ್ದು, ಯೂಥ್‌ಗೆ ಏನೆಲ್ಲಾ ಇರಬೇಕೋ ಅದೆಲ್ಲಾ ಅಂಶಗಳೂ ಇಲ್ಲಿರಲಿವೆ. ರಾಘವೇಂದ್ರ ರಾಜಕುಮಾರ್‌ ಅವರದು ಇಲ್ಲಿ ಮರೆಯದ ಪಾತ್ರವಿದೆ.

ಸಿನಿಮಾದುದ್ದಕ್ಕೂ ಎಮೋಷನಲ್‌ ಅಂಶಗಳ ಜೊತೆಗೆ ಒಂದಷ್ಟು ಸಂದೇಶವೂ ಇದೆ ಎನ್ನುತ್ತಾರೆ ಅವರು. ಬೆಂಗಳೂರು ಮತ್ತು ಕುಂದಾಪುರ ಸುತ್ತಮುತ್ತ ಸುಮಾರು 22 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಏ.12 ರ ಶುಕ್ರವಾರ ಚಿತ್ರಕ್ಕೆ ಪೂಜೆ ನೆರವೇರಲಿದ್ದು, ಮೇ ಮೊದಲ ವಾರದಿಂದ ಚಿತ್ರೀಕರಣ ಶುರುವಾಗಲಿದೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.