ಕನ್ನಡ ಮೇಷ್ಟ್ರು ಮೊದಲ ಪಾಠ


Team Udayavani, Dec 11, 2018, 11:55 AM IST

jaggesh-8.jpg

ಜಗ್ಗೇಶ್‌ ಅಂದರೆ ಹಾಸ್ಯ ನೆನಪಾಗುತ್ತೆ. ಅವರ ಹಾಸ್ಯಭರಿತ ಮಾತುಗಳು ತೇಲಾಡುತ್ತವೆ. ಹಾಗೆಯೇ ಅಷ್ಟೇ ಗಂಭೀರವಾಗಿಯೂ ಮಾತಾಡುತ್ತಾರೆ. ಕನ್ನಡದ ನೆಲ,ಜಲ,ಭಾಷೆ ವಿಷಯ ಬಂದಾಗಲಂತೂ ಅಷ್ಟೇ ಪ್ರೀತಿಯಿಂದ ಮಾತಾಡುತ್ತಾರೆ. ಈಗ ಅವರು ಕನ್ನಡ ಸರ್ಕಾರಿ ಶಾಲೆ ಕುರಿತು ಮಾತಾಡುತ್ತಿದ್ದಾರೆ. ಹಾಗಂತ, ಬೇರೇನೋ ಅರ್ಥ ಕಲ್ಪಿಸಿಕೊಳ್ಳುವುದು ಬೇಡ. ಅವರೊಂದು ಚಿತ್ರ ಮಾಡುತ್ತಿದ್ದಾರೆ.

ಆ ಚಿತ್ರದಲ್ಲಿ “ಕನ್ನಡ ಮೇಷ್ಟ್ರು’ ಪಾತ್ರ ನಿರ್ವಹಿಸುತ್ತಿದ್ದಾರೆ. ಆ ಕುರಿತು ಸಾಕಷ್ಟು ಗಂಭೀರವಾಗಿಯೇ ಮಾತಾಡುತ್ತಾರೆ ಜಗ್ಗೇಶ್‌. ಅವರ ಮಾತುಗಳಲ್ಲಿದ್ದ ಗಂಭೀರತೆ ಹೀಗಿತ್ತು. “ನಾನು ಆ ಪಕ್ಷ, ಈ ಪಕ್ಷ ಅಂತ ಹೇಳುತ್ತಿಲ್ಲ. ಎಲ್ಲಾ ರಾಜಕೀಯ ಪಕ್ಷಗಳು ಒಂದೇ. ಅವರಿಗೆ ಬೇಕಾಗಿರೋದು, ತಮಗೆ ವೋಟ್‌ ಹಾಕಿದವರಿಗೆ ಏನೇನು ಫ್ರೀ ಆಗಿ ಕೊಡಬಹುದೋ, ಅದನ್ನ ಕೊಟ್ಟು ತಮ್ಮ ಬೇಳೆ ಬೇಯಿಸಿಕೊಳ್ಳೋದು. ನೀವು ಏನಾದ್ರೂ ಕೊಡಿ ಅಥವಾ ಬಿಡಿ.

ಆದರೆ, ಅದರ ಜೊತೆ ವಿದ್ಯೆಯನ್ನ ಮಾತ್ರ ಫ್ರೀ ಆಗಿ ಕೊಡಿ. ನೀವು ಅದೊಂದನ್ನ ಕೊಟ್ರೆ, ಉಳಿದದ್ದು ಅದರ ಹಿಂದೆ ತನ್ನಿಂದ ತಾನೇ ಬರುತ್ತದೆ. ಮೇ-ಜೂನ್‌ ತಿಂಗಳು ಬಂತೆಂದರೆ, ಎಷ್ಟೋ ಪೋಷಕರ ಮುಖ ಬಾಡಿ ಹೋಗುತ್ತದೆ. ತಮ್ಮ ಮಕ್ಕಳನ್ನು ಯಾವ ಶಾಲೆಗೆ ಸೇರಿಸಬೇಕು? ಅದಕ್ಕೆ ಹೇಗೆ ಹಣ ಹೊಂದಿಸಿಕೊಳ್ಳಬೇಕು ಎಂಬ ಚಿಂತೆ ಶುರುವಾಗುತ್ತೆ. ಇವತ್ತು ಮಕ್ಕಳನ್ನ ಶಾಲೆಗೆ ಸೇರಿಸೋದು ಅಂದರೆ, ಪೋಷಕರಿಗೆ ಭಯವಾಗುತ್ತೆ. ಹಾಗಾಗಿ ವಿದ್ಯೆ ಕೊಡುವತ್ತವೂ ಗಮನಹರಿಸಬೇಕಿದೆ’ ಎಂಬುದು ಅವರ ಮಾತು.

ಜಗ್ಗೇಶ್‌ “ಕಾಳಿದಾಸ ಕನ್ನಡ ಮೇಷ್ಟ್ರು’ ಚಿತ್ರದಲ್ಲಿ ನಟಿಸುತ್ತಿದ್ದು, ಅದರಲ್ಲಿ ಅವರದು ಮೇಷ್ಟ್ರು ಪಾತ್ರ. ಸೋಮವಾರವಷ್ಟೇ ಚಿತ್ರಕ್ಕೆ ಮುಹೂರ್ತ ನೆರವೇರಿದೆ. ಜಗ್ಗೇಶ್‌ ಕಂಡ ಇವತ್ತಿನ ಕನ್ನಡ ಶಾಲೆಗಳಿಗೆ ಕಳುಹಿಸುವ ಅನೇಕ ಪೋಷಕರ ಮನಸ್ಥಿತಿ, ಅವರ ತುಮುಲ-ತಳಮಳಗಳ ಬಗ್ಗೆ ಹೇಳುತ್ತಲೇ ಹೋಗುತ್ತಾರೆ. “ಒಂದು ಗಂಭೀರ ವಿಷಯವನ್ನು ಈ ಚಿತ್ರದಲ್ಲಿ ನವಿರಾದ ಹಾಸ್ಯದ ಮೂಲಕ ಹೇಳುತ್ತಿರುವ ಅವರಿಗೆ ಈ ವಿಷಯ ಜನಕ್ಕೆ ಮುಟ್ಟಿದ್ರೆ ಇದೊಂದು ಆಂದೋಲನವಾಗುತ್ತೆ’ ಎಂಬ ನಂಬಿಕೆ ಇಟ್ಟಿದ್ದಾರೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.