ಗುರುವಿನ ಮಹತ್ವ ತಿಳಿಯುವ ತವಕ


Team Udayavani, Oct 3, 2019, 3:01 AM IST

Shree

ಕೆಲ ತಿಂಗಳ ಹಿಂದಷ್ಟೇ “ಅಮ್ಮನ ಮನೆ’, “ತ್ರಯಂಬಕಂ’ ಚಿತ್ರಗಳ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದ ನಟ ರಾಘವೇಂದ್ರ ರಾಜಕುಮಾರ್‌ ಈಗ ಮತ್ತೊಂದು ಚಿತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಅಂದಹಾಗೆ, ರಾಘಣ್ಣ ಅಭಿನಯಿಸುತ್ತಿರುವ ಹೊಸಚಿತ್ರದ ಹೆಸರು “ಶ್ರೀ’. ಇನ್ನು ಈ ಚಿತ್ರದ ಶೀರ್ಷಿಕೆಗೆ “ತಸ್ಮೈ ಶ್ರೀ ಗುರುವೇ ನಮಃ’ ಎನ್ನುವ ಅಡಿಬರಹವಿದ್ದು, ಶಿಕ್ಷಣ, ಗುರುಕುಲ, ಜೀವನ ಮೌಲ್ಯಗಳ ಸುತ್ತ ನಡೆಯುವ ಚಿತ್ರದ ಕಥೆ ಸಾಗುತ್ತದೆಯಂತೆ.

ಕಿರುತೆರೆಯ “ಲಕ್ಷ್ಮೀ ಬಾರಮ್ಮ’ ಧಾರಾವಾಹಿಯ ಖ್ಯಾತಿಯ ನಟ ಚಂದು ಗೌಡ ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ರಾಘವೇಂದ್ರ ರಾಜಕುಮಾರ್‌ ಚಿತ್ರದಲ್ಲಿ ನಾಯಕನ ತಂದೆಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಚಿತ್ರದಲ್ಲಿ ನವನಟಿ ಅನೂಪಾ ಸತೀಶ್‌ ನಾಯಕಿಯಾಗಿದ್ದು, ಹಿರಿಯ ನಟರಾದ ಹೊನ್ನವಳ್ಳಿ ಕೃಷ್ಣ, ಡಿಂಗ್ರಿ ನಾಗರಾಜ್‌, ಮಾಸ್ಟರ್‌ ನೀಲ್‌ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಕೆಲಕಾಲ ವಾಹಿನಿಗಳಲ್ಲಿ ನಿರೂಪಕಿಯಾಗಿ, ಪತ್ರಕರ್ತೆಯಾಗಿ ಕೆಲಸ ಮಾಡಿದ ಅನುಭವವಿರುವ ಅದಿತಿ ಮಹದೇವ್‌ ಈ ಚಿತ್ರದ ಮೂಲಕ ನಿರ್ದೇಶಕಿಯಾಗುತ್ತಿದ್ದಾರೆ. ಚಿತ್ರದ ಕಥಾ ಹಂದರದ ಬಗ್ಗೆ ಮಾತನಾಡುವ ಅದಿತಿ, “ಇದೊಂದು ಸಾಮಾಜಿಕ ಮೌಲ್ಯಗಳನ್ನು ಹೇಳುವ ಚಿತ್ರ. ತುಂಟ ಹುಡುಗನೊಬ್ಬನಿಗೆ ಒಳ್ಳೆಯ ವಾತಾವರಣದಲ್ಲಿ ಶಿಕ್ಷಣ ಸಿಕ್ಕರೆ ಆತ ಹೇಗೆ ಬೆಳೆದು ಸಮಾಜಕ್ಕೆ ಮಾದರಿಯಾಗುತ್ತಾನೆ.

ಗುರುವಿನ ಮಹತ್ವವೇನು ಅನ್ನೋದೆ ಚಿತ್ರದ ಕಥೆಯ ಒಂದು ಎಳೆ. ಚಿತ್ರದ ಕಥೆ ಸಿದ್ದಪಡಿಸುವ ವೇಳೆಯಲ್ಲಿ ಹಲವು ಬಾರಿ ಸಿದ್ಧಗಂಗಾ ಮಠಕ್ಕೆ ಭೇಟಿಕೊಟ್ಟು, ಅಲ್ಲಿ ಮಕ್ಕಳ ಜೊತೆ ಸಮಯ ಕಳೆದು, ಗುರುಗಳ ಜತೆಗಿನ ಒಡನಾಟವನ್ನು ತಿಳಿದು ಈ ಚಿತ್ರ ಮಾಡುತ್ತಿದ್ದೇವೆ. ಶ್ರೀ ಶಿವಕುಮಾರ ಸ್ವಾಮಿಗಳು ಬದುಕಿದ್ದಾಗಲೇ, ಮಠದಲ್ಲಿ ವಿದ್ಯಾರ್ಥಿಗಳು ಮತ್ತು ಶಿಷ್ಯರೊಂದಿಗೆ ಅವರ ಓಡಾಟದ ಕೆಲ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.

ಚಿತ್ರದ ಉಳಿದ ಭಾಗದ ಚಿತ್ರೀಕರಣವನ್ನು ಮೂರು ಹಂತಗಳಲ್ಲಿ ತುಮಕೂರು, ಬೆಂಗಳೂರು ಸುತ್ತಮುತ್ತ ಚಿತ್ರೀಕರಿಸುವ ಯೋಚನೆಯಿದೆ’ ಎಂದು ಚಿತ್ರದ ಬಗ್ಗೆ ವಿವರಣೆ ನೀಡಿದರು. “ಆರ್‌. ಸ್ವಾಧೀನ್‌ ಕುಮಾರ್‌ ಚಿತ್ರಾಲಯ’ ಬ್ಯಾನರ್‌ನಲ್ಲಿ ವಿತರಕ ಆರ್‌. ಸ್ವಾಧೀನ್‌ ಕುಮಾರ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದ್ದು, ನಿರ್ದೇಶಕ ಎ.ಪಿ ಅರ್ಜುನ್‌, ಬಹದ್ದೂರ್‌ ಚೇತನ್‌, ಮುರಳೀಧರ ಹಾಲಪ್ಪ ಮೊದಲಾದವರು ಹಾಜರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.