ಸಿನಿಮಾಗಾಗಿ ನಾಯಕಿಯ ರಕ್ತದಾನ!


Team Udayavani, Dec 11, 2017, 10:47 AM IST

Choori-Katte.jpg

ಒಂದು ಚಿತ್ರ ಅಂದಮೇಲೆ ಒಬ್ಬ ಲೈಟ್‌ಬಾಯ್‌ನಿಂದ ಹಿಡಿದು ಪ್ರತಿಯೊಬ್ಬರೂ ಕಷ್ಟಪಟ್ಟು ಕೆಲಸ ಮಾಡಲೇಬೇಕು. ಎಲ್ಲರ ಪರಿಶ್ರಮದಿಂದಲೇ ಒಂದೊಳ್ಳೆ ಚಿತ್ರ ಹೊರ ಬರೋದು. ಎಷ್ಟೋ ಮಂದಿ ಒಂದು ಚಿತ್ರ ಶುರುವಾಗಿ, ಮುಗಿಯೋ ಹೊತ್ತಿಗೆ ಎಷ್ಟೆಲ್ಲಾ ಕಷ್ಟಪಟ್ಟಿರುತ್ತಾರೆ. ಯೂನಿಟ್‌ನವರಂತೂ ಬೆವರು ಸುರಿಸಿ ಕೆಲಸ ಮಾಡಿರುತ್ತಾರೆ. ಅಷ್ಟೇ ಅಲ್ಲ, ಕ್ಯಾಮೆರಾ ಮುಂದೆ ನಿಲ್ಲುವ ನಟ, ನಟಿಯರ ಶ್ರಮವೂ ಇದಕ್ಕೆ ಹೊರತಲ್ಲ.

ಸಿನಿಮಾಗಾಗಿ, ಕಷ್ಟಪಡೋದು, ಬೆವರು ಸುರಿಸೋದು ಹೊಸ ಸುದ್ದಿಯೇನಲ್ಲ. ಆದರೆ, ಸಿನಿಮಾಗೋಸ್ಕರ ರಕ್ತ ಸುರಿಸೋದು ನಿಜಕ್ಕೂ ಹೊಸ ಸುದ್ದಿಯೇ. ಇಲ್ಲೀಗ ಹೇಳ ಹೊರಟಿರೋದು ನಟಿಯೊಬ್ಬರು ಸಿನಿಮಾಗಾಗಿ ರಕ್ತ ಸುರಿಸಿದ್ದಾರೆ! ಹೌದು, ರಘು ಶಿವಮೊಗ್ಗ ನಿರ್ದೇಶನದ “ಚೂರಿಕಟ್ಟೆ’ ಚಿತ್ರದಲ್ಲಿ ಅಂಥದ್ದೊಂದು ಘಟನೆ ನಡೆದಿದೆ. ಈ ಚಿತ್ರಕ್ಕೆ ಪ್ರವೀಣ್‌ ನಾಯಕ, ಪ್ರೇರಣಾ ನಾಯಕಿ.

ಈ ಚಿತ್ರದ ದೃಶ್ಯವೊಂದರ ಚಿತ್ರೀಕರಣ ನಡೆಯುವಾಗ, ಸಣ್ಣದ್ದೊಂದು ಅವಘಡ ಸಂಭವಿಸಿ, ಪ್ರೇರಣಾ ಹಣೆಯಿಂದ ರಕ್ತ ಸುರಿದಿದೆ. ಈ ವಿಷಯವನ್ನು ಹೊರಹಾಕಿದ್ದು, ಅಚ್ಯುತ್‌. “ಚೂರಿಕಟ್ಟೆ’ ಚಿತ್ರದಲ್ಲಿ ಅಚ್ಯುತ್‌ ಅರಣ್ಯ ಪೊಲೀಸ್‌ ಅಧಿಕಾರಿಯಾಗಿ ನಟಿಸಿದ್ದಾರೆ. ಕ್ಲೈಮ್ಯಾಕ್ಸ್‌ ಚಿತ್ರೀಕರಣದ ದೃಶ್ಯದಲ್ಲಿ ಅಚ್ಯುತ್‌ ಕೈಯಲ್ಲಿದ್ದ ಗನ್‌, ಪ್ರೇರಣಾ ಅವರ ಹಣೆಗೆ ತಗುಲಿ ಹಣೆಯಿಂದ ರಕ್ತ ಸುರಿದಿದೆ.

ತಕ್ಷಣವೇ, ಅಲ್ಲಿದ್ದವರೆಲ್ಲೂ ಗಾಬರಿಗೊಂಡು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಆದರೆ, ಆ ದೃಶ್ಯವನ್ನು ಮುಗಿಸಲೇಬೇಕಿತ್ತು. ಆದರೆ, ಹಣೆಗೆ ಬಟ್ಟೆ ಕಟ್ಟಿಕೊಂಡು ಹೇಗೆ ಆ ದೃಶ್ಯದಲ್ಲಿ ಪಾಲ್ಗೊಳ್ಳಬೇಕು? ಕಂಟಿನ್ಯುಟಿ ಬೇರೆ ಮಿಸ್‌ ಆಗಿಬಿಡುತ್ತೆ. ಕೊನೆಗೆ ನಿರ್ದೇಶಕರು ಚಿತ್ರತಂಡದವರೊಂದಿಗೆ ಚರ್ಚಿಸಿ, ಆ ದೃಶ್ಯವನ್ನು ಮುಗಿಸಿದ್ದಾರೆ. ಹಣೆಗೆ ಪೆಟ್ಟು ಬಿದ್ದಿದ್ದರೂ, ಪ್ರೇರಣಾ ಅವರನ್ನು ನೇರವಾಗಿ ಕ್ಯಾಮೆರಾ ಮುಂದೆ ತೋರಿಸದೆ, ಸೈಡ್‌ ಆ್ಯಂಗಲ್‌ನಲ್ಲಿ ನಿಲ್ಲಿಸಿ, ಆ ದೃಶ್ಯವನ್ನು ಚಿತ್ರೀಕರಿಸಿದ್ದಾರೆ.

ಅಲ್ಲಿಗೆ ಕ್ಯಾಮೆರಾದಲ್ಲಿ ಗಾಯಗೊಂಡಿದ್ದು ಒಂದಷ್ಟೂ ಕಾಣಿಸಿಲ್ಲ. ಅಷ್ಟರಮಟ್ಟಿಗೆ ಎಲ್ಲರೂ ಆ ದೃಶ್ಯವನ್ನು ಯಶಸ್ವಿಗೊಳಿಸಿದ್ದಾರೆ.ಇಡೀ ತಂಡ, ಪ್ರೇರಣಾ ಅವರ ಸಿನಿಮಾ ಪ್ರೀತಿಯನ್ನು ಕೊಂಡಾಡಿದ್ದಲ್ಲದೆ, ಸಿನಿಮಾಗಾಗಿ ಅದೆಷ್ಟೋ ಮಂದಿ ಬೆವರು ಸುರಿಸಿದರೆ, ಪ್ರೇರಣಾ ಮಾತ್ರ ರಕ್ತದಾನ ಮಾಡಿದ್ದಾರೆ ಅಂತ ಖುಷಿಯಿಂದ ಹೇಳಿಕೊಳ್ಳುತ್ತಾರೆ. ಅಂದಹಾಗೆ, ನಿರ್ದೇಶಕ ರಘು ಶಿವಮೊಗ್ಗ ಅವರು “ಚೌಕಾಬಾರ’ ಬಳಿಕ “ಚೂರಿಕಟ್ಟೆ’ ನಿರ್ದೇಶಿಸಿದ್ದಾರೆ.

ನಯಾಜ್‌ ಮತ್ತು ತುಳಸಿರಾಮುಡು ನಿರ್ಮಾಣದ ಈ ಚಿತ್ರಕ್ಕೆ ಕೈಲಾಶ್‌ ಕಥೆ ಬರೆದಿದ್ದಾರೆ. ಅರವಿಂದ್‌ ಚಿತ್ರಕಥೆ ಬರೆದಿದ್ದಾರೆ. ಇದೊಂದು ಟಂಬರ್‌ ಮಾಫಿಯಾ ಕುರಿತ ಕಥೆ. ಚಿತ್ರದಲ್ಲಿ ದತ್ತಣ್ಣ, ಮಂಜುನಾಥ್‌ ಹೆಗಡೆ, ಬಾಲಾಜಿ ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ನಟಿಸಿದ್ದಾರೆ. ಚಿತ್ರಕ್ಕೆ ವಾಸುಕಿ ವೈಭವ್‌ ಸಂಗೀತ ನೀಡಿದ್ದಾರೆ. ನೊಬಿನ್‌ಪಾಲ್‌ ಹಿನ್ನೆಲೆ ಸಂಗೀತವಿದೆ. ಅದ್ವೆ„ತ ಗುರುಮೂರ್ತಿ ಕ್ಯಾಮೆರಾ ಹಿಡಿದಿದ್ದಾರೆ.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.