ಆದರ್ಶ ಯಜಮಾನ ಈ “ದಶರಥ’


Team Udayavani, Mar 24, 2019, 11:17 AM IST

Dasharatha

ರವಿಚಂದ್ರನ್‌ ಅಭಿನಯದ “ದೃಶ್ಯಂ’ ಚಿತ್ರ ನೋಡಿದವರಿಗೆ ಅವರನ್ನು ಪುನಃ ಅಂಥದ್ದೇ ಫ್ಯಾಮಿಲಿ ಚಿತ್ರದಲ್ಲಿ ನೋಡುವ ಬಯಕೆಯನ್ನು ಪ್ರೇಕ್ಷಕರು ಬಯಸಿದ್ದರು. ಅಭಿಮಾನಿಗಳಿಗೂ ತಮ್ಮ ಹೀರೋನನ್ನು ಹಾಗೆಯೇ ನೋಡಬೇಕು ಎಂಬ ತುಡಿತವಿತ್ತು. ಇದೀಗ “ದಶರಥ’ ಚಿತ್ರದ ಮೂಲಕ ಅದು ಈಡೇರಿದೆ.

ಹೌದು, ರವಿಚಂದ್ರನ್‌ ಈ ಚಿತ್ರದಲ್ಲಿ ವಿಶೇಷ ಪಾತ್ರ ನಿರ್ವಹಿಸಿದ್ದಾರೆ. ನಿರ್ದೇಶಕ ಎಂ.ಎಸ್‌.ರಮೇಶ್‌ ಅವರನ್ನು ಹೊಸ ಪಾತ್ರದ ಮೂಲಕ ತೆರೆಯ ಮೇಲೆ ತರುತ್ತಿದ್ದಾರೆ. ಚಿತ್ರ ಪೂರ್ಣಗೊಂಡಿದ್ದು, ಇಷ್ಟರಲ್ಲೇ ಅದು ಪ್ರೇಕ್ಷಕರ ಮುಂದೆ ಬರಲಿದೆ.

ರವಿಚಂದ್ರನ್‌ ಇದುವರೆಗೆ ವಕೀಲರಾಗಿ ಕಾಣಿಸಿಕೊಂಡಿದ್ದು ಕಡಿಮೆ. ಬೆರಳೆಣಿಕೆ ಚಿತ್ರಗಳಲ್ಲಿ ಮಾತ್ರ ಲಾಯರ್‌ ಆಗಿ ಸೈ ಎನಿಸಿಕೊಂಡಿದ್ದ ಅವರು, ಮಾಡಿದ ಚಿತ್ರಗಳೆಲ್ಲವೂ ಸೂಪರ್‌ ಹಿಟ್‌ ಆಗಿದ್ದವು. ಕಳೆದ ಹತ್ತು ವರ್ಷಗಳಿಂದ ಅನೇಕ ಚಿತ್ರಗಳಲ್ಲಿ ನಟಿಸಿದ್ದರೂ, ರವಿಚಂದ್ರನ್‌ ಲಾಯರ್‌ ಆಗಿ ಕಾಣಿಸಿಕೊಂಡಿರಲಿಲ್ಲ.

ಈಗ “ದಶರಥ’ ಚಿತ್ರದಲ್ಲಿ ಬ್ಲಾಕ್‌ ಕೋಟು ಹಾಕಿಕೊಂಡು ಅಭಿಮಾನಿಗಳನ್ನು ರಂಜಿಸಲು ಅಣಿಯಾಗಿದ್ದಾರೆ. ರವಿಚಂದ್ರನ್‌ ಅವರಿಗೆ ಈ ಚಿತ್ರದ ಕಥೆ ಮತ್ತು ಪಾತ್ರ ಎರಡೂ ಪಕ್ಕಾ ಹೊಂದಿಕೊಂಡಿವೆ. ಹಾಗಾದರೆ ಇಲ್ಲಿ ರವಿಚಂದ್ರನ್‌ ಲಾಯರ್‌ ಅಷ್ಟೇನಾ ಎಂಬ ಪ್ರಶ್ನೆ ಬರಬಹುದು. ಅವರಿಲ್ಲಿ ಮನೆಯೊಳಗೆ ತಂದೆಯಾಗಿ, ನ್ಯಾಯಾಲಯದಲ್ಲಿ ವಕೀಲರಾಗಿ ಕಾಣಿಸಿಕೊಂಡಿದ್ದಾರೆ.

“ಮನೆಯಲ್ಲಿ ಮಕ್ಕಳು ತಪ್ಪು ಮಾಡದಿದ್ದಾಗ ಅವರ ಪರ ನಿಲ್ಲಬೇಕು. ತಪ್ಪು ಮಾಡಿದವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು’ ಎಂಬ ನಿಲುವನ್ನು ಪ್ರತಿಪಾದಿಸುವುದು ಅವರ ಪಾತ್ರವಂತೆ. ಈ ಚಿತ್ರ ನೋಡಿದ ಮೇಲೆ ಈ ಥರದ ಅಪ್ಪ ನಮಗೂ ಇರಬೇಕು ಅಂಥ ಪ್ರತಿಯೊಬ್ಬರಿಗೂ ಅನಿಸುತ್ತದೆ.

ಮನೆಯ ಒಬ್ಬ ಆದರ್ಶ ಯಜಮಾನ, ಆದರ್ಶ ತಂದೆ ಹೇಗೆ ವರ್ತಿಸಬಹುದು ಅನ್ನೋದನ್ನ ರವಿಚಂದ್ರನ್‌ ಪಾತ್ರ ತೋರಿಸುತ್ತದೆ ಎಂಬುದು ನಿರ್ದೇಶಕರ ಮಾತು. ಇಂದು ಎಲ್ಲರ ಮನೆಯಲ್ಲೂ ನಡೆಯುವ ಘಟನೆಯಂತೆಯೇ ಈ ಕಥೆ ಹೊಂದಿದೆಯಂತೆ. ನಮ್ಮ ಸುತ್ತಮುತ್ತ ಬಹುತೇಕ ಎಲ್ಲರೂ ನೋಡಿರುವ, ಅನುಭವಿಸಿರುವ ಕಥೆಯೇ “ದಶರಥ’ ಚಿತ್ರದಲ್ಲೂ ಇದೆಯಂತೆ.

“ವಯಸ್ಸಿಗೆ ಬಂದ ಹುಡುಗಿಯರು ಎಷ್ಟು ಸೇಫ್ ಆಗಿ ಮನೆಗೆ ಬರುತ್ತಾರೆ, ಅವರ ಸಮಸ್ಯೆಗಳೇನು, ಮನೆಯವರ ಪ್ರತಿಕ್ರಿಯೆ ಏನು, ನಮ್ಮ ಸುತ್ತಮುತ್ತಲಿನ ವಾತಾವರಣ ಹೇಗಿದೆ ಅನ್ನೋದನ್ನ ಈ ಚಿತ್ರ ಪ್ರತಿಬಿಂಬಿಸುವಂತಿದೆಯಂತೆ. “ದಶರಥ’ ಚಿತ್ರದಲ್ಲಿ ರವಿಚಂದ್ರನ್‌ ಅವರೊಂದಿಗೆ ಅನೇಕ ಕಲಾವಿದರು ಬಣ್ಣ ಹಚ್ಚಿದ್ದಾರೆ.

ಸೋನಿಯಾ ಅಗರ್‌ವಾಲ್‌, ಅಭಿರಾಮಿ, ರಂಗಾಯಣ ರಘು, ಅವಿನಾಶ್‌, ಶೋಭರಾಜ್‌, ತಬಲ ನಾಣಿ, ಮೇಘಶ್ರೀ, ಮಾಲತಿ ಸರದೇಶಪಾಂಡೆ ಹೀಗೆ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ. ಗುರುಕಿರಣ್‌ ಸಂಗೀತವಿದೆ. ವಿ. ಮನೋಹರ್‌, ಕವಿರಾಜ್‌, ಸಂತೋಷ್‌ ನಾಯಕ್‌ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಜಿ.ಎಸ್‌.ವಿ ಸೀತಾರಾಮ್‌ ಛಾಯಾಗ್ರಹಣವಿದೆ.

ಬೆಂಗಳೂರು, ಸಕಲೇಶಪುರ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಎಂ.ಎಸ್‌.ಆರ್‌ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ಅಕ್ಷಯ್‌ ಮಹೇಶ್‌ “ದಶರಥ’ ಚಿತ್ರವನ್ನು ನಿರ್ಮಿಸಿದ್ದಾರೆ. ಈಗಾಗಲೇ ಪ್ರಚಾರ ಕಾರ್ಯ ಶುರುಮಾಡಿರುವ ಚಿತ್ರತಂಡ, ಚಿತ್ರವನ್ನು ತೆರೆಗೆ ತರಲು ತಯಾರಿ ಮಾಡಿಕೊಂಡಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.