ಕೊನೆಯ ಹಂತದ ಬಂಡಾಯ


Team Udayavani, Jan 23, 2018, 10:55 AM IST

naragunda-.jpg

“ನರಗುಂದ ಬಂಡಾಯ’ ಎಂಬ ಸಿನಿಮಾವೊಂದು ಸೆಟ್ಟೇರಿರುವ ವಿಚಾರ ನಿಮಗೆ ಗೊತ್ತೇ ಇದೆ. ಉತ್ತರ ಕರ್ನಾಟಕದಲ್ಲಿ ನಡೆದ ಬಹುದೊಡ್ಡ ಬಂಡಾಯ ಇದಾಗಿದ್ದು, ಆ ಅಂಶವನ್ನಿಟ್ಟುಕೊಂಡು ಈ ಸಿನಿಮಾ ಮಾಡಲು ಚಿತ್ರತಂಡ ಹೊರಟಿತ್ತು. ಸಿದ್ಧೇಶ್‌ ವಿರಕ್ತಮಠ ಅವರ ಕಥೆ, ನಿರ್ಮಾಣದ ಈ ಚಿತ್ರವನ್ನು ನಾಗೇಂದ್ರ ಮಾಗಡಿಯವರು ನಿರ್ದೇಶಿಸಲು ಹೊರಟಿದ್ದರು. ಈಗ ಬಹುತೇಕ ಚಿತ್ರೀಕರಣ ಮುಗಿದಿದ್ದು, ಚಿತ್ರತಂಡ ಖುಷಿಯಾಗಿದೆ.

ಖುಷಿಗೆ ಕಾರಣ ಸಿನಿಮಾ ಅಂದುಕೊಂಡಂತೆ ಮೂಡಿಬಂದಿರೋದು. “ಈ ಸಿನಿಮಾ ಆಗಲು ಮುಖ್ಯ ಕಾರಣ ನಿರ್ಮಾಪಕರ ಸಿನಿಮಾ ಪ್ರೀತಿ. ಅವರು ಆ ನೆಲದವರು. ಬಂಡಾಯವನ್ನು ಕಣ್ಣಾರೆ ಕಂಡವರು. ಆ ಕಥೆ ಮಾಡಿಕೊಂಡು ಸಿನಿಮಾ ಮಾಡಬೇಕೆಂಬ ಆಸೆಯಿಂದ ಬೆಂಗಳೂರಿಗೆ ಬಂದವರು. ಈಗ ಅವರ ಆಸೆ ಈಡೇರಿದೆ. ಸಿನಿಮಾ ಆರಂಭವಾಗಿ ಸಾಂಗವಾಗಿ ಸಾಗುತ್ತಿದೆ. ನಿರ್ಮಾಪಕರಿಗೆ ಮತ್ತೂಬ್ಬ ಸಿನಿಮಾ ಪ್ರೇಮಿ ಶೇಖರ್‌ ಯಲುವಿಗಿ ಸಾಥ್‌ ನೀಡಿದ್ದಾರೆ.

ಚಿತ್ರದ ವಿತರಣೆಯನ್ನು ಪಡೆದುಕೊಂಡು ನಿರ್ಮಾಣದಲ್ಲೂ ಸಾಥ್‌ ನೀಡಿದ್ದಾರೆ. ಇಲ್ಲಿವರೆಗೆ ಶೇ.75 ರಷ್ಟು ಭಾಗ ಚಿತ್ರೀಕರಣ, ಇನ್ನು 22 ದಿನ ಚಿತ್ರೀಕರಣ ಬಾಕಿ ಇದೆ’ ಎಂದು ಚಿತ್ರದ ಬಗ್ಗೆ ವಿವರ ಕೊಟ್ಟರು ನಾಗೇಂದ್ರ ಮಾಗಡಿ. ಈ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ಸಿದ್ಧೇಶ ವಿರಕ್ತಮಠ ಅವರಿಗೆ ತಮ್ಮ ಕನಸು ಈಡೇರುತ್ತಿರುವ ಖುಷಿ. ಕಥೆ ಹಿಡಿದುಕೊಂಡು ಸುಮಾರು ಎಂಟು ವರ್ಷ ಬೆಂಗಳೂರು ಸುತ್ತಿದರಂತೆ.

ಆದರೆ, ಯಾರೂ ಕೂಡಾ ಸಮರ್ಪಕವಾಗಿ ಸ್ಪಂದಿಸದ ಕಾರಣ, ಇಷ್ಟು ಸಮಯ ಅವರ ಆಸೆ ಈಡೇರಲಿಲ್ಲವಂತೆ. ಆದರೆ, ನಿರ್ದೇಶಕ ಮಾಗಡಿ ಪಾಂಡು ಅವರು, ಕಥೆ ಕೇಳಿ ಆಸಕ್ತರಾಗಿ ಒಳ್ಳೆಯ ತಂಡದೊಂದಿಗೆ ಈ ಸಿನಿಮಾ ಮಾಡಿಕೊಡಲು ಮುಂದಾದರು. ಅದರಂತೆ ಈಗ ಸಿನಿಮಾ ಮಾಡಿದ್ದಾರೆ. ತುಂಬಾ ಅಚ್ಚುಕಟ್ಟು ನಿರ್ದೇಶಕ. ತಮ್ಮ ಕಲ್ಪನೆಗೆ ತಕ್ಕಂತೆ ಸಿನಿಮಾ ಮಾಡಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚಿತ್ರದಲ್ಲಿ ರಕ್ಷಿತ್‌ ಹಾಗೂ ಶುಭಾ ಪೂಂಜಾ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ರಕ್ಷಿತ್‌ಗೆ ಈ ಸಿನಿಮಾ ಮೂಲಕ ಹೀರೋ ಆಗಿ ಲಾಂಚ್‌ ಆಗುತ್ತಿರುವ ಖುಷಿ ಇದೆಯಂತೆ. ಇಂದಿನ ಯುವ ಪೀಳಿಗೆ ತಿಳಿದುಕೊಳ್ಳಬೇಕಾದ ಕಥೆ ಎಂಬುದು ಅವರ ಮಾತು. ಶುಭಾ ಪೂಂಜಾಗೆ ಇಲ್ಲಿ ತೊಡೆ ತಟ್ಟಿ ನಿಲ್ಲುವಂತಹ ಪಾತ್ರ ಸಿಕ್ಕಿದೆಯಂತೆ. ಉಳಿದಂತೆ ಚಿತ್ರದಲ್ಲಿ ನಟಿಸಿದ ಸುರೇಶ್‌ ರೈ, ಅಶ್ವತ್ಥ್, ಗಂಗಾಧರಯ್ಯ, ಸಂಭಾಷಣೆಕಾರ ಕೇಶಾವಾದಿತ್ಯ ಸೇರಿದಂತೆ ಚಿತ್ರತಂಡವರು ತಮ್ಮ ಅನುಭವ ಹಂಚಿಕೊಂಡರು. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.