“10ನೇ ತರಗತಿ’ಯ ಜೀವನ ಪಾಠ

ನೈಜ ಘಟನೆ ಸ್ಫೂರ್ತಿ ಪಡೆದ ಕಥೆ

Team Udayavani, Jul 11, 2019, 3:00 AM IST

10ne-Tharagathi

ಪ್ರತಿಯೊಬ್ಬರ ವಿದ್ಯಾರ್ಥಿ ಜೀವನದಲ್ಲೂ “10ನೇ ತರಗತಿ’ ಎನ್ನುವುದು ಮಹತ್ವದ ಘಟ್ಟವಾಗಿರುತ್ತದೆ. ಹೈಸ್ಕೂಲ್‌ನಿಂದ ಕಾಲೇಜು ಮೆಟ್ಟಿಲು ಹತ್ತುವ ತವಕದಲ್ಲಿರುವ “10ನೇ ತರಗತಿ’ ಯ ಹರೆಯದ ಮನಸ್ಸುಗಳಲ್ಲಿ ಹತ್ತಾರು ಯೋಚನೆಗಳು, ಕನಸುಗಳು ಮನೆ ಮಾಡಿರುತ್ತವೆ. ಈಗ ಇದೇ ವಿಷಯವನ್ನು ಇಟ್ಟುಕೊಂಡು “10ನೇ ತರಗತಿ’ ಎನ್ನುವ ಹೆಸರಿನಲ್ಲೇ ಚಿತ್ರವೊಂದು ತೆರೆಗೆ ಬರುತ್ತಿದೆ.

“10ನೇ ತರಗತಿ’ಯ ಹುಡುಗರಲ್ಲಿ ತಾನು ಡಾಕ್ಟರ್‌ ಆಗಬೇಕು, ಇಂಜಿನಿಯರ್‌ ಆಗಬೇಕು, ಪೊಲೀಸ್‌ ಆಗಬೇಕು ಹೀಗೆ… ಜೀವನದಲ್ಲಿ ಮುಂದೇನಾಗಬೇಕು ಎನ್ನುವ ಬಗ್ಗೆ ಹತ್ತಾರು ಕನಸುಗಳಿರುತ್ತವೆ. ಇದರ ನಡುವೆಯೇ, ಅವರಲ್ಲಿ ಒಂದು ನವಿರಾದ ಪ್ರೀತಿ – ಸ್ನೇಹ ಕೂಡ ಮನಸ್ಸಿನಲ್ಲಿ ಮೂಡಿರುತ್ತದೆ. ಇಂತಹ ವಿಷಯಗಳ ಸುತ್ತ “10ನೇ ತರಗತಿ’ ಚಿತ್ರ ನಡೆಯುತ್ತದೆ. ಯುವ ನಿರ್ದೇಶಕ ಮಹೇಶ್‌ ಸಿಂಧುವಳ್ಳಿ ಇಂಥದ್ದೊಂದು ವಿಷಯವನ್ನು ಚಿತ್ರವಾಗಿಸಿ ತೆರೆಮೇಲೆ ತರುತ್ತಿದ್ದಾರೆ.

ಡಿಪ್ಲೊಮಾ ಇನ್‌ ಫಿಲ್ಮಿ ಕೋರ್ಸ್‌ ಮಾಡಿರುವ ಮತ್ತು ಓಂ ಪ್ರಕಾಶ್‌ ರಾವ್‌ ಮೊದಲಾದ ನಿರ್ದೇಶಕರ ಬಳಿ ಕೆಲಸ ಮಾಡಿದ ಅನುಭವವಿರುವ ಮಹೇಶ್‌, ಮೊದಲ ಬಾರಿ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ತಮ್ಮ ಚೊಚ್ಚಲ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಮಹೇಶ್‌ ಸಿಂಧುವಳ್ಳಿ, “ಕೆಲ ವರ್ಷಗಳ ಹಿಂದೆ ನಡೆದ, ನಾನು ಕಣ್ಣಾರೆ ಕಂಡ ನೈಜ ಘಟನೆಯೊಂದನ್ನ ಇಟ್ಟುಕೊಂಡು ಅದಕ್ಕೆ ಸೂಕ್ತವೆನಿಸುವ ಹಾಗೆ ಚಿತ್ರಕಥೆ ಬರೆದು ಈ ಚಿತ್ರವನ್ನು ತೆರೆಗೆ ತರುತ್ತಿದ್ದೇವೆ.

ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಕಷ್ಟಪಟ್ಟು ದುಡಿದು ಶುಲ್ಕವನ್ನು ಪಾವತಿಸುತ್ತಾರೆ. ಇದನ್ನು ನಾವುಗಳು ಅರ್ಥ ಮಾಡಿಕೊಳ್ಳಬೇಕೆಂಬ ಸಂದೇಶವನ್ನು ಈ ಚಿತ್ರದಲ್ಲಿ ಹಾಸ್ಯದ ಮೂಲಕ ಹೇಳಲಾಗಿದೆ’ ಎಂದು ಚಿತ್ರದ ಬಗ್ಗೆ ವಿವರಣೆ ಕೊಡುತ್ತಾರೆ. “10ನೇ ತರಗತಿ’ ಚಿತ್ರವನ್ನು ಮೈಸೂರು, ಹೆಚ್‌.ಡಿ ಕೋಟೆ, ಚಾಮರಾಜನಗರದ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ. ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ರುದ್ರಿರಿಕ್‌ ಹಾಡುಗಳಿಗೆ ಸಾಹಿತ್ಯ ಮತ್ತು ಸಂಗೀತ ನೀಡಿದ್ದಾರೆ.

ತೇಜಸ್‌, ಅಂಜಲಿ, ಶಿವು ಚಾವಡಿ, ರಾಜಶೇಖರ್‌, ಪುಟ್ಟರಾಜು, ಜಗದೀಶ್‌, ಭವ್ಯ ಮುಂತಾದ ನವ ಕಲಾವಿದರು “10ನೇ ತರಗತಿ’ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಚಿತ್ರಕ್ಕೆ ಸೆಂದಿಲ್‌ ಕುಮಾರ್‌, ಎಸ್‌. ನಿರೀಕ್ಷಿತ್‌ ಛಾಯಾಗ್ರಹಣ, ರಂಜೀತ್‌ ಸೇತು ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ಹೆಚ್‌.ಡಿ ಕೋಟೆಯ ಬೆಟ್ಟದ ಬೀಡು ವಾಸಿ ವೃತ್ತಿಯಲ್ಲಿ ರೈತರಾಗಿರುವ ಬಿ.ಕೆ ಮಂಜುನಾಥ್‌ ಚಿತ್ರರಂಗದ ಮೇಲಿನ ಆಸಕ್ತಿಯಿಂದ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ.

ಇತ್ತೀಚೆಗೆ “10ನೇ ತರಗತಿ’ ಚಿತ್ರದ ಹಾಡುಗಳು ಹೊರಬಂದಿದ್ದು, ಸದ್ಯ ಚಿತ್ರದ ಪ್ರಮೋಶನ್‌ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ, ಇದೇ ಜು. 19ರಂದು “10ನೇ ತರಗತಿ’ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.