ಬಹದ್ದೂರ್‌ ಹುಡುಗನ ಹೊಸ ಚಿತ್ರ ಹಯಗ್ರೀವನಿಗೆ ಪೂಜೆ


Team Udayavani, Jun 25, 2017, 10:21 AM IST

Dhrva-sarja-New-film-Hayagr.jpg

“ಭರ್ಜರಿ’ ಹುಡುಗ ಧ್ರುವ ಸರ್ಜಾ “ಹಯಗ್ರೀವ’  ಎಂಬ ಸಿನಿಮಾ ಒಪ್ಪಿಕೊಂಡಿರೋದು ನಿಮಗೆ ಗೊತ್ತೇ ಇದೆ. “ಅದ್ಧೂರಿ’, “ಬಹದ್ದೂರ್‌’ ಯಶಸ್ಸಿನ ಬಳಿಕ “ಭರ್ಜರಿ’ ಸಿನಿಮಾದಲ್ಲಿ ತೊಡಗಿದ್ದ ಧ್ರುವ ಸರ್ಜಾ, ಆ ಸಿನಿಮಾ ಬಿಡುಗಡೆ ಮುನ್ನವೇ ಹೊಸ ಸಿನಿಮಾಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದರು. ನಂದಕಿಶೋರ್‌ ನಿರ್ದೇಶನದ ಈ ಚಿತ್ರಕ್ಕೆ ಮುಹೂರ್ತ ನಡೆದಿದೆ. ಚಿರಂಜೀವಿ ಸರ್ಜಾ ಕ್ಲಾಪ್‌ ಮಾಡಿದ್ದಾರೆ.

“ಹಯಗ್ರೀವ’ ಅನ್ನುವುದು ವಿಷ್ಣುವಿನ ಮತ್ತೂಂದು ಅವತಾರ. ಅಶ್ವಮೇಧ ಯಾಗ ಮಾಡುವ ಸಂದರ್ಭದಲ್ಲಿ ಕುದುರೆ ಬಿಡುವ ಹೆಸರೇ ಹಯಗ್ರೀವ. ಅದನ್ನು ಕಟ್ಟಿದರೆ ಯುದ್ಧ ಮಾಡಬೇಕು, ಇಲ್ಲವಾದರೆ ಶರಣಾಗಬೇಕು. ಇಂತಹ ಸನ್ನಿವೇಶ “ಬಬ್ರುವಾಹನ’ ಸಿನಿಮಾದಲ್ಲೂ ಇತ್ತು. ಈಗ ಅಂತಹ ವಿಶೇಷ ದೃಶ್ಯಗಳು ಈ “ಹಯಗ್ರೀವ’ ಸಿನಿಮಾದಲ್ಲೂ ಇವೆ.

ಸುಮಾರು 800 ವರ್ಷಗಳ ಹಿಂದಿನ ಕಥೆಯೇ ಚಿತ್ರಕ್ಕೆ ಸ್ಫೂರ್ತಿ. ಅದನ್ನು ಇಟ್ಟುಕೊಂಡೇ ಚಿತ್ರಕ್ಕೆ ಕಥೆ ರೆಡಿ ಮಾಡಿರುವ ನಿರ್ದೇಶಕರು, ಈಗಿನ ಯೂತ್ಸ್ಗೆ ಏನೆಲ್ಲಾ ಬೇಕೋ ಆ ಎಲ್ಲಾ ಅಂಶಗಳನ್ನೂ ಇಲ್ಲಿಟ್ಟು ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಇದು ಚೈನಾ ಮತ್ತು ರಾಜ್ಯದ ಅನೇಕ ಸುಂದರ ತಾಣಗಳಲ್ಲಿ ಚಿತ್ರೀಕರಣಗೊಳ್ಳಲಿದೆ.

ಇನ್ನು, ಧ್ರುವಸರ್ಜಾ ಅವರಿಗೆ ಇಲ್ಲಿ ಮೂರು ಶೇಡ್‌ಗಳಿವೆ. ಆ ಪಾತ್ರಕ್ಕಾಗಿಯೇ ಅವರು ವಿಶೇಷ ತಯಾರಿಯನ್ನೂ ಮಾಡಿಕೊಳ್ಳುತ್ತಿದ್ದಾರಂತೆ. ಧ್ರುವಸರ್ಜಾ ಹಿಟ್‌ ಸಿನಿಮಾ ಕೊಟ್ಟಿರುವುದರಿಂದ ಅವರ ಮುಂದಿನ ಸಿನಿಮಾಗಳಿಗೂ ಆ ಕುತೂಹಲ ಇದ್ದೇ ಇರುತ್ತೆ. “ಭರ್ಜರಿ’ ತಡವಾಗಿದ್ದರೂ, ಅದೊಂದು ಹೊಸತನದಿಂದ ಕೂಡಿರುವ ಸಿನಿಮಾ ಎನ್ನುವ ಧ್ರುವಸರ್ಜಾ, ಇಷ್ಟರಲ್ಲೇ ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ.

ಇನ್ನು ಮುಂದಿನ ದಿನಗಳಲ್ಲಿ, ನನ್ನ ಸಿನಿಮಾಗಳು ಯಾವುದೇ ಕಾರಣಕ್ಕೂ ತಡವಾಗಿ ಬರುವುದಿಲ್ಲ ಎಂದು ಅಭಿಮಾನಿಗಳಿಗೆ ಸ್ಪಷ್ಟಪಡಿಸುವ ಅವರು, “ಹಯಗ್ರೀವ’ ಸಿನಿಮಾ ಮೇಲೆ ಸಿಕ್ಕಾಪಟ್ಟೆ ಭರವಸೆ ಇಟ್ಟುಕೊಂಡಿದ್ದಾರೆ. ಅದಕ್ಕೆ ಕಾರಣ, ನಂದಕಿಶೋರ್‌ ನಿರ್ದೇಶನ, ಕಥೆ ಮತ್ತು ಚಿತ್ರತಂಡ ಎಂಬುದು ಅವರ ಮಾತು. 

ಅದೇನೆ ಇರಲಿ, “ಹಯಗ್ರೀವ’ ಸಿನಿಮಾಗೆ ನಂದಕಿಶೋರ್‌ ಟೀಮ್‌ ಸಜ್ಜಾಗಿದ್ದು, ಇಷ್ಟರಲ್ಲೇ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಸದ್ಯಕ್ಕೆ ಚಿತ್ರದ ಹೀರೋ ಧ್ರುವಸರ್ಜಾ. ಆದರೆ, ಅವರಿಗೆ ನಾಯಕಿ ಯಾರು ಎಂಬುದಿನ್ನೂ ಆಯ್ಕೆಯಾಗಿಲ್ಲ. ಚಿತ್ರದಲ್ಲಿ ರವಿಚಂದ್ರನ್‌, ರಮ್ಯಾಕೃಷ್ಣ, ಪ್ರಕಾಶ್‌ ರೈ, ಸಾಧುಕೋಕಿಲ. ರವಿಶಂಕರ್‌, ಸೋನು ಸೂದ್‌, ತಬಲನಾಣಿ ಮತ್ತು ಚಿಕ್ಕಣ್ಣ ಸೇರಿದಂತೆ ದೊಡ್ಡ ತಾರಾಬಳಗವೇ ಇರಲಿದೆ.

ಚಿತ್ರಕ್ಕೆ ಅರ್ಜುನ್‌ ಜನ್ಯಾ ಸಂಗೀತ ನಿರ್ದೇಶಕರು. ಅವರಿಲ್ಲಿ ಐದು ಹಾಡುಗಳಿಗೆ ಸಂಗೀತ ನೀಡಲಿದ್ದಾರಂತೆ. ಅಂದಹಾಗೆ, ಇತ್ತೀಚೆಗೆ ಚಿತ್ರಕ್ಕೆ ಪೂಜೆ ನಡೆದಿದೆ. “ಅಧ್ಯಕ್ಷ’ ನಿರ್ಮಿಸಿದ್ದ ಟಿ.ಕೆ.ಗಂಗಾಧರ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅಂದಹಾಗೆ, ನಟ ಹಾಗೂ ಧ್ರುವಸರ್ಜಾ ಸಹೋದರ ಚಿಂರಜೀವಿ ಸರ್ಜಾ ಅವರು ಚಿತ್ರಕ್ಕೆ ಕ್ಲಾಪ್‌ ಮಾಡಿ, ಶುಭಹಾರೈಸಿದ್ದಾರೆ.

ಟಾಪ್ ನ್ಯೂಸ್

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.