ಪ್ರತಿಷ್ಠಿತ ಕಾಲೇಜೊಂದರ ನೈಜ ಘಟನೆ ಎಂಎಂಸಿಎಚ್‌


Team Udayavani, Jan 22, 2018, 10:41 AM IST

MMCH.jpg

ನಿರ್ದೇಶಕ ಮುಸ್ಸಂಜೆ ಮಹೇಶ್‌ ಈ ಬಾರಿ ನಟಿಯರ ಹಿಂದೆ ನಿಂತಿದ್ದಾರೆ! ಅಂದರೆ ನಾಯಕಿಯರನ್ನೇ ಸೇರಿಸಿಕೊಂಡು ಚಿತ್ರವೊಂದನ್ನು ನಿರ್ದೇಶಿಸಿದ್ದಾರೆ. ಸ್ಟಾರ್‌ ನಟರಿಂದ ಹಿಡಿದು ಯುವ ನಟರುಗಳ ಚಿತ್ರಗಳನ್ನು ಮಾಡಿಕೊಂಡು ಬಂದಿದ್ದ ಮುಸ್ಸಂಜೆ ಮಹೇಶ್‌, ಸದ್ದು ಮಾಡದೆಯೇ ನಾಲ್ವರು ನಾಯಕಿಯರಿರುವ ಸಿನಿಮಾ ಮಾಡಿ ಮುಗಿಸಿದ್ದಾರೆ. ಇದಕ್ಕೆ ಕಾರಣ, ನೈಜ ಘಟನೆ. ಈ ಹಿಂದೆಯೂ ಅವರು ನೈಜ ಘಟನೆಯ “ಜಿಂದಾ’ ಚಿತ್ರ ಮಾಡಿದ್ದರು.

ಈಗ ನಾಲ್ವರು ನಾಯಕಿಯರ ಮೂಲಕ ಯಾರಿಗೂ ತಿಳಿಯದ ಸತ್ಯ ಘಟನೆಯೊಂದನ್ನು ಬಿಚ್ಚಿಡಲು ಹೊರಟಿದ್ದಾರೆ. ಹೌದು, ಮುಸ್ಸಂಜೆ ಮಹೇಶ್‌ “ಎಂಎಂಸಿಎಚ್‌’ ಮೂಲಕ ಯಾರಿಗೂ ಗೊತ್ತಿಲ್ಲದ ಗುಟ್ಟನ್ನು ಹೇಳಲು ಅಣಿಯಾಗಿದ್ದಾರೆ. ಹಾಗಾದರೆ, “ಎಂಎಂಸಿಎಚ್‌’ ಅಂದರೇನು? ಅದರ ಅರ್ಥ ಸಿನಿಮಾದಲ್ಲೇ ತಿಳಿದುಕೊಳ್ಳಬೇಕು ಎನ್ನುತ್ತಾರೆ ನಿರ್ದೇಶಕ ಮುಸ್ಸಂಜೆ ಮಹೇಶ್‌.

ಈ ಚಿತ್ರದ ವಿಶೇಷವೆಂದರೆ, ನಾಲ್ವರು ಅಂದಿನ ನಾಯಕಿಯರ ಮಕ್ಕಳು ಇಲ್ಲಿ ನಾಯಕಿಯರಾಗಿರುವುದು. ಪ್ರಮೀಳಾ ಜೋಷಾಯ್‌ ಪುತ್ರಿ ಮೇಘನಾರಾಜ್‌, ವಿನಯಾ ಪ್ರಸಾದ್‌ ಪುತ್ರಿ ಪ್ರಥಮ, ಸುಧಾ ಬೆಳವಾಡಿ ಮಗಳು ಸಂಯುಕ್ತಾ ಹೊರನಾಡು ಹಾಗು ಸುಮಿತ್ರಮ್ಮ ಅವರ ಮಗಳು ದೀಪ್ತಿ (ನಕ್ಷತ್ರ) ಚಿತ್ರದ ನಾಯಕಿಯರು. ಇವರೊಂದಿಗೆ ರಾಗಿಣಿ ಕೂಡ ಕಾಣಿಸಿಕೊಂಡಿದ್ದಾರೆ. ನಾಲ್ವರು ನಾಯಕಿಯರ ಜತೆಗೆ ಪ್ಲಸ್‌ ಎಂಬಂತೆ ರಾಗಿಣಿಯೂ ನಟಿಸಿದ್ದಾರೆ.

ನಾಲ್ವರ ಜತೆಗೆ ಪ್ಲಸ್‌ ಆಗಿರುವ ರಾಗಿಣಿ ಪಾತ್ರವೂ ಇಲ್ಲಿ ಪ್ಲಸ್‌ ಎನ್ನುತ್ತಾರೆ ನಿರ್ದೇಶಕರು. ಶೀರ್ಷಿಕೆ ಬಗ್ಗೆ ಸಾಕಷ್ಟು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಸಿನಿಮಾ ನೋಡಿದ ಮೇಲೆ, ತುಂಬಾ ಸರಳ ಎನಿಸುವ ಅರ್ಥವದು. ಆದರೆ, ಸರಳ ಶೀರ್ಷಿಕೆಯಾದರೂ, ಮಜ ಎನಿಸುವ ಸಿನಿಮಾವಿದು. ಇಲ್ಲಿ ನಾಲ್ವರು ನಾಯಕಿಯರಷ್ಟೇ ಮುಖ್ಯ ಅಲ್ಲ, “ಅಸ್ತಿತ್ವ’ ಮೂಲಕ ಹೀರೋ ಆದ ಯುವರಾಜ್‌ ಮತ್ತು “ಸರ್ವಸ್ವ’ ಚಿತ್ರದ ಮೂಲಕ ನಾಯಕರಾದ ರಘುಭಟ್‌ ಕೂಡ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.

ಅದೇನೆ ಇದ್ದರೂ, ಮುಸ್ಸಂಜೆ ಮಹೇಶ್‌ ಇಲ್ಲಿ ನಾಲ್ವರು ನಾಯಕಿಯರ ಸಿನಿಮಾ ಮಾಡಿದ್ದು ರಿಸ್ಕ್ ಅಲ್ಲವೇ? ಖಂಡಿತ ರಿಸ್ಕ್ ಹೌದು, ಇದು ಮೊದಲ ಪ್ರಯತ್ನವೂ ಹೌದು. ಆದರೆ, ಕಥೆ ಇಲ್ಲಿ ನೈಜವಾಗಿರುವುದರಿಂದ ಚಿತ್ರಕ್ಕೆ ಪ್ಲಸ್‌ ಆಗುತ್ತೆ ಎಂಬ ನಂಬಿಕೆ ಇದೆ. ಇದು ಮೈಸೂರಿನ ಪ್ರತಿಷ್ಠಿತ ಕಾಲೇಜ್‌ ಒಂದರಲ್ಲಿ ನಡೆದ ನೈಜ ಘಟನೆ ಇಟ್ಟುಕೊಂಡು ಮಾಡಿರುವ ಚಿತ್ರ. ನಾನು ಕಾಲೇಜು ಓದುವ ಸಂದರ್ಭದಲ್ಲಿ ನಡೆದಂತಹ ಘಟನೆ ಎನ್ನಬಹುದು. ಆಗ ಅಲ್ಲಿ ನಡೆದ ಆ ಘಟನೆಯ ವಿಷಯ ಎಲ್ಲೂ ಹೊರಬರಲಿಲ್ಲ.

ಆಗಿನ ಹಿರಿಯ ಪೊಲೀಸ್‌ ಅಧಿಕಾರಿಗಳು ಸುದ್ದಿ ಹೊರಬರದಂತೆ ನೋಡಿಕೊಂಡಿದ್ದರು. ಆಗ ನಡೆದ ಘಟನೆ ಇಟ್ಟುಕೊಂಡು “ಎಂಎಂಸಿಎಚ್‌’ ಚಿತ್ರ ಮಾಡಿದ್ದೇನೆ. ಈಗಾಗಲೇ ಡಬ್ಬಿಂಗ್‌ ಮುಗಿದು, ಹಿನ್ನೆಲೆ ಸಂಗೀತ ನಡೆಯುತ್ತಿದೆ. ಶ್ರೀಧರ್‌ ವಿ. ಸಂಭ್ರಮ್‌ ಸಂಗೀತ ನೀಡಿದರೆ, ನಾಗೇಶ್‌ ಆಚಾರ್ಯ ಅವರ ಛಾಯಾಗ್ರಹಣವಿದೆ. ರವಿ ಸಂಕಲನ ಮಾಡುತ್ತಿದ್ದಾರೆ. ಚಿತ್ರ ಹೊರಬಂದಾಗಲಷ್ಟೇ, ಆ ನೈಜ ಘಟನೆ ಏನೆಂಬುದು ಎಲ್ಲರಿಗೂ ಗೊತ್ತಾಗುತ್ತೆ’ ಎಂದು ಹೇಳಿ ಸುಮ್ಮನಾಗುತ್ತಾರೆ ಮುಸ್ಸಂಜೆ ಮಹೇಶ್‌.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.