- Sunday 15 Dec 2019
ಛಾಯ ಚಿತ್ರದ ಹಾಡು ಬಂತು
ಹಾರರ್ನಲ್ಲೊಂದು ಸಂದೇಶ
Team Udayavani, Nov 17, 2019, 6:00 AM IST
ಕಳೆದ 20 ವರ್ಷಗಳಿಂದ ಚಿತ್ರರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಸುಮಾರು ನೂರಕ್ಕೂ ಹೆಚ್ಚು ಚಿತ್ರಗಳಿಗೆ ಕೆಲಸ ಮಾಡಿರುವ ಜಗ್ಗು ಈಗ ನಿರ್ದೇಶಕರಾಗುತ್ತಿದ್ದಾರೆ. ಜಗ್ಗು ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಛಾಯ’ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.. “ಛಾಯ’ ಹಾರರ್ ಚಿತ್ರವಾಗಿದ್ದು, “ನಾ ನಿನ್ನ ಬಿಡಲಾರೆ’ ಎಂಬ ಅಡಿಬರಹವಿದೆ.
ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಜಗ್ಗು, “ನಾಲ್ಕು ಹುಡುಗರ ಮಧ್ಯೆ ನಡೆಯುವ ಕಥೆ ಈ ಚಿತ್ರದಲ್ಲಿದೆ. ಹೀರೋ ಮದುವೆಯಾಗಿ ಗೆಳಯರ ಮನೆಗೆ ಬಂದಾಗ ವಿಚಿತ್ರ ಘಟನೆ ಸಂಭವಿಸುತ್ತದೆ. ಆ ಮನೆಯಲ್ಲಿ ಏನು ನಡೆಯುತ್ತದೆ? ಅದರ ಹಿಂದಿನ ಕಾರಣಗಳೇನು? ಅನ್ನೋದೆ ಚಿತ್ರದ ಸಸ್ಪೆನ್ಸ್ ಅಂಶ. ಇಡೀ ಚಿತ್ರ ಹಾರರ್ ಎಳೆಯಲ್ಲಿ ಸಾಗುತ್ತದೆ. ಗೆಳತನ ಹಾಗೂ ಸಂಬಂಧ ಹೇಗಿರುತ್ತದೆ.
ಅತ್ಯಾಚಾರಿಗಳು ಎಂತಹ ಶಿಕ್ಷೆ ಅನುಭವಿಸಬೇಕು ಎಂಬ ಸಂದೇಶ ಕೂಡ ಚಿತ್ರದಲ್ಲಿದೆ’ ಎನ್ನುತ್ತಾರೆ. ರಿಯಲ್ ಎಸ್ಟೆಟ್ ಉದ್ಯಮಿ ಮಧುಗೌಡ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕರು, “ನಾಲ್ಕು ಜನ ಹುಡುಗರು ಒಂದು ಮನೆಗೆ ಬಂದಾಗ ಅಲ್ಲಿ ನಡೆಯುವ ವಿಚಿತ್ರ ಘಟನೆಗಳೇ ಈ ಚಿತ್ರದ ಕಥಾವಸ್ತು. ಸಮಾಜಕ್ಕೆ ಉತ್ತಮ ಕಥೆ ಹೊಂದಿರುವ ಚಿತ್ರ, ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ಕೊಡಬೇಕೆಂಬ ಧ್ಯೇಯದಿಂದ ಈ ಚಿತ್ರ ನಿರ್ಮಿಸಲಾಗಿದೆ.
ಚಿತ್ರ ಚೆನ್ನಾಗಿ ಮೂಡಿಬಂದಿದ್ದು ಆದಷ್ಟು ಬೇಗ ಪ್ರೇಕ್ಷಕರ ಮುಂದೆ ತರುತ್ತೇವೆ’ ಎಂದಿದ್ದಾರೆ. “ಛಾಯ’ ಚಿತ್ರದಲ್ಲಿ ನವನಟ ಆನಂದ್ ನಾಯಕನಾಗಿ, ತೇಜು ರಾಜ್ ನಾಯಕಿಯಾಗಿ, ಡಾನ್ ಪಾತ್ರದಲ್ಲಿ ರಾಜ್ ಉದಯ್, ಟೆಕ್ಕಿಯಾಗಿ ಅನನ್ಯಾ, ಹೇಮಂತ್, ನಂದನ್,ರಾಜಶೇಖರ್, ದರ್ಶನ್, ಲಕ್ಷ್ಮೀ, ಗೋವಿಂದಪ್ಪ, ರಾಜ್ ಪ್ರಭು, ನಯನ ಕೃಷ್ಣ, ಕಿಲ್ಲರ್ ವೆಂಕಟೇಶ್, ರೋಹಿಣಿ ಇತರೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಚಿತ್ರದ ಹಾಡುಗಳಿಗೆ ಮಂಜು ಕವಿ ಸಾಹಿತ್ಯ ಮತ್ತು ಸಂಗೀತವಿದ್ದು, ಅನುರಾಧ ಭಟ್, ಸಂತೋಷ್ ವೆಂಕಿ, ನವೀನ್ ಸಜ್ಜು, ಶ್ವೇತಾ ಪ್ರಭು ಮೊದಲಾದವರು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಚಿತ್ರಕ್ಕೆ ಅರುಣ್ ಬೀರೂರು ಛಾಯಾಗ್ರಹಣ, ದುರ್ಗಾ ಪಿ.ಎಸ್ ಸಂಕಲನ ಕಾರ್ಯವಿದೆ. ಬೆಂಗಳೂರು, ಪಾಂಡವಪುರ, ಮೈಸೂರು, ಸಕಲೇಶಪುರ ಮೊದಲಾದ ಕಡೆಗಳಲ್ಲಿ “ಛಾಯ’ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಚಿತ್ರತಂಡದ ಯೋಜನೆಯಂತೆ ಮುಂದಿನ ವರ್ಷದ ಆರಂಭದಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.
ಈ ವಿಭಾಗದಿಂದ ಇನ್ನಷ್ಟು
-
ಕಳೆದ ವರ್ಷ ಡಿಸೆಂಬರ್ 21 ರಂದು ಯಶ್ ಅಭಿನಯದ "ಕೆಜಿಎಫ್' ಬಿಡುಗಡೆಯಾಗಿತ್ತು. ಈ ಡಿಸೆಂಬರ್ 21 ರಂದು "ಕೆಜಿಎಫ್-2' ಚಿತ್ರದ ಫಸ್ಟ್ಲುಕ್ ಬಿಡುಗಡೆಯಾಗಲಿದೆ. ಹೌದು,...
-
ರಕ್ಷಿತ್ ಶೆಟ್ಟಿ ಅಭಿನಯದ ಈ ವರ್ಷದ ಬಹುನಿರೀಕ್ಷಿತ ಚಿತ್ರ "ಅವನೇ ಶ್ರೀಮನ್ನಾರಾಯಣ' ಚಿತ್ರ ತೆರೆಗೆ ಬರೋದಕ್ಕೆ ದಿನ ಗಣನೆ ಶುರುವಾಗಿದೆ. ಇತ್ತೀಚೆಗಷ್ಟೇ ಚಿತ್ರದ...
-
ಸುದೀಪ್ ಅಭಿನಯದ "ಕೋಟಿಗೊಬ್ಬ 3' ಚಿತ್ರ ಇನ್ನೇನು ಮುಗಿಯೋ ಹಂತ ತಲುಪಿದೆ. ಇತ್ತೀಚೆಗೆ ಮುಂಬೈನ ಪಬ್ವೊಂದರಲ್ಲಿ ಚಿತ್ರದ ಟೈಟಲ್ ಟ್ರಾಕ್ ಸಾಂಗ್ಗೆ ಚಿತ್ರೀಕರಣ...
-
ಕಳೆದ ಬಾರಿ ಕನ್ನಡ "ಬಿಗ್ಬಾಸ್' ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಕಿರುತೆರೆ ಪ್ರೇಕ್ಷಕರಿಗೆ ಪರಿಚಯವಾಗಿದ್ದ ಪ್ರಗತಿಪರ ಕೃಷಿಕ ಶಶಿಕುಮಾರ್, ಈಗ ಹೀರೋ ಆಗಿ...
-
ಕನ್ನಡ ಚಿತ್ರರಂಗ ಕಂಡ ಸುಂದರ ನಟಿಯರಲ್ಲಿ ಜಯಶ್ರೀ ಕೂಡಾ ಒಬ್ಬರು. ರೂಪದರ್ಶಿಯಾಗಿ, ನಟಿಯಾಗಿ ಜನಪ್ರಿಯತೆ ಕಂಡಿದ್ದ ಈ ನಟಿ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ...
ಹೊಸ ಸೇರ್ಪಡೆ
-
ಹೊಸದಿಲ್ಲಿ: ಅತ್ಯಾಚಾರ ಅಪರಾಧಿಗಳಿಗೆ ಆರು ತಿಂಗಳ ಒಳಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ...
-
ನವದೆಹಲಿ: ರಾಹುಲ್ ಗಾಂಧಿ ತನ್ನ ಹೆಸರಿನ ಜೊತೆಗೆ ಸಾವರ್ಕರ್ ಹೆಸರು ಸೇರಿಸಿಕೊಳ್ಳಬೇಕಾದರೆ “ವೀರ್ ಸಾವರ್ಕರ್ ಅವರಂತೆಯೇ ಧೈರ್ಯಶಾಲಿಯಾಗಿರಬೇಕೆಂದು” ಬಿಜೆಪಿ...
-
ಬೆಂಗಳೂರು: ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳ ಎರಡೂ ಬದಿ ಹೊಟೇಲ್ ಸೇರಿದಂತೆ ಪ್ರವಾಸಿಗರಿಗೆ ಪೂರಕವಾದ ಸೌಲಭ್ಯ ನಿರ್ಮಿಸಲು ಮುಂದೆ ಬರುವವರಿಗೆ...
-
ಕಳೆದ ವರ್ಷ ಡಿಸೆಂಬರ್ 21 ರಂದು ಯಶ್ ಅಭಿನಯದ "ಕೆಜಿಎಫ್' ಬಿಡುಗಡೆಯಾಗಿತ್ತು. ಈ ಡಿಸೆಂಬರ್ 21 ರಂದು "ಕೆಜಿಎಫ್-2' ಚಿತ್ರದ ಫಸ್ಟ್ಲುಕ್ ಬಿಡುಗಡೆಯಾಗಲಿದೆ. ಹೌದು,...
-
ರಕ್ಷಿತ್ ಶೆಟ್ಟಿ ಅಭಿನಯದ ಈ ವರ್ಷದ ಬಹುನಿರೀಕ್ಷಿತ ಚಿತ್ರ "ಅವನೇ ಶ್ರೀಮನ್ನಾರಾಯಣ' ಚಿತ್ರ ತೆರೆಗೆ ಬರೋದಕ್ಕೆ ದಿನ ಗಣನೆ ಶುರುವಾಗಿದೆ. ಇತ್ತೀಚೆಗಷ್ಟೇ ಚಿತ್ರದ...