ಆಗ ಗಯ್ಯಾಳಿ, ಈಗ ಎಸಿಪಿ

ಅಮೃತ್‌ ಅಪಾರ್ಟ್‌ಮೆಂಟ್ಸ್‌ನಲ್ಲೊಂದು ಸ್ಪೆಷಲ್‌ ರೋಲ್‌

Team Udayavani, Sep 22, 2019, 3:01 AM IST

Kiragurina

ನಟಿ ಮಾನಸ ಜೋಶಿ ಮತ್ತೆ ಸುದ್ದಿಯಲ್ಲಿದ್ದಾರೆ. “ಕಿರಗೂರಿನ ಗಯ್ಯಾಳಿಗಳು’ ಹಾಗೂ “ಯಶೋಗಾಥೆ’ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದ ಮಾನಸ ಜೋಶಿ, ಒಂದು ಗ್ಯಾಪ್‌ ಬಳಿಕ ಇದೀಗ ಹೊಸ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೌದು, ಮಾನಸ ಜೋಶಿ, ಈಗ “ಅಮೃತ್‌ ಆಪಾರ್ಟ್‌ಮೆಂಟ್ಸ್‌’ ಎಂಬ ಹೊಸ ಚಿತ್ರದಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ, ಆ ಚಿತ್ರದಲ್ಲಿ ಅವರು ಎಸಿಪಿ ರತ್ನಪ್ರಭ ಪಾತ್ರ ನಿರ್ವಹಿಸುತ್ತಿದ್ದಾರೆ.

ಅಂದಹಾಗೆ, ಇದೇ ಮೊದಲ ಬಾರಿಗೆ ಅವರು ಪೊಲೀಸ್‌ ಅಧಿಕಾರಿ ಪಾತ್ರ ನಿರ್ವಹಿಸುತ್ತಿದ್ದಾರೆ. ಒಳ್ಳೆಯ ಹೈಟು, ಪರ್ಸನಾಲಿಟಿ ಇರುವ ಕಾರಣಕ್ಕೆ ಎಸಿಪಿ ರತ್ನಪ್ರಭ ಪಾತ್ರ ಅವರ ಪಾಲಾಗಿದೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಸದ್ಯಕ್ಕೆ ಬಿಡುಗಡೆಯ ತಯಾರಿಯಲ್ಲಿದೆ ಚಿತ್ರತಂಡ. ಈ ಚಿತ್ರವನ್ನು ಗುರುರಾಜ್‌ ಕುಲಕರ್ಣಿ ನಿರ್ದೇಶನ ಮಾಡುತ್ತಿದ್ದು, ನಿರ್ಮಾಣದ ಜವಾಬ್ದಾರಿಯನ್ನೂ ಅವರೇ ವಹಿಸಿಕೊಂಡಿದ್ದಾರೆ.

ಈ ಚಿತ್ರದ ಕಥೆ ಮತ್ತು ಪಾತ್ರ ಕೇಳಿದ ಮಾನಸ ಜೋಶಿ ಅವರಿಗೆ, ಇದರಲ್ಲೇನೋ ವಿಶೇಷವಿದೆ ಅಂದುಕೊಂಡು ನಟಿಸಲು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. “ಅಮೃತ್‌ ಅಪಾರ್ಟ್‌ಮೆಂಟ್ಸ್‌’ ಕುರಿತು ಹೇಳುವ ಮಾನಸ ಜೋಶಿ, “ಚಿತ್ರದ ಕಥೆ ಮತ್ತು ಪಾತ್ರ ಗಟ್ಟಿಯಾಗಿದೆ. ನಾನಿಲ್ಲಿ ಎಸಿಪಿ ರತ್ನಪ್ರಭ ಅವರ ಪಾತ್ರ ಮಾಡಿದ್ದಾರೆ. ಅದೊಂದು ರೀತಿಯ ಪಕ್ಕಾ ತನಿಖಾಧಿಕಾರಿಯಾಗಿ ಅದರಲ್ಲೂ ರಗಡ್‌ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ.

ನಾನು ಮೊದಲಿನಿಂದಲೂ ಸಿನಿಮಾ ಆಯ್ಕೆ ವಿಚಾರದಲ್ಲಿ ತುಂಬಾ ಎಚ್ಚರ ವಹಿಸುತ್ತೇನೆ. ಕಥೆ ಹೇಗಿದೆ, ಪಾತ್ರವನ್ನು ಹೇಗೆ ಕಟ್ಟಿದ್ದಾರೆ ಎಂಬುದನ್ನು ಗಮನಿಸಿ, ಅದು ನನಗೆ ಸೂಕ್ತವಾಗಿದೆಯೋ ಇಲ್ಲವೋ ಎಂಬುದನ್ನು ಅರಿತು, ಆಯ್ಕೆ ಮಾಡಿಕೊಳ್ಳುತ್ತೇನೆ. ನನಗೆ ಈವರೆಗೆ ಸಿಕ್ಕಿರುವ ಪಾತ್ರಗಳೂ ಹಾಗೇ ಇವೆ. ಇದೇ ಮೊದಲ ಸಲ ನಾನು ಎಸಿಪಿ ಪಾತ್ರ ನಿರ್ವಹಿಸಿದ್ದೇನೆ. ಅದರಲ್ಲೂ ಯೂನಿಫಾರಂ ಧರಿಸಿ, ನಟನೆ ಮಾಡುವ ಥ್ರಿಲ್‌ ಮಜ ಕೊಡುತ್ತದೆ. ನಾನು ಆ ಪಾತ್ರವನ್ನು ತುಂಬಾ ಎಂಜಾಯ್‌ ಮಾಡಿದ್ದೇನೆ. ಇಂಥದ್ದೊಂದು ಅವಕಾಶ ಕೊಟ್ಟ ತಂಡಕ್ಕೆ ಥ್ಯಾಂಕ್ಸ್‌ ಹೇಳ್ತೀನಿ’ ಎಂಬುದು ಮಾನಸ ಜೋಶಿ ಅವರ ಮಾತು.

ಅಂದಹಾಗೆ, ಇದೊಂದು ಗಂಡ-ಹೆಂಡತಿ ನಡುವಿನ ಕಥೆ. ಒಂದು ಮಿಸ್ಟ್ರಿ ಸ್ಟೋರಿ ಇಲ್ಲಿದೆ. ಒಂದು ಅಪಾರ್ಟ್‌ಮೆಂಟ್‌ನಲ್ಲಿ ನಡೆಯುವ ಘಟನೆ ಹೇಗೆಲ್ಲಾ ತಿರುವು ಪಡೆದುಕೊಳ್ಳುತ್ತೆ, ಅದರಿಂದ ಯಾರೆಲ್ಲಾ ಸಮಸ್ಯೆ ಎದುರಿಸುತ್ತಾರೆ. ಅಸಲಿಗೆ ಅಲ್ಲಿ ನಡೆಯುವ ಘಟನೆ ಎಂಥದ್ದು ಎಂಬುದಕ್ಕೆ ಸಿನಿಮಾ ಬರುವವರೆಗೆ ಕಾಯಬೇಕು. ಚಿತ್ರಕ್ಕೆ ಅರ್ಜುನ್‌ ಅಜಿತ್‌ ಛಾಯಾಗ್ರಹಣವಿದೆ. ಎಸ್‌.ಡಿ.ಅರವಿಂದ್‌ ಸಂಗೀತವಿದ್ದು, ಕೆ.ಕಲ್ಯಾಣ್‌, ವಿ.ಮನೋಹರ್‌, ಡಾ.ಬಿ.ಆರ್‌.ಪೋಲೀಸ್‌ ಪಾಟೀಲ್‌ ಗೀತೆ ರಚಿಸಿದ್ದಾರೆ.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.