ಆಗ ಗಯ್ಯಾಳಿ, ಈಗ ಎಸಿಪಿ

ಅಮೃತ್‌ ಅಪಾರ್ಟ್‌ಮೆಂಟ್ಸ್‌ನಲ್ಲೊಂದು ಸ್ಪೆಷಲ್‌ ರೋಲ್‌

Team Udayavani, Sep 22, 2019, 3:01 AM IST

Kiragurina

ನಟಿ ಮಾನಸ ಜೋಶಿ ಮತ್ತೆ ಸುದ್ದಿಯಲ್ಲಿದ್ದಾರೆ. “ಕಿರಗೂರಿನ ಗಯ್ಯಾಳಿಗಳು’ ಹಾಗೂ “ಯಶೋಗಾಥೆ’ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದ ಮಾನಸ ಜೋಶಿ, ಒಂದು ಗ್ಯಾಪ್‌ ಬಳಿಕ ಇದೀಗ ಹೊಸ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೌದು, ಮಾನಸ ಜೋಶಿ, ಈಗ “ಅಮೃತ್‌ ಆಪಾರ್ಟ್‌ಮೆಂಟ್ಸ್‌’ ಎಂಬ ಹೊಸ ಚಿತ್ರದಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ, ಆ ಚಿತ್ರದಲ್ಲಿ ಅವರು ಎಸಿಪಿ ರತ್ನಪ್ರಭ ಪಾತ್ರ ನಿರ್ವಹಿಸುತ್ತಿದ್ದಾರೆ.

ಅಂದಹಾಗೆ, ಇದೇ ಮೊದಲ ಬಾರಿಗೆ ಅವರು ಪೊಲೀಸ್‌ ಅಧಿಕಾರಿ ಪಾತ್ರ ನಿರ್ವಹಿಸುತ್ತಿದ್ದಾರೆ. ಒಳ್ಳೆಯ ಹೈಟು, ಪರ್ಸನಾಲಿಟಿ ಇರುವ ಕಾರಣಕ್ಕೆ ಎಸಿಪಿ ರತ್ನಪ್ರಭ ಪಾತ್ರ ಅವರ ಪಾಲಾಗಿದೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಸದ್ಯಕ್ಕೆ ಬಿಡುಗಡೆಯ ತಯಾರಿಯಲ್ಲಿದೆ ಚಿತ್ರತಂಡ. ಈ ಚಿತ್ರವನ್ನು ಗುರುರಾಜ್‌ ಕುಲಕರ್ಣಿ ನಿರ್ದೇಶನ ಮಾಡುತ್ತಿದ್ದು, ನಿರ್ಮಾಣದ ಜವಾಬ್ದಾರಿಯನ್ನೂ ಅವರೇ ವಹಿಸಿಕೊಂಡಿದ್ದಾರೆ.

ಈ ಚಿತ್ರದ ಕಥೆ ಮತ್ತು ಪಾತ್ರ ಕೇಳಿದ ಮಾನಸ ಜೋಶಿ ಅವರಿಗೆ, ಇದರಲ್ಲೇನೋ ವಿಶೇಷವಿದೆ ಅಂದುಕೊಂಡು ನಟಿಸಲು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. “ಅಮೃತ್‌ ಅಪಾರ್ಟ್‌ಮೆಂಟ್ಸ್‌’ ಕುರಿತು ಹೇಳುವ ಮಾನಸ ಜೋಶಿ, “ಚಿತ್ರದ ಕಥೆ ಮತ್ತು ಪಾತ್ರ ಗಟ್ಟಿಯಾಗಿದೆ. ನಾನಿಲ್ಲಿ ಎಸಿಪಿ ರತ್ನಪ್ರಭ ಅವರ ಪಾತ್ರ ಮಾಡಿದ್ದಾರೆ. ಅದೊಂದು ರೀತಿಯ ಪಕ್ಕಾ ತನಿಖಾಧಿಕಾರಿಯಾಗಿ ಅದರಲ್ಲೂ ರಗಡ್‌ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ.

ನಾನು ಮೊದಲಿನಿಂದಲೂ ಸಿನಿಮಾ ಆಯ್ಕೆ ವಿಚಾರದಲ್ಲಿ ತುಂಬಾ ಎಚ್ಚರ ವಹಿಸುತ್ತೇನೆ. ಕಥೆ ಹೇಗಿದೆ, ಪಾತ್ರವನ್ನು ಹೇಗೆ ಕಟ್ಟಿದ್ದಾರೆ ಎಂಬುದನ್ನು ಗಮನಿಸಿ, ಅದು ನನಗೆ ಸೂಕ್ತವಾಗಿದೆಯೋ ಇಲ್ಲವೋ ಎಂಬುದನ್ನು ಅರಿತು, ಆಯ್ಕೆ ಮಾಡಿಕೊಳ್ಳುತ್ತೇನೆ. ನನಗೆ ಈವರೆಗೆ ಸಿಕ್ಕಿರುವ ಪಾತ್ರಗಳೂ ಹಾಗೇ ಇವೆ. ಇದೇ ಮೊದಲ ಸಲ ನಾನು ಎಸಿಪಿ ಪಾತ್ರ ನಿರ್ವಹಿಸಿದ್ದೇನೆ. ಅದರಲ್ಲೂ ಯೂನಿಫಾರಂ ಧರಿಸಿ, ನಟನೆ ಮಾಡುವ ಥ್ರಿಲ್‌ ಮಜ ಕೊಡುತ್ತದೆ. ನಾನು ಆ ಪಾತ್ರವನ್ನು ತುಂಬಾ ಎಂಜಾಯ್‌ ಮಾಡಿದ್ದೇನೆ. ಇಂಥದ್ದೊಂದು ಅವಕಾಶ ಕೊಟ್ಟ ತಂಡಕ್ಕೆ ಥ್ಯಾಂಕ್ಸ್‌ ಹೇಳ್ತೀನಿ’ ಎಂಬುದು ಮಾನಸ ಜೋಶಿ ಅವರ ಮಾತು.

ಅಂದಹಾಗೆ, ಇದೊಂದು ಗಂಡ-ಹೆಂಡತಿ ನಡುವಿನ ಕಥೆ. ಒಂದು ಮಿಸ್ಟ್ರಿ ಸ್ಟೋರಿ ಇಲ್ಲಿದೆ. ಒಂದು ಅಪಾರ್ಟ್‌ಮೆಂಟ್‌ನಲ್ಲಿ ನಡೆಯುವ ಘಟನೆ ಹೇಗೆಲ್ಲಾ ತಿರುವು ಪಡೆದುಕೊಳ್ಳುತ್ತೆ, ಅದರಿಂದ ಯಾರೆಲ್ಲಾ ಸಮಸ್ಯೆ ಎದುರಿಸುತ್ತಾರೆ. ಅಸಲಿಗೆ ಅಲ್ಲಿ ನಡೆಯುವ ಘಟನೆ ಎಂಥದ್ದು ಎಂಬುದಕ್ಕೆ ಸಿನಿಮಾ ಬರುವವರೆಗೆ ಕಾಯಬೇಕು. ಚಿತ್ರಕ್ಕೆ ಅರ್ಜುನ್‌ ಅಜಿತ್‌ ಛಾಯಾಗ್ರಹಣವಿದೆ. ಎಸ್‌.ಡಿ.ಅರವಿಂದ್‌ ಸಂಗೀತವಿದ್ದು, ಕೆ.ಕಲ್ಯಾಣ್‌, ವಿ.ಮನೋಹರ್‌, ಡಾ.ಬಿ.ಆರ್‌.ಪೋಲೀಸ್‌ ಪಾಟೀಲ್‌ ಗೀತೆ ರಚಿಸಿದ್ದಾರೆ.

ಟಾಪ್ ನ್ಯೂಸ್

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.