ಹೋರಾಟದ ಪಯಣ ಈ ಆರೋಹಣ


Team Udayavani, Aug 28, 2018, 12:08 PM IST

arohana.jpg

ಮಾನವ ಸಂಬಂಧ ಮತ್ತು ಬದುಕಿನ ಮೌಲ್ಯ ಕುರಿತು ಅನೇಕ ಚಿತ್ರಗಳು ಬಂದಿವೆ. ಆ ಸಾಲಿಗೆ “ಆರೋಹಣ’ ಚಿತ್ರವೂ ಒಂದು. ಇಲ್ಲಿ ಬದುಕಿನ ಹೆಜ್ಜೆ ಗುರುತನ್ನು ದಾಖಲಿಸುವ ಪ್ರಯತ್ನವಿದೆ. ಮನುಷ್ಯ ದಿನ ನಿತ್ಯವೂ ಬದುಕಿನ ಜೊತೆ ಯುದ್ಧ ಮಾಡುತ್ತಲೇ ಇರುತ್ತಾನೆ. ಅಂತಹ ಜೀವನದಲ್ಲಿ ಎದುರಾಗುವ ಯುದ್ಧದಲ್ಲಿ ಹೇಗೆ ಗೆದ್ದು ಹೊರಗೆ ಬರುತ್ತಾನೆ ಅನ್ನೋದೇ “ಆರೋಹಣ’ದ ಕಥೆ.

ಇದು ಸಂಪೂರ್ಣ ಹೊಸಬರೇ ಸೇರಿ ಮಾಡಿರುವ ಚಿತ್ರ. ಎಲ್ಲರಿಗೂ ಇದು ಮೊದಲ ಅನುಭವ. ಈ ಚಿತ್ರದ ಮೂಲಕ ಸುಶೀಲ್‌ ನಾಯಕರಾದರೆ, ಪ್ರೀತಿ ಯಶ್‌ ನಾಯಕಿ. ಶ್ರೀಧರ್‌ ಶೆಟ್ಟಿಗೂ ಇದು ಮೊದಲ ನಿರ್ದೇಶನದ ಚಿತ್ರ. ಛಾಯಾಗ್ರಾಹಕ ಶಿವಪುತ್ರ ಮತ್ತು ಸಂಗೀತ ನಿರ್ದೇಶಕ ಉತ್ತಮ್‌ರಾಜ್‌ ಅವರಿಗೂ ಮೊದಲ ಸಿನಿಮಾ. ಹಾಗಾಗಿ, ಎಲ್ಲರಿಗೂ ಸಿನಿಮಾ ಯುದ್ಧದಲ್ಲಿ ಗೆಲ್ಲುವ ಅತೀವ ನಂಬಿಕೆ.

ಅಂದಹಾಗೆ, “ಆರೋಹಣ’ ಆ.31 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದು ಪಕ್ಕಾ ಹಳ್ಳಿ ಸೊಗಡಿನ ಕಥೆ. ಅದರಲ್ಲೂ ಅಪ್ಪ ಮತ್ತು ಮಗನ ನಡುವಿನ ಚಿತ್ರಣ ಇಲ್ಲಿದೆ. ಸಾಕಷ್ಟು ಅಪ್ಪ, ಮಗನ ಕುರಿತ ಚಿತ್ರಗಳು ಬಂದಿವೆ. ಆದರೆ, ಇಲ್ಲಿರುವ ಅಪ್ಪ, ಮಗನ ಬಾಂಧವ್ಯ ಹೊಸದಾಗಿರಲಿದೆ ಎಂಬುದು ಚಿತ್ರತಂಡದ ಮಾತು. ಸೆಂಟಿಮೆಮಟ್‌, ಪ್ರೀತಿ, ಗೆಳೆತನ ಇದು “ಆರೋಹಣ’ದ ಹೈಲೆಟ್‌.

ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಒಂದೊಂದು ಸಮಸ್ಯೆ ಎದುರಿಸುತ್ತಲೇ ಇರುತ್ತಾರೆ. ಅಂತಹವರಿಗೆ ಆ ಸಮಸ್ಯೆಯಿಂದ ಹೇಗೆ ಹೊರಬರಬೇಕು ಎಂಬ ಪರಿಹಾರ ಇಲ್ಲಿ ಸಿಗಲಿದೆ. ಕೇವಲ ಇದು ಪರಿಹಾರ ಸೂಚಿಸುವ ಚಿತ್ರವಲ್ಲ ಎನ್ನುವ ನಾಯಕ ಸುಶೀಲ್‌, ಇಲ್ಲೊಂದು ಸಂದೇಶವೂ ಇದೆ. ಅದು ಬದುಕಿಗೆ ಸಂಬಂಧಿಸಿದ್ದು. ಅದನ್ನು ಅರಿತರೆ, ಬದುಕಲ್ಲಿ ಒಂದಷ್ಟು ಸಮಸ್ಯೆಗಳನ್ನು ದೂರ ಇಡಲು ಸಾಧ್ಯವಾಗುತ್ತೆ ಎನ್ನುತ್ತಾರೆ.

ಚಿತ್ರಕ್ಕೆ ಕೆ.ಕಲ್ಯಾಣ್‌ ಮೂರು ಗೀತೆಗಳನ್ನು ರಚಿಸಿದ್ದಾರೆ. ಜಗ್ಗಿ ಮಾಸ್ಟರ್‌ ನೃತ್ಯ ಸಂಯೋಜಿಸಿದ್ದಾರೆ. ಇನ್ನು, ಎರಡು ಭರ್ಜರಿ ಫೈಟ್‌ಗಳೂ ಇಲ್ಲಿವೆ. ವಿಶೇಷವೆಂದರೆ, ರವಿಶಂಕರ್‌ಗೌಡ ಅವರು ಚಿತ್ರದ ಹಾಡಿಗೆ ಧ್ವನಿಯಾಗಿದ್ದಾರೆ. “ಆರೋಹಣ’ ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಈ ಹಿಂದೆಯೇ ಪ್ರೇಕ್ಷಕರ ಮುಂದೆ ಬರಬೇಕಿತ್ತು. ಆದರೆ, ಒಂದಷ್ಟು ಸಮಸ್ಯೆಗಳನ್ನು ಪರಿಹರಿಸಿಕೊಂಡು ಬರುವ ಹೊತ್ತಿಗೆ ಇಷ್ಟು ತಡವಾಗಿದೆ. ಬೆಂಗಳೂರು, ಸಕಲೇಶಪುರ, ರಾಮನಗರ ಮತ್ತು ಬಿಡದಿ ಸೇರಿದಂತೆ ಇತರೆಡೆ ಚಿತ್ರೀಕರಣವಾಗಿದೆ.

ಟಾಪ್ ನ್ಯೂಸ್

1-daadas

ಮಂಗಳೂರು,ಉಡುಪಿಯಲ್ಲಿ ನಾಳೆಯಿಂದ ರಂಜಾನ್ ಉಪವಾಸ ಆರಂಭ

1-d-aasddasd

ಕೋವಿಡ್ ಪರಿಸ್ಥಿತಿ : ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ

1-wwewqeqwe

ಪರಾರಿಯಾಗುವ ವೇಳೆ ಗುರುದ್ವಾರಕ್ಕೆ ನುಸುಳಿ ಅಟ್ಟಹಾಸ ತೋರಿದ್ದ ಅಮೃತಪಾಲ್ ಸಿಂಗ್

death

ಕಾಂಚೀಪುರಂ ಪಟಾಕಿ ಘಟಕದಲ್ಲಿ ಅಗ್ನಿ ಅವಘಡ ; ಕನಿಷ್ಠ 8 ಜನ ಮೃತ್ಯು

1-saddsdsadd

ವಿದೇಶಿ ಭಾಷೆಗಳಲ್ಲೂ ಕಾಂತಾರ ಹವಾ; ಜಪಾನಿ ಭಾಷೆಯಲ್ಲೂ ರಿಲೀಸ್‌ ಮಾಡಲು ಬೇಡಿಕೆ

1-3qeqwreqwrw3

ಕೊನೆಗೂ ಗುಡ್‌ ನ್ಯೂಸ್‌ ಕೊಟ್ಟ ನಟಿ ಹರಿಪ್ರಿಯಾ

1-wwewqewq

ಭಟ್ಕಳ: ಮುಸ್ಲಿಂ ಅಭ್ಯರ್ಥಿಗಳನ್ನು ಬೆಂಬಲಿಸದಿರಲು ಇಸ್ಲಾ-ವ-ತಂಝೀಮ್ ನಿರ್ಣಯ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-saddsdsadd

ವಿದೇಶಿ ಭಾಷೆಗಳಲ್ಲೂ ಕಾಂತಾರ ಹವಾ; ಜಪಾನಿ ಭಾಷೆಯಲ್ಲೂ ರಿಲೀಸ್‌ ಮಾಡಲು ಬೇಡಿಕೆ

1-3qeqwreqwrw3

ಕೊನೆಗೂ ಗುಡ್‌ ನ್ಯೂಸ್‌ ಕೊಟ್ಟ ನಟಿ ಹರಿಪ್ರಿಯಾ

Komal new film undenama

ಮತ್ತೆ ಪ್ರೇಕ್ಷಕರೆದುರು ಕೋಮಲ್; ಏ.14ಕ್ಕೆ ಉಂಡೆನಾಮ ಚಿತ್ರ ಬಿಡುಗಡೆ

TDY-6

ʼಉರಿಗೌಡ ಮತ್ತು ನಂಜೇಗೌಡʼ ಸಿನಿಮಾ ನಿರ್ಮಾಣ ಕೈಬಿಟ್ಟ ಸಚಿವ ಮುನಿರತ್ನ

TEQUILA movie

ಹಾಡಿ ಕುಣಿಯಲು ಟಕೀಲಾ ರೆಡಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

1-daadas

ಮಂಗಳೂರು,ಉಡುಪಿಯಲ್ಲಿ ನಾಳೆಯಿಂದ ರಂಜಾನ್ ಉಪವಾಸ ಆರಂಭ

1-sadsasad

ಸರಣಿ ನಿರ್ಣಾಯಕ ಪಂದ್ಯ: ಆಸೀಸ್ 269ಕ್ಕೆ ಆಲೌಟ್ ಮಾಡಿದ ಟೀಮ್ ಇಂಡಿಯಾ

1-adassad

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಯುನಿಕೋರ್ಟ್‌ ದಿನ

1-ffsdfsf

ಮಹಾಲಿಂಗೇಶ್ವರ ಜಟೋತ್ಸವಕ್ಕೆ ಜನ ಸಾಗರ ;ದೇವರ ಮೊರೆ ಹೋದ ರಾಜಕಾರಣಿಗಳು

1-qweqw

ಕುಷ್ಟಗಿ:ಭಕ್ತ ಜನಸಾಗರದ ಮಧ್ಯೆ ಶ್ರೀ ವೀರಭದ್ರೇಶ್ವರ ಜಾತ್ರಾಮಹೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.