ನನ್ನ ಕೆರಿಯರ್‌’ಗೆ ಮೈಲೇಜ್‌ ನೀಡುವ ಸಿನಿಮಾ…; ತೋತಾಪುರಿ ಕುರಿತು ಅದಿತಿ ಮಾತು


Team Udayavani, Sep 23, 2022, 4:38 PM IST

ನನ್ನ ಕೆರಿಯರ್‌’ಗೆ ಮೈಲೇಜ್‌ ನೀಡುವ ಸಿನಿಮಾ…; ತೋತಾಪುರಿ ಕುರಿತು ಅದಿತಿ ಮಾತು

“ನನ್ನ ಕೆರಿಯರ್‌ನಲ್ಲಿ ಈ ಸಿನಿಮಾ ತುಂಬಾ ಮುಖ್ಯವಾಗುತ್ತದೆ…’ – ಹೀಗೆ ಹೇಳಿ ನಕ್ಕರು ನಟಿ ಅದಿತಿ ಪ್ರಭುದೇವ. ಅವರು ಹೇಳಿದ್ದು “ತೋತಾಪುರಿ’ ಚಿತ್ರದ ಬಗ್ಗೆ. ಈ ಚಿತ್ರ ಸೆ.30ರಂದು ತೆರೆಕಾಣುತ್ತಿದೆ. ಈಗಾಗಲೇ ಟ್ರೇಲರ್‌ ಹಾಗೂ ಹಾಡಿನಲ್ಲಿ ಅದಿತಿ ಮಿಂಚಿದ್ದಾರೆ. ಈ ಚಿತ್ರದ ಮೇಲೆ ಈಗ ಅದಿತಿ ನಿರೀಕ್ಷೆ ಇಟ್ಟಿದ್ದಾರೆ.

“ವಿಜಯ ಪ್ರಸಾದ್‌ ಅವರ ಕೆಲವು ಸಿನಿಮಾಗಳನ್ನು ನೋಡಿದ್ದೆ ಮತ್ತು ಅವರ ಶೈಲಿ ಗೊತ್ತಿತ್ತು. ನನ್ನನ್ನು ನೋಡಿದ ಕೂಡಲೇ ಅವರ ಕಲ್ಪನೆಯ ಪಾತ್ರಕ್ಕೆ ಹೊಂದಿಕೆಯಾಗುತ್ತೇನೆಂದು ನನ್ನನ್ನುಆಯ್ಕೆ ಮಾಡಿದರು. ಆರಂಭದಲ್ಲಿ ಸಿನಿಮಾದ ಸಂಭಾಷO ಅದರೊಳಿನ ಒಳಾರ್ಥಗಳು ನನಗೆ ಅರ್ಥವಾಗುತ್ತಿರಲಿಲ್ಲ. ಮುಂದೆ ಶೂಟಿಂಗ್‌ ಮಾಡುತ್ತಾ ಗೊತ್ತಾಯಿತು. ತುಂಬಾ ಒಳ್ಳೆಯ ಪಾತ್ರ. ಇಡೀ ಸಿನಿಮಾವನ್ನು ನೈಜವಾಗಿ ಕಟ್ಟಿಕೊಟ್ಟಿದ್ದಾರೆ. ಹಳ್ಳಿ ಕಡೆ ಒಂದು ತುಂಬಿದ ಕುಟುಂಬ ಹೇಗಿರುತ್ತದೋ ಮತ್ತು ಎಷ್ಟು ನೈಜವಾಗಿರುತ್ತದೋ ಅದೇ ರೀತಿ ಇಡೀ ಸಿನಿಮಾವಿದೆ. ಮುಖ್ಯವಾಗಿ ಸಿನಿಮಾದಲ್ಲೊಂದು ಅದ್ಭುತವಾದ ಸಂದೇಶವಿದೆ. ಜಾತಿ, ಧರ್ಮ ಹಾಗೂ ಮನುಷ್ಯತ್ವ ..ಈ ಮೂರು ವಿಚಾರ ಸಿನಿಮಾದ ಹೈಲೈಟ್‌. ನನ್ನ ಕೆರಿಯರ್‌ನಲ್ಲಿ ಈ ಚಿತ್ರ ತುಂಬಾ ಭಿನ್ನವಾಗಿ ನಿಲ್ಲುತ್ತದೆ’ ಎನ್ನುತ್ತಾರೆ.

ಇದನ್ನೂ ಓದಿ:2024ರಲ್ಲಿ ಲಾಲು-ನಿತೀಶ್ ಜೋಡಿ ನಿರ್ನಾಮ: ಬಿಹಾರದಲ್ಲಿ ಗುಡುಗಿದ ಅಮಿತ್ ಶಾ

ಚಿತ್ರದಲ್ಲಿ ಅದಿತಿ ಶಕೀಲಾ ಭಾನು ಎಂಬ ಮುಸ್ಲಿಂ ಹುಡುಗಿಯ ಪಾತ್ರ ಮಾಡಿದ್ದರೂ, ಸಂಭಾಷಣೆ ಮಾತ್ರ ಅಚ್ಚ ಕನ್ನಡದಲ್ಲೇ ಇದೆ. ಅದು ಕೂಡಾ ಅದಿತಿ ಅವರಿಗೆ ಖುಷಿ ಕೊಟ್ಟಿದೆಯಂತೆ. ಜಗ್ಗೇಶ್‌ ಹಾಗೂ ವಿಜಯಪ್ರಸಾದ್‌ ಜೋಡಿ ಈಗಾಗಲೇ ನೀರ್‌ ದೋಸೆ ಸಿನಿಮಾ ಮೂಲಕ ಎಲ್ಲರ ಮನಸ್ಸನ್ನು ಗೆದ್ದಿದೆ ಎಂಬುದಕ್ಕೆ ಆ ಚಿತ್ರಕ್ಕೆ ಸಿಕ್ಕಿರುವ ಅಭೂತಪೂರ್ವ ಗೆಲುವೇ ಸಾಕ್ಷಿ. ಮುಖ್ಯವಾಗಿ ಮಹಿಳೆಯರು ಹಾಗೂ ಕುಟುಂಬವರ್ಗ ವೀಕ್ಷಿಸಿದ “ನೀರ್‌ದೋಸೆ’ ಬಾಕ್ಸಾಫೀಸ್‌ನಲ್ಲೂ ದೊಡ್ಡ ಮಟ್ಟದಲ್ಲಿ ದಾಖಲೆ ಮಾಡಿದೆ.

ಇನ್ನು ತೋತಾಪುರಿ ಇವರಿಬ್ಬರ ಕಾಂಬಿನೇಷನ್‌ನ ಮತ್ತೂಂದು ಚಿತ್ರ ಎಂಬುದು ಒಂದೆಡೆಯಾದರೆ, ಒಳ್ಳೆಯ ಸಮಯಕ್ಕೆ ಬಿಡುಗಡೆಯಾಗುತ್ತಿರುವುದರಿಂದ ಜನ ಈ ಚಿತ್ರವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಕೂಡಾ ಅದಿತಿ ಅವರಿಗಿದೆ.

“ತೋತಾಪುರಿ’ ಎರಡು ಭಾಗಗಳಲ್ಲಿ ತಯಾರಾಗಿದ್ದು, ನೂರಾರು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಕಾಮಿಡಿ ಸಿನಿಮಾವೊಂದಕ್ಕೆ ಈ ಪರಿ ಶೂಟಿಂಗ್‌ ಮಾಡಿರುವುದು ಒಂದೆಡೆಯಾದರೆ, ಜಗ್ಗೇಶ್‌ ನಟಿಸಿರುವ ಸಿನಿಮಾಗಳ ಪೈಕಿ ತೋತಾಪುರಿ ಬಿಗ್‌ ಬಜೆಟ್‌ ಸಿನಿಮಾ ಎಂಬುದು ಗಮನಾರ್ಹ. ಹಾಗೆಯೇ ಚಿತ್ರದಲ್ಲಿ ಸಾಕಷ್ಟು ತಾರಾಸಮೂಹವೇ ಇದೆ ಎಂಬುದು ಮತ್ತೂಂದು ಗಮನಾರ್ಹ ವಿಷಯ. ಡಾಲಿ ಧನಂಜಯ್, ಅದಿತಿ ಪ್ರಭುದೇವ, ಸುಮನ್‌ ರಂಗನಾಥ್‌, ವೀಣಾ ಸುಂದರ್‌, ದತ್ತಣ್ಣ, ಹೇಮಾದತ್‌ ಸೇರಿದಂತೆ ಅನೇಕ ಕಲಾವಿದರು ತೋತಾಪುರಿ ತಾರಾಗಣದಲ್ಲಿದ್ದಾರೆ. ಕೆ.ಎ.ಸುರೇಶ್ ಈ ಚಿತ್ರದ ನಿರ್ಮಾಪಕರು

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.