ಈ ವರ್ಷ ರವಿಚಂದ್ರನ್‌ ಸಿನಿಹಬ್ಬ


Team Udayavani, Mar 31, 2018, 11:16 AM IST

Ravichandran-(1).jpg

ಕಳೆದ ವರ್ಷ ರವಿಚಂದ್ರನ್‌ ಅಭಿನಯದ ಒಂದೇ ಒಂದು ಚಿತ್ರ ಬಿಡುಗಡೆಯಾಗಿತ್ತು. ಅದೇ “ಹೆಬ್ಬುಲಿ’. ಅದೊಂದು ಚಿತ್ರ ಹೊರತುಪಡಿಸಿದರೆ ಮಿಕ್ಕಂತೆ ಅವರ ಯಾವುದೇ ಚಿತ್ರ ಬಿಡುಗಡೆಯಾಗಿರಲಿಲ್ಲ. ಈ ಬಗ್ಗೆ ಬೇಸರಗೊಂಡಿದ್ದ ಅವರ ಅಭಿಮಾನಿಗಳಿಗೆ ಈ ವರ್ಷ ಬಂಪರ್‌ ಎಂದರೆ ತಪ್ಪಿಲ್ಲ. ಏಕೆಂದರೆ, ಈ ವರ್ಷ ರವಿಚಂದ್ರನ್‌ ಅವರ ಸಿನಿಹಬ್ಬ ಶುರುವಾಗಲಿದೆ.

ಹೀಗೆಂದಾಕ್ಷಣ, ಅಚ್ಚರಿಯಾಗಬಹುದೇನೋ? ಆದರೂ ಇದು ನಿಜ. ಹೌದು, ರವಿಚಂದ್ರನ್‌ ಅಭಿನಯಿಸಿರುವ ಈ ವರ್ಷದ ಮೊದಲ ಚಿತ್ರ “ಸೀಜರ್‌’ ಏಪ್ರಿಲ್‌ ಎರಡನೆಯ ವಾರದಂದು ಬಿಡುಗಡೆಯಾಗುತ್ತಿದೆ. ಇದು ಬಿಡುಗಡೆಯಾಗುತ್ತಿರುವ ಮೊದಲ ಚಿತ್ರವಾದರೆ, ಅವರು ಅಭಿನಯಿಸಿರುವ ಮೂರು ಚಿತ್ರಗಳು ಕೂಡ ಸಾಲು ಸಾಲಾಗಿ ತೆರೆಗೆ ಬರಲು ಸಜ್ಜಾಗಿವೆ. ಅಲ್ಲಿಗೆ ಈ ವರ್ಷ ರವಿಚಂದ್ರನ್‌ ನಟಿಸಿದ ನಾಲ್ಕು ಚಿತ್ರಗಳು ತೆರೆಗೆ ಬರಲಿವೆ ಎಂಬುದು ವಿಶೇಷ.

“ಸೀಜರ್‌’ ಚಿತ್ರ ಏಪ್ರಿಲ್‌ನಲ್ಲಿ ಬಿಡುಗಡೆಯಾದರೆ, ಅದರ ಹಿಂದೆಯೇ “ಬಕಾಸುರ’ ಚಿತ್ರ ತೆರೆಗೆ ಅಪ್ಪಳಿಸಲಿದೆ. ಇನ್ನು, ಬಹು ನಿರೀಕ್ಷೆಯ “ಮುನಿರತ್ನ ಕುರುಕ್ಷೇತ್ರ’ ಚಿತ್ರವು ಮೇ ಕೊನೆಯಲ್ಲಿ ಅಥವಾ ಜೂನ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಇದಾದ ಬಳಿಕ ರವಿಚಂದ್ರನ್‌ ನಿರ್ದೇಶಿಸಿ, ಅಭಿನಯಿಸುತ್ತಿರುವ “ರಾಜೇಂದ್ರ ಪೊನ್ನಪ್ಪ’ ಚಿತ್ರ ಕೂಡ ವರ್ಷದ ಅಂತ್ಯದಲ್ಲಿ ಬಿಡುಗಡೆಯಾಗಬಹುದು.

ಅಲ್ಲಿಗೆ, ರವಿಚಂದ್ರನ್‌ ಅಭಿನಯದ ನಾಲ್ಕು ಚಿತ್ರಗಳು ಈ ವರ್ಷ ತೆರೆಗೆ ಬರಲಿವೆ ಎಂಬುದು ವಿಶೇಷತೆಗಳಲ್ಲೊಂದು. ಇದು ಅಭಿಮಾನಿಗಳ ಪಾಲಿಗೆ ಹಬ್ಬವಂತೂ ಹೌದು. ಸಾಮಾನ್ಯವಾಗಿ ಹೀರೋಗಳು ನಟಿಸಿದ ಎರಡು ಅಥವಾ ಮೂರು ಚಿತ್ರಗಳು ಒಂದು ವರ್ಷದಲ್ಲಿ ಬಿಡುಗಡೆಯಾಗಿರುವ ಉದಾಹರಣೆಗಳಿವೆ. ಈ ವರ್ಷ ರವಿಚಂದ್ರನ್‌ ಅಭಿನಯದ ನಾಲ್ಕು ಚಿತ್ರಗಳು ಬಿಡುಗಡೆಯಾಗುವ ಸಾಧ್ಯತೆ ಇರುವುದು ವಿಶೇಷವಂತೂ ಹೌದು.

ವಿನಯ್‌ಕೃಷ್ಣ ನಿರ್ದೇಶನದ “ಸೀಜರ್‌’ ಚಿತ್ರದಲ್ಲಿ ಚಿರಂಜೀವಿ ಸರ್ಜಾ ನಾಯಕ. ಅವರಿಗೆ ಪಾರುಲ್‌ ಯಾದವ್‌ ನಾಯಕಿ. ತ್ರಿವಿಕ್ರಮ ಈ ಚಿತ್ರದ ನಿರ್ಮಾಪಕರು. ಆರಂಭದಲ್ಲಿ ರವಿಚಂದ್ರನ್‌ “ಸೀಜರ್‌’ನಲ್ಲಿ ನಟಿಸುತ್ತಾರೆಂಬುದು ಸುದ್ದಿ ಇರಲಿಲ್ಲ. ಎಷ್ಟೋ ದಿನಗಳ ಬಳಿಕ ರವಿಚಂದ್ರನ್‌ “ಸೀಜರ್‌’ ತಂಡ ಸೇರಿಕೊಂಡ ಸುದ್ದಿ ಬಂತು. ಈಗಾಗಲೇ ರವಿಚಂದ್ರನ್‌ ಹಲವು ಹೀರೋಗಳ ಚಿತ್ರದಲ್ಲಿ ನಾಯಕನ ತಂದೆಯಾಗಿ, ಅಣ್ಣನಾಗಿ ಕಾಣಿಸಿಕೊಂಡಿರುವುದರಿಂದ ಇಲ್ಲೂ ಚಿರುಗೆ ತಂದೆ ಪಾತ್ರ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಇತ್ತು.

ಆದರೆ, ರವಿಚಂದ್ರನ್‌ “ಸೀಜರ್‌’ನಲ್ಲಿ ಒಬ್ಬ ಫೈನಾನ್ಶಿಯರ್‌ ಪಾತ್ರ ಮಾಡುತ್ತಿದ್ದಾರೆ. ಅವರೊಂದಿಗೆ ಚಿರು ಅವರು ಕಾರುಗಳನ್ನು ಸೀಜ್‌ ಮಾಡುವ ಹುಡುಗನಾಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಆಂಜಿ ಛಾಯಾಗ್ರಹಣ ಮಾಡಿದರೆ, ಚಂದನ್‌ ಶೆಟ್ಟಿ ಅವರ ಸಂಗೀತವಿದೆ. ಇನ್ನು, “ಕರ್ವ’ ಖ್ಯಾತಿಯ ನವನೀತ್‌ ನಿರ್ದೇಶನದ “ಬಕಾಸುರ’ದಲ್ಲೂ ರವಿಚಂದ್ರನ್‌ ನಟಿಸುತ್ತಿದ್ದಾರೆ.

ಹಾಗಾದರೆ, ಈ ಚಿತ್ರದಲ್ಲಿ ರವಿಚಂದ್ರನ್‌ ಪಾತ್ರ ಏನು? ಅದಕ್ಕೆ ಉತ್ತರ ಚಿತ್ರ ಬರುವವರೆಗೆ ಕಾಯಬೇಕು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಇಷ್ಟೊತ್ತಿಗೆ “ಮುನಿರತ್ನ ಕುರುಕ್ಷೇತ್ರ’ ಪ್ರೇಕ್ಷಕರ ಮುಂದೆ ಬರಬೇಕಿತ್ತು. ಚುನಾವಣೆ ಘೋಷಣೆಯಾಗಿದ್ದರಿಂದ ಚಿತ್ರ ಮುಂದಕ್ಕೆ ಹೋಗಿದೆ. ಈ ಚಿತ್ರದಲ್ಲಿ ರವಿಚಂದ್ರನ್‌ ಅವರು ಕೃಷ್ಣನಾಗಿ ಕಾಣಿಸಿಕೊಂಡಿದ್ದಾರೆ. ಇದೊಂದು ದೊಡ್ಡ ತಾರಾಬಳಗ ಇರುವ ಸಿನಿಮಾ. ರವಿಚಂದ್ರನ್‌ ಕೃಷ್ಣನಾಗಿ ಹೇಗೆ ಕಾಣಿಸಿಕೊಳ್ಳುತ್ತಾರೆ ಎಂಬುದಕ್ಕೆ ಈಗಾಗಲೇ ಒಂದು ಪೋಸ್ಟರ್‌ ಕೂಡ ಬಿಡುಗಡೆಯಾಗಿತ್ತು.

ಮಹಾಭಾರತದ ಕೃಷ್ಣ ಏನೆಲ್ಲಾ ಮಾಡಿದ್ದಾರೋ, ಅದನ್ನೇ ತೆರೆಯ ಮೇಲೆ ರವಿಚಂದ್ರನ್‌ ಅವರು ಕೃಷ್ಣನಾಗಿ ತೋರಿಸಲು ಹೊರಟಿದ್ದಾರೆ. “ದೃಶ್ಯಂ’ನಲ್ಲಿ ರಾಜೇಂದ್ರ ಪೊನ್ನಪ್ಪ ಪಾತ್ರದಲ್ಲಿ ಗಮನಸೆಳೆದ ರವಿಚಂದ್ರನ್‌, “ರಾಜೇಂದ್ರ ಪೊನ್ನಪ್ಪ’ ಹೆಸರಲ್ಲೇ ಚಿತ್ರವೊಂದಕ್ಕೆ ಚಾಲನೆ ಕೊಟ್ಟರು. ಅದೂ ಕೂಡ ಈ ವರ್ಷವೇ ಬರುವ ಸೂಚನೆ ನೀಡಿದೆ. ಅವರಿಗೆ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ನಟಿಸುತ್ತಿದ್ದಾರೆ. 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.