ಪೊಗರು ಚಿತ್ರಕ್ಕೆ ಇಂದು ಪೂಜೆ 


Team Udayavani, Dec 14, 2017, 11:41 AM IST

Dhruvasarja-(1).jpg

ಇತ್ತೀಚೆಗಷ್ಟೇ “ಭರ್ಜರಿ’ ಗೆಲುವು ಕಂಡ ಧ್ರುವ ಸರ್ಜಾ, ಈಗ “ಪೊಗರು’ ಸಿನಿಮಾಗೆ ಅಣಿಯಾಗಿದ್ದಾರೆ. ಡಿ.14 (ಇಂದು) ವೆಸ್ಟ ಆಫ್ ಕಾರ್ಡ್‌ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಮುಂಜಾನೆ 5.30 ಕ್ಕೆ “ಪೊಗರು’ ಚಿತ್ರದ ಪೂಜೆ ನೆರವೇರಿದೆ. ನಂದಕಿಶೋರ್‌ ನಿರ್ದೇಶನದ ಈ ಚಿತ್ರಕ್ಕೆ ಗಂಗಾಧರ್‌ ನಿರ್ಮಾಪಕರು. ಈ ಹಿಂದೆ ನಂದಕಿಶೋರ್‌ ನಿರ್ದೇಶನದ ಎಲ್ಲಾ ಚಿತ್ರಗಳ ಪೂಜೆ ಗಣಪತಿ ದೇವಸ್ಥಾನದಲ್ಲಿ ನೆರವೇರಿತ್ತು.

ಹಾಗಾಗಿ “ಪೊಗರು’ ಚಿತ್ರದ ಪೂಜೆ ಕೂಡ ಅದೇ ದೇವಸ್ಥಾನದಲ್ಲಿ ನಡೆಯುತ್ತಿದೆ. ಡಿಸೆಂಬರ್‌ 20ರಿಂದ ಮೊದಲ ಹಂತದ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ. ಈ ಚಿತ್ರಕ್ಕೆ ಧ್ರುವ ಸರ್ಜಾ ಹೀರೋ ಪಕ್ಕಾ ಆಗಿದ್ದರು. ಆದರೆ, ನಾಯಕಿ ಯಾರೆಂಬುದನ್ನು ಗೌಪ್ಯವಾಗಿಟ್ಟಿದ್ದರು ನಂದಕಿಶೋರ್‌. ಈಗ “ಪೊಗರು’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಚಿತ್ರದಲ್ಲಿ ಇನ್ನೊಬ್ಬ ನಾಯಕಿಯೂ ಇದ್ದು, ಅದು ಶಾನ್ವಿ ಶ್ರೀವಾತ್ಸವ್‌ ಜತೆ ಮಾತುಕತೆ ನಡೆಯುತ್ತಿದೆ.

ಡೇಟ್‌ ಹೊಂದಾಣಿಕೆ ಸಮಸ್ಯೆ ಹಿನ್ನೆಲೆಯಲ್ಲಿ ಚಿತ್ರತಂಡ ಶಾನ್ವಿ ಅವರ ಹೆಸರನ್ನು ಇನ್ನೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಇನ್ನು, ಈ ಚಿತ್ರಕ್ಕಾಗಿ ಧ್ರುವಸರ್ಜಾ ಅವರು ಸುಮಾರು30 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ. ಮೊದಲ ಹಂತದ ಚಿತ್ರೀಕರಣಕ್ಕೆ ಬೇಕಾದ ತಯಾರಿ ಮಾಡಿಕೊಂಡಿರುವ ಧ್ರುವಸರ್ಜಾ, ಆ ಬಳಿಕ ಎರಡನೇ ಹಂತದ ಚಿತ್ರೀಕರಣದ ಹೊತ್ತಿಗೆ ಪುನಃ ಬಾಡಿ ಬಿಲ್ಡ್‌ ಮಾಡಿಕೊಳ್ಳಲಿದ್ದಾರೆ.

ಈ ಮೂಲಕ ಧ್ರುವ ಅವರು ಹೊಸ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದೊಂದು ಶಾಲೆಯ ವಿದ್ಯಾರ್ಥಿ ಪಾತ್ರ. ಹಾಗಾಗಿ, ಹಾಗೆ ಕಾಣಿಸಿಕೊಳ್ಳಲು ಏನು ಬೇಕೋ ಅದೆಲ್ಲಾ ತಯಾರಿಯನ್ನೂ ಧ್ರುವ ಮಾಡಿಕೊಂಡಿದ್ದಾರೆ. “ಪೊಗರು’ ಪಕ್ಕಾ ಕಮರ್ಷಿಯಲ್ ಮತ್ತು ಸ್ವಮೇಕ್‌ ಚಿತ್ರ. ಈ ಹಿಂದೆ ನಂದಕಿಶೋರ್‌ “ಹಯಗ್ರೀವ’ ಚಿತ್ರವನ್ನು ಅನೌನ್ಸ್‌ ಮಾಡಿದ್ದರು. ಆ ಬಳಿಕ “ಪೊಗರು’ ಚಿತ್ರದ ಬಗ್ಗೆ ಹೇಳಿಕೊಂಡರು. ಆದರೆ, “ಹಯಗ್ರೀವ’ ಚಿತ್ರದ ಶೀರ್ಷಿಕೆ “ಪೊಗರು’ ಚಿತ್ರದ ಶೀರ್ಷಿಕೆ ಅಂತ ಬದಲಾಗಿದೆಯಾ ಎಂಬ ಪ್ರಶ್ನೆ ಎದುರಾಗಬಹುದು.

“ಹಯಗ್ರೀವ’ ಚಿತ್ರಕ್ಕೂ “ಪೊಗರು’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ನಂದಕಿಶೋರ್‌ ಅವರು “ಪೊಗರು’ ಚಿತ್ರಕ್ಕಾಗಿಯೇ ಹೊಸದೊಂದು ಕಥೆ ಹೆಣೆದು, ಧ್ರುವ ಸರ್ಜಾ ಅವರ ಮ್ಯಾನರಿಸಂಗೆ ತಕ್ಕಂತೆಯೇ ಪಾತ್ರ ಹೆಣೆದು, ಪವರ್‌ಫ‌ುಲ್‌ ಚಿತ್ರ ಕೊಡಲು ಅಣಿಯಾಗಿದ್ದಾರೆ. ಸದ್ಯಕ್ಕೆ “ಭರ್ಜರಿ’ ಗೆಲುವಿನ ಖುಷಿಯಲ್ಲಿರುವ ಧ್ರುವ ಅವರು ಇದೀಗ ಮತ್ತೂಮ್ಮೆ “ಪೊಗರು’ ತೋರಿಸೋಕೆ ರೆಡಿಯಾಗಿದ್ದಾರೆ.

ಟಾಪ್ ನ್ಯೂಸ್

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

the suit kannada movie

Sandalwood; ಬದುಕು – ಭಾವನೆಗಳ ಸಂಗಮ ‘ದಿ ಸೂಟ್’

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Kannada Cinema; ರಾಜಕಾರಣದ ಸುತ್ತ ‘ಭಗೀರಥ’; ಟೀಸರ್ ರಿಲೀಸ್

Kannada Cinema; ರಾಜಕಾರಣದ ಸುತ್ತ ‘ಭಗೀರಥ’; ಟೀಸರ್ ರಿಲೀಸ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.