ಪ್ರಮೋಶನ್‌ ಗಾಗಿ ವಿಶೇಷ ಟೀಸರ್‌: ತೋತಾಪುರಿ ತಂಡದ ಹೊಸ ಐಡಿಯಾ


Team Udayavani, Aug 16, 2021, 9:11 AM IST

totapuri kannada movie

ನವರಸ ನಾಯಕ ಜಗ್ಗೇಶ್‌ ಅಭಿನಯದ “ತೋತಾಪುರಿ’ ಸಿನಿಮಾ ಪ್ರಾರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರದ ಮೇಲೆ ಈಗಾಗಲೇ ಸಾಕಷ್ಟು ನಿರೀಕ್ಷೆ ಆರಂಭವಾಗಿದೆ.

ಯಾಕೆಂದರೆ “ನೀರ್‌ದೋಸೆ’ ಹಿಟ್‌ಕೊಟ್ಟ ಬಳಿಕ ನಿರ್ದೇಶಕ ವಿಜಯ ಪ್ರಸಾದ್‌ ಹಾಗೂ ಜಗ್ಗೇಶ್‌ ಈ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರನ್ನು ಎದುರುಗೊಳ್ಳಲಿದ್ದಾರೆ. ಅಲ್ಲದೇ ಚಿತ್ರದಲ್ಲಿ ಜಗ್ಗೇಶ್‌ ಹಾಗೂ ಇತರಕಲಾವಿದರ ಗೆಟಪ್‌ ತುಂಬಾ ವಿಭಿನ್ನವಾಗಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿದೆ.

ಏಕಕಾಲಕ್ಕೆ ಎರಡೂ ಭಾಗದ ಚಿತ್ರ ಚಿತ್ರೀಕರಣ ಮುಗಿಸಿರುವ ಖ್ಯಾತಿ ಈ ಚಿತ್ರತಂಡಕ್ಕಿದೆ. ಭಾರತ ಚಿತ್ರರಂಗದಲ್ಲಿ ಇದು ದಾಖಲೆಯೂ ಹೌದು. ಹೀಗೆ ನಾನಾಕಾರಣಗಳಿಂದಾಗಿ ಕುತೂಹಲಕ್ಕೆ ಕಾರಣವಾಗಿರುವ ಈ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದು ನಿಂತಿದೆ.

ವಿಶೇಷವೆಂದರೆ, ಜಗ್ಗೇಶ್‌ ಈವರೆಗೂ ನಟಿಸಿರುವ ಚಿತ್ರಗಳಲ್ಲಿ ಇದು ಬಿಗ್‌ ಬಜೆಟ್‌ ಸಿನಿಮಾ ಎಂಬುದು ಒಂದೆಡೆಯಾದರೆ, ಇದೇ ಮೊದಲ ಬಾರಿಗೆ ಭಾಗ-1 ಭಾಗ-2ರಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈಗ ಈ ಚಿತ್ರ ಮತ್ತೂಂದು ವಿಷಯದಿಂದ ಸುದ್ದಿಯಲ್ಲಿದೆ. ಅದು ಟೀಸರ್‌ ವೊಂದರ ಮೂಲಕ. ಸಾಮಾನ್ಯವಾಗಿ ಸಿನಿಮಾ ಪ್ರಮೋಶನ್‌ಗಾಗಿ ಲಿರಿಕಲ್‌ ವಿಡಿಯೋ ಅಥವಾ ಸಿನಿಮಾದ ಟೀಸರ್‌ ಬಿಡುಗಡೆ ಮಾಡುತ್ತಾರೆ. ಆದರೆ, “ತೋತಾಪುರಿ’ ಚಿತ್ರತಂಡ ಮಾತ್ರ ವಿಶೇಷವಾಗಿ ಸಿನಿಮಾದ ಪ್ರಮೋಶನ್‌ ಬಗ್ಗೆ ಹೇಳಲೆಂದೇ ವಿಶೇಷವಾದ ಟೀಸರ್‌ವೊಂದನ್ನು ಶೂಟ್‌ ಮಾಡಿದೆ. ಈ ಮೂಲಕ ಹೊಸತನಕ್ಕೆ ನಾಂದಿಯಾಡಿದೆ.

ಇದನ್ನೂ ಓದಿ:ಶಸ್ತ್ರಧಾರಿ ಸೈನಿಕರ ಜೊತೆ ‘ಅಪ್ಪು’ |’ಸಲಾಂ ಸೋಲ್ಜರ್, ದೇಶಕ್ಕೆ ನೀನೆ ಪವರ್’ ಎಂದ ‘ಜೇಮ್ಸ್’

ಇತ್ತೀಚೆಗೆ ಈ ಟೀಸರ್‌ ಶೂಟ್‌ ಆಗಿದ್ದು, ಜಗ್ಗೇಶ್‌ ಹಾಗೂ ತಂಡ ಖುಷಿಯಾಗಿದೆ. ಈಗಾಗಲೇ ಚಾಪ್ಟರ್‌-1 ಮತ್ತು ಚಾಪ್ಟರ್‌-2 ಶೂಟಿಂಗ್‌ ಮುಗಿಸಿರುವ ಚಿತ್ರತಂಡ, ಟೈಟಲ್‌ಗೆ ಟ್ಯಾಗ್‌ಲೈನ್‌ ಸಹ ಗಮನ ಸೆಳೆಯುವಂತೆ ಇಟ್ಟಿದೆ “ತೋತಾಪುರಿ’ ತಂಡ. ಭಾಗ ಒಂದಕ್ಕೆ “ತೊಟ್‌ಕೀಳ್ಬೇಕಷ್ಟೇ…’ ಎಂದು ಅಡಿಬರಹವಿದ್ದರೆ, ಎರಡನೇ ಭಾಗಕ್ಕೆ “ತೊಟ್‌ಕಿತ್ತಾಯ್ತು’ ಎಂದು ನಮೂದಿಸಿದೆ.

ನಿರ್ದೇಶಕ ವಿಜಯ ಪ್ರಸಾದ್‌ ತುಂಟತನ, ಚೇಷ್ಟೆ ಇಷ್ಟಪಟ್ಟವರಿಗೆ ಇಲ್ಲಿ ಅವುಗಳನ್ನು ದುಪ್ಪಟ್ಟು ಅನುಭವಿಸುವಂತೆ ಕಟ್ಟಿಕೊಟ್ಟಿದ್ದಾರೆ ಎಂಬುದು ಪ್ರಾಥಮಿಕ ಮಾಹಿತಿ. ಜಗ್ಗೇಶ್‌ ಸೇರಿದಂತೆ ಚಿತ್ರದಲ್ಲಿ80ಕ್ಕೂ ಅಧಿಕ ಕಲಾವಿದರ ದಂಡೇ ಚಿತ್ರದಲ್ಲಿದೆ. ಅದಿತಿ ಪ್ರಭುದೇವ, ಧನಂಜಯ್, ಸುಮನ್‌ ರಂಗನಾಥ್‌, ದತ್ತಣ್ಣ, ವೀಣಾ ಸುಂದರ್‌, ಹೇಮಾದತ್‌ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದಾರೆ.

ತಾಂತ್ರಿಕತೆಯ ವಿಚಾರದಲ್ಲೂ ಈ ಚಿತ್ರ ಸದ್ದು ಮಾಡುತ್ತಿದೆ. ಹಿಟ್‌ ಸಿನಿಮಾಗಳನ್ನು ನೀಡಿರುವ “ಸುರೇಶ್‌ ಆರ್ಟ್ಸ್’ ಬ್ಯಾನರ್‌ ನ ಕೆ.ಎ.ಸುರೇಶ್‌ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಜಗ್ಗೇಶ್‌ ನಟನೆಯ ಎದ್ದೇಳು ಮಂಜುನಾಥ, ನೀರ್‌ದೋಸೆ ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದ ಅನೂಪ್‌ ಸೀಳಿನ್‌ “ತೋತಾಪುರಿ’ ಹಾಡುಗಳಿಗೆ ಬ್ಯಾಂಡು ಬಜಾಯಿಸಿದ್ದಾರೆ. ಹಿನ್ನೆಲೆ ಸಂಗೀತಕ್ಕೂ ಅವರದೇ ತಾಳ-ಮೇಳ. ನಿರಂಜನ್‌ ಬಾಬು ಕ್ಯಾಮೆರಾ, ಸುರೇಶ್‌ ಅರಸ್‌ ಸಂಕಲನ ಈ ಚಿತ್ರಕ್ಕಿದೆ.

ಇನ್ನು ಈ ಚಿತ್ರಕ್ಕೆ ಮೈಸೂರು, ಶ್ರೀರಂಗಪಟ್ಟಣ, ಮಡಿಕೇರಿ, ಕೇರಳ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಚಿತ್ರಮಂದಿರಗಳಿಗೆ ಶೇ100 ಪ್ರವೇಶಾತಿ ಸಿಕ್ಕಕೂಡಲೇ ಸಿನಿಮಾ ಬಿಡುಗಡೆ ಮಾಡಲು ತಂಡ ಸಜ್ಜಾಗಿದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.