ಗಲಭೆ ಇಲ್ಲದ ಪ್ರೇಮಕಥೆಯಿದು; ಕಚಗುಳಿ ಇಡುತ್ತಿದೆ ‘ತೋತಾಪುರಿ’ ಟ್ರೇಲರ್‌


Team Udayavani, Apr 22, 2022, 12:44 PM IST

totapuri kannada movie

ಸಿನಿಮಾ ಎಂದರೆ ಮನರಂಜನೆ. ಚಿತ್ರಮಂದಿರದೊಳಗೆ ಹೋದ ಪ್ರೇಕ್ಷಕ ಖುಷಿಯಾಗಬೇಕು, ಆತನ ಮನಸ್ಸು ಹಗುರವಾಗಬೇಕು. ಈ ನಿಟ್ಟಿನಲ್ಲಿ ಎಲ್ಲಾ ಸಿನಿಮಾಗಳು ಪ್ರಯತ್ನಿಸುತ್ತವೆ. ಕೆಲವೊಮ್ಮೆ ಪ್ರಯತ್ನ ಫ‌ಲಿಸುವುದಿಲ್ಲ. ಆದರೆ, ಜಗ್ಗೇಶ್‌ ನಾಯಕರಾಗಿರುವ “ತೋತಾಪುರಿ’ ಚಿತ್ರ ಪ್ರೇಕ್ಷಕನನ್ನು ನಗೆಗಡಲಿನಲ್ಲಿ ತೇಲಿಸುವುದು ಪಕ್ಕಾ. ಈ ಭರವಸೆಯನ್ನು ಕೊಟ್ಟಿರೋದು ಚಿತ್ರದ ಟ್ರೇಲರ್‌. “ತೋತಾಪುರಿ’ ಚಿತ್ರದ ಟ್ರೇಲರ್‌ ಗುರುವಾರ ಬಿಡುಗಡೆಯಾಗಿದೆ. ನಟ ಸುದೀಪ್‌ ಟ್ರೇಲರ್‌ ಬಿಡುಗಡೆ ಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಟ್ರೇಲರ್‌ ನೋಡಿದವರು ನಗುವಿನಲೆ ಯಲ್ಲಿ ತೇಲುವಂತಿದೆ. ಅದಕ್ಕೆ ಕಾರಣ ಚಿತ್ರದ ಸಂಭಾಷಣೆ. ಇದು ವಿಜಯಪ್ರಸಾದ್‌ ಸಿನಿಮಾ. ನೀವು ವಿಜಯ ಪ್ರಸಾದ್‌ ಅವರ ಈ ಹಿಂದಿನ ಸಿನಿಮಾಗಳನ್ನು ನೋಡಿದ್ದರೆ ಅಲ್ಲೊಂದಿಷ್ಟು ಚೇಷ್ಟೆ, ಕಚಗುಳಿ ಇಡುವ ಸಂಭಾಷಣೆ ಸಿಗುತ್ತದೆ. ಈಗ ಬಿಡುಗಡೆಯಾಗಿರುವ “ತೋತಾಪುರಿ’ ಟ್ರೇಲರ್‌ನಲ್ಲೂ ಅದು ಮುಂದುವರೆದಿದೆ.

ಒಂದಷ್ಟು ಡಬಲ್‌ ಮೀನಿಂಗ್‌ ಸಂಭಾಷಣೆಗಳ ಜೊತೆಗೆ ಚಿತ್ರದಲ್ಲೊಂದು ಗಟ್ಟಿ ಹಾಗೂ ಅಷ್ಟೇ ಸೂಕ್ಷ್ಮವಾದ ಕಥೆ ಇರೋದು ಕಂಡುಬರುತ್ತಿದೆ. ಹಿಂದು, ಮುಸ್ಲಿಂ ಹಾಗೂ ಕ್ರಿಶ್ಚಿಯನ್‌ ಮೂರು ಧರ್ಮಗಳು ಈ ಟ್ರೇಲರ್‌ನಲ್ಲಿ ಬಂದು ಹೋಗುತ್ತವೆ. ಚಿತ್ರದಲ್ಲಿ ಕಚಗುಳಿ ಇಡುವ ಸಂಭಾಷಣೆಯ ಜೊತೆಗೆ ಒಂದಷ್ಟು ಗಂಭೀರವಾದ ಹಾಗೂ ಇವತ್ತಿನ ಸನ್ನಿವೇಶಕ್ಕೆ ಹೇಳಿಮಾಡಿ ಸಿದಂತಹ ಸಂಭಾಷಣೆಗಳಿವೆ. “ನಾನು ದತ್ತು ತಗೊಂಡಿರೋದು ಜಾತಿ-ಧರ್ಮವನ್ನಲ್ಲ, ಈ ಕಂದಮ್ಮನಾ’, “ಜಾತಿ ಕಾಲಂನಲ್ಲಿ ಭಾರತದವನು ಎಂದು ಬರೀರಿ…’ ಇಂತಹ ಸಂಭಾಷಣೆಗಳು ಇವೆ. ಈ ಮೂಲಕ ನಿರ್ದೇಶಕರು ಗಂಭೀರ ವಿಚಾರವನ್ನು ಹೇಳಹೊರಟಿರೋದು ಕಾಣುತ್ತದೆ.

ನಿರ್ದೇಶಕ ವಿಜಯ ಪ್ರಸಾದ್‌ ಪ್ರಕಾರ, “ತೋತಾಪುರಿ’ ಒಂದು ಗಲಭೆ ಇಲ್ಲದ ಪುಟ್ಟ ಪ್ರೇಮಕಥೆ. ಜೊತೆಗೆ ಇದು ಭಾವೈಕ್ಯತೆ ಸಾರುವ ಸಿನಿಮಾ. ಈ ಚಿತ್ರ ಫ‌ಲವತ್ತಾದ ಫ‌ಸಲು ಕೊಡುವ ನಿರೀಕ್ಷೆ ಕೂಡಾ ಅವರಿಗಿದೆ. ಇನ್ನು, “ತೋತಾಪುರಿ’ ಹೊಸ ಜಾನರ್‌ನ ಸಿನಿಮಾವಾಗಿ ಪ್ರೇಕ್ಷಕರಿಗೆ ಇಷ್ಟವಾಗಲಿದೆ. ಚಿತ್ರವನ್ನು ಕಟ್ಟಿಕೊಟ್ಟ ಪರಿಸರ ಕೂಡಾ ಭಿನ್ನವಾಗಿದೆ.

ಚಿತ್ರದಲ್ಲಿ ಜಗ್ಗೇಶ್‌, ಅದಿತಿ, ಧನಂಜಯ್‌, ವೀಣಾ ಸುಂದರ್‌, ದತ್ತಣ್ಣ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರವನ್ನು ಕೆ.ಎ.ಸುರೇಶ್‌ ತಮ್ಮ “ಮೋನಿಫಿಕ್ಸ್‌ ಸ್ಟುಡಿಯೋಸ್‌’ ಮೂಲಕ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.