ʼToxicʼನಲ್ಲಿ ಯಶ್ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?
Team Udayavani, Mar 27, 2024, 6:31 PM IST
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ʼಟಾಕ್ಸಿಕ್ʼ ಸಿನಿಮಾದಲ್ಲಿ ನಟಿಸುವವರ ಕಲಾವಿದರ ಹೆಸರು ದಿನ ಕಳೆದಂತೆ ಹೆಚ್ಚಾಗುತ್ತಿದೆ.
ಬಿಟೌನ್ ಬೆಡಗಿ ಕರೀನಾ ಕಪೂರ್ ಅವರು ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆ ಮೂಲಕ ಸ್ಯಾಂಡಲ್ ವುಡ್ ಎಂಟ್ರಿ ಆಗಲಿದ್ದಾರೆ ಎನ್ನುವ ಸುದ್ದಿ ಅಧಿಕೃತವಾಗಿಲ್ಲದಿದ್ರೂ, ಸಿನಿವಲಯದಲ್ಲಿಈಗಲೂ ಟ್ರೆಂಡಿಂಗ್ ವಿಚಾರವಾಗಿ ಹರಿದಾಡುತ್ತಿದೆ.
“ನಾನೀಗ ಹೇಳಿದಂತೆ ನಾನು ದೊಡ್ಡ ಸೌತ್ ಚಿತ್ರ ಮಾಡುತ್ತಿರಬಹುದು. ಈಗ ಅದು ಪ್ಯಾನ್ ಇಂಡಿಯಾ ಆಗಿದೆ ಮತ್ತು ನಾನು ಎಲ್ಲಿ ಶೂಟಿಂಗ್ ಮಾಡುತ್ತೇನೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಇದನ್ನು ಮಾಡುತ್ತಿರುವುದು ಮೊದಲು ಎಂದು ಹೇಳುವುದಕ್ಕೆ ತುಂಬಾ ಉತ್ಸುಕನಾಗಿದ್ದೇನೆ” ಎಂದು ಫ್ಯಾನ್ಸ್ ಗಳ ಜೊತೆಗಿನ ಮೀಟ್ ನಲ್ಲಿ ಇತ್ತೀಚೆಗೆ ಕರೀನಾ ಹೇಳಿದ್ದರು.
ಇದನ್ನೂ ಓದಿ: ಹುಡುಗರು ಸಿದ್ಧರಿಲ್ಲ, ಅಂಕಲ್ಸ್ ಆದ್ರೂ ಓಕೆ: ನನ್ನ ತಾಯಿಗೆ 2ನೇ ಮದುವೆ ಮಾಡಬೇಕೆಂದ ನಟಿ
ಸಿನಿಮಾದಲ್ಲಿ ಕರೀನಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇದೀಗ ಈ ಬಗ್ಗೆ ಲೇಟೆಸ್ಟ್ ಅಪ್ಡೇಟ್ ವೊಂದು ಹೊರಬಿದ್ದಿದೆ.
ಕರೀನಾ ಕಪೂರ್ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿಲ್ಲ. ಅಂದರೆ ಯಶ್ ಜೊತೆ ರೊಮ್ಯಾಂಟಿಕ್ ಆಗಿ ಅವರು ಕಾಣಸಿಕೊಳ್ಳುತ್ತಿಲ್ಲ. ಸಿನಿಮಾದಲ್ಲಿ ಯಶ್ ಸಹೋದರಿಯ ಪಾತ್ರವನ್ನು ಕರೀನಾ ಮಾಡಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ.
ಕರೀನಾ ಹಿಂದೆಂದೂ ಕಾಣಿಸಿಕೊಳ್ಳದ ಪವರ್ ಫುಲ್ ಪಾತ್ರದಲ್ಲಿ ʼಟಾಕ್ಸಿಕ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಸಾಯಿ ಪಲ್ಲವಿ ಅಥವಾ ಶ್ರುತಿ ಹಾಸನ್ ಪ್ರಮುಖ ಪಾತ್ರದಲ್ಲಿ ನಟಿಸಬಹುದು ಎನ್ನಲಾಗಿದೆ.
ಕೆವಿಎನ್ ಪ್ರೊಡಕ್ಷನ್ ಅಡಿಯಲ್ಲಿ ವೆಂಕಟ್ ಕೆ ನಾರಾಯಣ್ ʼಟಾಕ್ಸಿಕ್ʼ ನಿರ್ಮಾಣ ಮಾಡಲಿದ್ದು, 2025 ರ ಏ.10 ರಂದು ಸಿನಿಮಾ ರಿಲೀಸ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್ ಟೀಸರ್ ಔಟ್
MUST WATCH
ಹೊಸ ಸೇರ್ಪಡೆ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ